ಹುತಾತ್ಮ ಯೋಧ ಗುರು ಪತ್ನಿಗೆ ಕೆಎಸ್ಓಯುನಿಂದ ಉಚಿತ ಶಿಕ್ಷಣ
ಮೈಸೂರು, ಮಾರ್ಚ್ 2 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಮಡಿದ ಯೋಧ ಗುರು ಅವರ ಪತ್ನಿ ಕಲಾವತಿಗೆ ಉಚಿತ ಶಿಕ್ಷಣ ನೀಡಲು ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಮುಂದಾಗಿದೆ.
ಈ ಕುರಿತಾಗಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ, ಹುತಾತ್ಮ ಯೋಧ ಗುರು ಎಚ್ ಅವರ ಮಡದಿ ಕಲಾವತಿ ಕೆಎಸ್ಒಯು ರಾಮನಗರ ಪ್ರಾದೇಶಿಕ ಕೇಂದ್ರದ ಮೂಲಕ ಪ್ರಥಮ ವರ್ಷದ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.
ಸುಮ್ಮನೆ ಗಾಸಿಪ್ ಹಬ್ಬಿಸಬೇಡಿ:ಯೋಧ ಗುರು ಪತ್ನಿ ಕಲಾವತಿ ಮನವಿ
ವಿದ್ಯಾಭ್ಯಾಸ ಮುಂದುವರೆಸಲು ಅವರಿಗಿರುವ ಆಸಕ್ತಿಯನ್ನು ಮನಗಂಡು ಕೆಎಸ್ಒಯು ಅವರಿಂದ ಯಾವುದೇ ಶುಲ್ಕ ಪಡೆಯದೇ ಉಚಿತ ಶಿಕ್ಷಣ ನೀಡಲು ಉದ್ದೇಶಿಸಿದೆ. ಈ ಸಂಬಂಧ ಮುಂದಿನ ವ್ಯವಸ್ಥಾಪನಾ ಮಂಡಳಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ ಎಂದರು.
ಮುಕ್ತ ವಿವಿ ಘಟಿಕೋತ್ಸವಕ್ಕೆ ಸಿದ್ಧತೆ : ಯುಜಿಸಿ ಮಾನ್ಯತೆ ಸಮಸ್ಯೆ ಕಾರಣ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಮಾ. 5 ರಂದು ನಡೆಯಲಿದೆ.
ನಾನೂ ಸೇನೆಗೆ ಸೇರಿ ಉಗ್ರರ ರುಂಡ ಚೆಂಡಾಡುತ್ತೇನೆ:ಹುತಾತ್ಮ ಗುರು ಪತ್ನಿ ಕಲಾವತಿ
ಅಂದು ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ 16 ನೇ ಘಟಿಕೋತ್ಸವ ಆಯೋಜಿಸಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ,ದೇವೇಗೌಡ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡುವರು. ಸಮಾರಂಭದ ಮುಖ್ಯ ಅತಿಥಿಯಾಗಿ ನ್ಯಾಕ್ ಸಂಸ್ಥೆ ನಿರ್ದೇಶಕ ಪ್ರೊ.ಎಸ್.ಸಿ,ಶರ್ಮ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು ಎಂದರು.
ಯುಜಿಸಿ2018-19 ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮಾನ್ಯತೆ ಮಂಜೂರು ಮಾಡಿದೆ. ಆದ್ದರಿಂದ 2012-13 ಮತ್ತು ಹಿಂದಿನ ವರ್ಷಗಳಲ್ಲಿ ಪ್ರವೇಶ ಹೊಂದಿ ಅಂತರಗೃಹ ಕಾರ್ಯಕ್ರಮಗಳಲ್ಲಿ ಪದವಿ ಪರೀಕ್ಷೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ.
ಮುಕ್ತ ವಿವಿ ಬಗ್ಗೆ ಬಹಿರಂಗವಾಗಿಯೇ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು
ಈ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಒಟ್ಟು 17,512 ವಿದ್ಯಾರ್ಥಿಗಳು ಅರ್ಹರಾಗಿದ್ದು, ಅವರಲ್ಲಿ 5,364 ಪುರುಷರು ಹಾಗೂ 12,148 ಮಂದಿ ಮಹಿಳಾ ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದರು.