KRS Dam Water Level: ಕೆಆರ್ಎಸ್ ಆಣೆಕಟ್ಟು ಭರ್ತಿ, ಇಂದಿನ ನೀರಿನ ಮಟ್ಟ ಒಳಹರಿವು ಮಾಹಿತಿ
ಮೈಸೂರು, ಜೂನ್ 19: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದ್ದು, ಮುಂದಿನ ಒಂದು ವಾರ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಈಗಾಗಲೇ ಬಂದ ದಾಖಲಾದ ಮಳೆಯ ಕಾರಣಕ್ಕೆ ಕೃಷ್ಣ ರಾಜ ಸಾಗರ (KRS) ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ನಿತ್ಯವು ಏರಿಕೆ ಆಗುತ್ತಲೇ ಇದೆ.
ಕಾವೇರಿ ಮತ್ತು ಕೆಆರ್ಎಸ್ ಜಲಾನಯನ ಪ್ರದೇಶ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸುರಿದ ಭಾರೀ ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮಾ ಕೆಆರ್ಎಸ್ ಸೇರಿದಂತೆ ವಿವಿಧ ಆಣೆಕಟ್ಟುಗಳು ಭರ್ತಿಯಾಗಿವೆ. ಒಳಹರಿವಿನ ಜೊತೆಗೆ ಹೊರಹರಿವಿನ ಪ್ರಮಾಣ, ನೀರಿನ ಸಂಗ್ರಹದ ಮಟ್ಟ ಏರಿಕೆ ಆಗಿದೆ.

ಇಂದು ಜೂನ್ 19ರಂದು ಬುಧವಾರ ಕೃಷ್ಣ ರಾಜ ಸಾಗರದಲ್ಲಿ ನೀರನ ಮಟ್ಟ ನೋಡುವುದಾದರೆ, ಒಳಹರಿವು 1209 ಕ್ಯೂಸೆಕ್ ಹೆಚ್ಚಾಗಿದೆ. ಒಟ್ಟು ಸಾಮರ್ಥ್ಯದಲ್ಲಿ 49.452 ಟಿಎಂಸಿ ಇದೆ. ಇಂದಿನ ನೀರಿನ ಸಂಗ್ರಹಣೆ ಶೇಕಡಾ 29.10ರಷ್ಟಿದೆ.
ಇನ್ನೂ ಕೆಆರ್ಎಸ್ ಜಲಾಶಯದಲ್ಲಿ ಹೊರಹರಿವು ಇಂದು ತುಸು ಏರಿಕೆ ಆಗಿದೆ. ಒಟ್ಟು 466 ಕ್ಯೂಸೆಕ್ ನೀರು ಹೊರ ಬೀಡಲಾಗಿದೆ. ಈ ಪೈಕಿ ಕಾಲುವೆಗೆ 50 ಕ್ಯೂಸೆಕ್, ಕಾವೇರಿ ನದಿಗೆ 416 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ.
ವಿವಿಧ ಆಣೆಕಟ್ಟುಗಳ ಮಾಹಿತಿ
ಇದೇ ರೀತಿ ಕಬಿನಿ, ಆಲಮಟ್ಟಿ, ಹಾರಂಗಿ, ಭದ್ರಾ ಆಣೆಕಟ್ಟು ಸೇರಿದಂತೆ ಇನ್ನಿತರ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ. ಈ ಪೈಕಿ ಹೇಮಾವತಿ 622 ಕ್ಯೂಸೆಕ್ ಒಳಹರಿವು, ಕಬಿನಿ 594 ಕ್ಯೂಸೆಕ್ ಒಳಹರಿವು, ಹಾರಂಗಿ 319 ಕ್ಯೂಸೆಕ್ ಒಳಹರಿವು ಏರಿಕೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮಾಹಿತಿ ನೀಡಿದೆ.
ಮುಂದಿನ ಐದು ಭಾರೀ ಮಳೆ ಎಚ್ಚರಿಕೆ
ಮುಂದಿನ ಐದು ದಿನ ರಾಜ್ಯದಲ್ಲಿ ಅತ್ಯಧಿಕ ಮಳೆ ಆಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಹಗುರದಿಂದ ಸಾಧಾರಣ, ಇನ್ನೂ ಹಲವಡೆ ಭಾರೀ ಮಳೆ ಆಗಲಿದೆ. ಜೂನ್ 24ರಂದು ಎಂಟು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಆಗುವ ಕಾರಣ 'ರೆಡ್ ಅಲರ್ಟ್' ಘೋಷಿಸಲಾಗಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications