ಸ್ವಾತಂತ್ರ್ಯೋತ್ಸವಕ್ಕೆ ಆಫರ್ : ಮೈಸೂರು ಸಿಲ್ಕ್ ಗೆ ಶೇ 50 ರಿಯಾಯಿತಿ
ಮೈಸೂರು, ಆಗಸ್ಟ್ 13 : ಕರ್ನಾಟಕ ರಾಜ್ಯ ರೇಷ್ಮೆ ಕೈಗಾರಿಕಾ ನಿಗಮವು(ಕೆಎಸ್ ಐಸಿ) ಸ್ವಾತಂತ್ರ್ಯೋತ್ಸಕ್ಕೆ ಶೇ 50ರಷ್ಟು ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ಮಾರಾಟಕ್ಕೆ ಮುಂದಾಗಿದೆ.
ಆಗಸ್ಟ್ 15ರಂದು 9,000 ರುಪಾಯಿ ಮೌಲ್ಯದ ರೇಷ್ಮೆ ಸೀರೆಗಳನ್ನು ಶೇ 50ರಷ್ಟು ರಿಯಾಯಿತಿ ದರಕ್ಕೆ, ಅಂದರೆ 4,500 ರುಪಾಯಿಗೆ ಮಾರಲು ನಿಗಮ ಮುಂದಾಗಿದೆ. ಮೈಸೂರು, ಬೆಂಗಳೂರಿನಲ್ಲಿರುವ ಕೆಎಸ್ ಐಸಿಯ2 ಮಾರಾಟ ಕೇಂದ್ರಗಳು, ಚನ್ನಪಟ್ಟಣ ಮತ್ತು ದಾವಣಗೆರೆಯ ತಲಾ ಒಂದು ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳು ದೊರೆಯಲಿವೆ.
ಹೀಗೆ ರಿಯಾಯಿತಿ ಮಾರಾಟದ ಉದ್ದೇಶಕ್ಕಾಗಿ 10 ಸಾವಿರ ಸೀರೆಗಳನ್ನು ತಯಾರಿಸಲಾಗಿದೆ. ಈ ದಾಸ್ತಾನು ಇರುವವರೆಗೂ ಮಾರಾಟ ಇರುತ್ತದೆ. ಸಾಮಾನ್ಯ ದಿನಗಳಲ್ಲಿ ರೇಷ್ಮೆ ಸೀರೆಗಳಿಗೆ ಶೇಕಡಾ 15ರಿಂದ 30ರವರೆಗೆ ರಿಯಾಯಿತಿ ನೀಡಲಾಗುತ್ತದೆ. ಆದರೆ ಈಗ ಸ್ವಾತಂತ್ರ್ಯೋತ್ಸವದ ಕೊಡುಗೆಯಾಗಿ ಶೇ 50ರ ರಿಯಾಯಿತಿ ಬೆಲೆಯಲ್ಲಿ ಸೀರೆಗಳನ್ನು ಮಾರಾಟ ಮಾಡಲು ನಿಗಮ ನಿರ್ಧರಿಸಿದೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ
ಆಗಸ್ಟ್ 21ರಂದು ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮತ್ತೆ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳ ಮಾರಾಟ ಮಾಡಲಾಗುತ್ತದೆ. ಆ ವೇಳೆಗೆ 15,000 ರುಪಾಯಿಯ ರೇಷ್ಮೆ ಸೀರೆಗಳನ್ನು 4,500 ರುಪಾಯಿಗೆ ಮಾರಾಟ ಮಾಡಲಾಗುವುದು ಎಂದು ಈಗಾಗಲೇ ಕರ್ನಾಟ ಕರಾಜ್ಯ ರೇಷ್ಮೆ ಕೈಗಾರಿಕಾ ನಿಗಮ(ಕೆಎಸ್ ಐಸಿ ) ತಿಳಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications