ಆಶ್ರಯ ಮನೆ ಯೋಜನೆಗಳಿಗೆ ತಡೆ ಹಾಕುತ್ತಿದ್ದಾರಾ ಶಾಸಕ ರಾಮದಾಸ್
ಮೈಸೂರು, ಫೆಬ್ರವರಿ 06: ನಾನು ಶಾಸಕನಾಗಿದ್ದ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವರಾಗಿದ್ದ ಅಂಬರೀಷ್, ಕೃಷ್ಣಪ್ಪ ಇವರುಗಳಿಗೆ ಒತ್ತಡ ಹಾಕಿ ಮನೆಗಳನ್ನು ಕಟ್ಟಿಸಲು ಬೇಕಾದ ಜಮೀನುಗಳನ್ನು ಮೂಡಾದಿಂದ ಸತತ ಹೋರಾಟ ಮಾಡಿ ತಂದಿದ್ದೆ, ಆದರೆ ಆಶ್ರಯ ಮನೆ ಯೋಜನೆ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಯೋಜನೆಗಳಿಗೆ ತಡೆಯೊಡ್ಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಬಡವರ ಮೇಲೆ ಗದಾ ಪ್ರಹಾರ ಮಾಡುತ್ತಿದ್ದಾರೆಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸೋಮಶೇಖರ್, ಓರ್ವ ಶಾಸಕನಾಗಿ ಅನಾಗರೀಕರಾಗಿ ವರ್ತಿಸಿ, ಸ್ವಲ್ಪವೂ ಮಾನವೀಯತೆ ಇಲ್ಲದೆ ಬದುಕಿಗಾಗಿ ಕಷ್ಟಪಡುತ್ತಿರುವ ಬಡವರ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.
ನಾನು ಶ್ರಮವಹಿಸಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಈ ಮನೆಗಳಿಗೆ ಬೇಕಾದ ಜಮೀನನ್ನು ಮೂಡಾ ಪ್ರಾಧಿಕಾರದಿಂದ ಎಲ್ಲ ಸದಸ್ಯರ ಮನವೊಲಿಸಿ ಮಳಲವಾಡಿಯಲ್ಲಿ 3.5 ಎಕರೆ ಜಮೀನು, ವಿಶ್ವೇಶ್ವರ ನಗರದಲ್ಲಿ 1.5 ಎಕರೆ ಜಮೀನು ಪಡೆದು ಮಳಲವಾಡಿಯಲ್ಲಿ 1344, ವಿಶ್ವೇಶ್ವರ ನಗರದಲ್ಲಿ 868, ಒಟ್ಟು 2212ಮನೆಗಳು, ಕೊಳಚೆ ನಿರ್ಮೂಲನಾ ಮಂಡಳಿಯಿಂದ ಈ ಎರಡು ಯೋಜನೆಗಳಿಗೆ ಹಣ ಬಿಡುಗಡೆಯಾಗಿ ಕೆಲಸದ ಟೆಂಡರ್ ಮುಗಿದು, ಗುತ್ತಿಗೆದಾರರು ಮನೆ ಕಟ್ಟಲು ಬಂದಿರುವಾಗ ಅವರಿಗೆ ಬೆದರಿಕೆ ಹಾಕಿ ಕೆಲಸ ಪ್ರಾರಂಭವಾಗದಂತೆ ಶಾಸಕ ರಾಮದಾಸ್ ತಡೆದಿದ್ದಾರೆಂದು ಆರೋಪಿಸಿದರು.

ನಾನು ಮೂರು ವರ್ಷಗಳ ಕಾಲ ಸತತ ಹೋರಾಟ ನಡೆಸಿ 13.8 ಎಕರೆ ಜಮೀನಿಗೆ ಮೂಡಾ ಪ್ರಾಧಿಕಾರಕ್ಕೆ 7 ಕೋಟಿ ರುಪಾಯಿ ಹಣವನ್ನು ಸರ್ಕಾರದಿಂದ ಕಟ್ಟಿಸಿ ಲಲಿತಾದ್ರಿಪುರದ ಜಮೀನನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿ ಆಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಿಂದ ಅನುಮತಿಯಾಗಿರುವ 3084 ಮನೆಗಳಲ್ಲಿ ಲಲಿತಾದ್ರಿಪುರದಲ್ಲಿ 1440 ಮನೆಗಳು, ಗೊರೂರಿನಲ್ಲಿ 1644ಮನೆಗಳು, ಒಟ್ಟು 3084 ಆಶ್ರಯ ಮನೆಗಳಿವೆ.
ನಾನು ಮಾಡಿದ ಹಲವಾರು ಯೋಜನೆಯ ಎಲ್ಲಾ ಕೆಲಸಗಳು ಇಂದಿಗೂ ಮುಂದುವರಿಯುತ್ತಿದೆ. ಉದಾಹರಣೆಗೆ ವಿದ್ಯಾರಣ್ಯರಂ 16ನೇ ಮುಖ್ಯ ರಸ್ತೆ ಮತ್ತು ಎಲ್ಲಾ ರಸ್ತೆಯ ಮರು ನವೀಕರಣದ ಕೆಲಸ ಹಾಗೂ 4.5 ಕೋಟಿ ವೆಚ್ಚದಲ್ಲಿ ದೊಡ್ಡ ಮೋರಿಯಲ್ಲಿ ಹರಿಯುತ್ತಿದ್ದ ಒಳಚರಂಡಿ ನೀರನ್ನು ತಪ್ಪಿಸಿಹೊಸ ದೊಡ್ಡ ಪೈಪ್ ಅಳವಡಿಸಿ ಮಾಡುತ್ತಿರುವ ಕೆಲಸ, ಇನ್ನೂ ಹಲವಾರು ನಾನು ಮಾಡಿದ ಕೆಲಸವನ್ನೇ ಇವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಆದರೆ ಈ ಬಡವರ ಒಂದು ಸೂರು ಕಟ್ಟಿಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿ ಅವರನ್ನು ಬೀದಿಗೆ ಬೀಳುವಂತೆ ಮಾಡುವ ಈ ಕ್ರೂರತ್ವ ಏಕೆ? ಇನ್ನು ಹದಿನೈದು ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿಲ್ಲವೆಂದರೆ ಮುಂದಿನ ಹೋರಾಟ ಉಗ್ರರೂಪ ತಾಳುತ್ತದೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಎಚ್ಚರಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications