KRS and Kabini Dam: ಶತಕ ಬಾರಿಸಿದ ಕೆಆರ್ಎಸ್ ನೀರಿನ ಮಟ್ಟ; ಕಬಿನಿ ಭರ್ತಿಗೆ ಮೂರು ಅಡಿ ಬಾಕಿ
ಕಳೆದ ಒಂದು ವಾರದಿಂದ ಕೊಡಗು ಹಾಗೂ ಕೇರಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು-ಮಂಡ್ಯ-ಬೆಂಗಳೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟು ಮಟ್ಟ 100 ಅಡಿ ತಲುಪಿದ್ದು, ರೈತರಲ್ಲಿ ನಿರಾಳ ಭಾವನೆ ಉಂಟು ಮಾಡಿದೆ.
ಕೇವಲ 2241 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ, ಗುರುವಾರ ಸಂಜೆ ವೇಳೆಗೆ 11,189 ಕ್ಯೂಸೆಕ್ ಹೆಚ್ಚಾಗಿದೆ. ಕನ್ನಂಬಾಡಿ ಕಟ್ಟೆಯ ನೀರಿನ ಮಟ್ಟ 100 ಅಡಿ ದಾಟಿದೆ. ಕೊಡಗು ಜಿಲ್ಲೆ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಭರ್ತಿಯಾಗಿದ್ದು, ನದಿಯಲ್ಲಿ ನೀರು ಹರಿವಿನ ಪ್ರಮಾಣ ಹೆಚ್ಚಾಗಿದೆ.

ಕಳೆದ ವರ್ಷ ಉತ್ತಮ ಮಳೆಯಾಗದೆ ರೈತರು ಬೆಳೆನಷ್ಟ ಅನುಭವಿಸಿದ್ದರು. ಅಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿತ್ತು. ಕರ್ನಾಟಕ-ತಮಿಳುನಾಡು ನೀರಿನ ವ್ಯಾಜ್ಯವೂ ಸಮಸ್ಯೆಯನ್ನು ಮತ್ತಷ್ಟು ಗಟ್ಟಿಯಾಗಿಸಿತ್ತು. ಆದರೆ, ಈ ಬಾರಿ ಉತ್ತಮ ಮಳೆಯಾಗುವ ಲಕ್ಷಣ ಗೋಚರಿಸಿದ್ದು, ನೀರಿನ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವನ್ನು ರೈತರು ವ್ಯಕ್ತಪಡಿಸಿದ್ದಾರೆ.
ಕಬಿನಿ ತುಂಬಲು ಮೂರು ಅಡಿ ಬಾಕಿ
ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇದ್ದು, ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಾಗಿದ್ದು, ಜಲಾಶಯ ಮಟ್ಟ 2281 ಅಡಿಗೆ ಏರಿದೆ. ಜಲಾಶಯಕ್ಕೆ 7300 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದ ಮುಂದಿರುವ ಸುಭಾಷ್ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನದಿಗೆ ಬಿಡಲಾಗುತ್ತಿದೆ.
ಕಳೆದ 10 ವರ್ಷಗಳಲ್ಲಿ ಜುಲೈ ಮೊದಲ ವಾರದಲ್ಲಿ ಜಲಾಶಯ ಭರ್ತಿಯಾಗುತ್ತಿರುವುದು ಇದು ಎರಡನೇ ಬಾರಿ. 2020 ರಲ್ಲಿ ಜುಲೈ 4 ರಂದೇ ಜಲಾಶಯ ಭರ್ತಿಯಾಗಿತ್ತು. ಜಲಾಶಯದ ಸಾಮರ್ಥ್ಯ 19.52 ಟಿ.ಎಂ.ಸಿ ಆಗಿದ್ದು, ಸದ್ಯಕ್ಕೆ ಜಲಾಶಯದಲ್ಲಿ 17.50 ಟಿಎಂಸಿ ನೀರು ಇದೆ. ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಕುಡಿಯುವ ನೀರನ್ನು ಕೊಡಬೇಕಾಗಿರುವುದರಿಂದ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಂಬಾಕು ಬೆಳೆಗೆ ಸಂಜೀವಿನಿ ಮಳೆ ಇಲ್ಲದೆ ಸೊರಗುತ್ತಿದ್ದ ತಂಬಾಕು ಬೆಳೆಗೆ ಈ ಮಳೆಯು ಸಂಜೀವಿನಿಯಂತಾಗಿದೆ. ಇದರಿಂದ ತಂಬಾಕು ಹಾಗೂ ಶುಂಠಿ ಬೆಳೆಗಾರರು ಹರ್ಷಗೊಂಡಿದ್ದಾರೆ. ಇದೇ ರೀತಿ ಮಳೆ ಮುಂದುವರಿದಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಕೊಳೆಯುವ ಭೀತಿಯೂ ಎದುರಾಗಿದೆ ಎನ್ನುತ್ತಾರೆ ರೈತರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications