ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕೆ.ಎಸ್ ಭಗವಾನ್
ಮೈಸೂರು, ಜನವರಿ 9: ಪ್ರತಿ ಬಾರಿ ಬಿಜೆಪಿ ನಾಯಕರು, ಬಿಜೆಪಿ ಸಿದ್ಧಾಂತಗಳ ವಿರುದ್ಧ ವಾಗ್ದಾಳಿ ನಡೆಸುವ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರು ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು.
ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವಂತೆ ಆಗ್ರಹಿಸುವ ಸಲುವಾಗಿ ಸಚಿವ ಸೋಮಶೇಖರ್ ಅವರನ್ನು ಭೇಟಿ ಮಾಡಲು ನೇರವಾಗಿ ಮೈಸೂರಿನ ಬಿಜೆಪಿ ಕಚೇರಿಗೆ ತೆರಳಿದ ಪ್ರೊ.ಭಗವಾನ್, ಸಚಿವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು.
ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿ ಸದಸ್ಯರೊಂದಿಗೆ ಕಳೆದ ರಾತ್ರಿ ಬಿಜೆಪಿ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಭಗವಾನಗ ಹಾಗೂ ಇತರರು ಭೇಟಿ ಮಾಡಿದರು. ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿಯು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವಂತೆ ಹೋರಾಟ ನಡೆಸುತ್ತಿದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಹೊಸ ಶೈಕ್ಷಣಿಕ ನೀತಿಗಳು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೆಲವು ನೀತಿಗಳು ಈ ಅಧ್ಯಯನ ಕೇಂದ್ರಕ್ಕೆ ಸಂಚು ತರುತ್ತಿವೆ. ಈ ಕೇಂದ್ರವನ್ನು ಶಾಶ್ವತವಾಗಿ ಮುಚ್ಚುವ ಪ್ರಕ್ರಿಯೆಗಳು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವುದು ತಿಳಿದು ಬಂದಿದೆ. ಆದ್ದರಿಂದ ಕೂಡಲೇ ಈ ಅಧ್ಯಯನ ಕೇಂದ್ರವನ್ನು ಸ್ವಾಯತ್ತತೆ ನೀಡುವಂತೆ ಆಗ್ರಹಿಸಿದರು.

ಸಚಿವ ಎಸ್.ಟಿ ಸೋಮಶೇರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿ ಸದಸ್ಯರು, ಈ ಭೇಟಿ ವೇಳೆಯಲ್ಲಿ ಹಿರಿಯ ಹೋರಾಟಗರ ಪ.ಮಲ್ಲೇಶ್, ನಾ. ದಿವಾಕರ್, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು, ಮೂಗೂರು ನಂಜುಂಡಸ್ವಾಮಿ ಸೇರಿದಂತೆ ಇನ್ನಿತರ ಸಮಿತಿ ಸದಸ್ಯರ ಇದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications