ಮುಂದಿನ ಐದು ವರ್ಷದವರೆಗೆ ಕೆಎಸ್ ಒಯುಗೆ ಮಾನ್ಯತೆ
ಮೈಸೂರು, ಜುಲೈ 23: "ಕೆಎಸ್ ಒಯು ಮುಂದಿನ ಐದು ವರ್ಷಗಳವರೆಗೆ ವಿಶ್ವವಿದ್ಯಾಲಯ ಯುಜಿಸಿ ನಿಯಮಾವಳಿ ಅನ್ವಯ ಅನುಮತಿ ಪಡೆದುಕೊಂಡಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪ್ರವೇಶ ಪಡೆದುಕೊಳ್ಳಬಹುದು" ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈಗಾಗಲೇ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2017ರಿಂದ 2023ರವರೆಗೆ ಮಾನ್ಯತೆ ಪಡೆದಿದ್ದು, ವಿದ್ಯಾರ್ಥಿಗಳು ಆತಂಕವಿಲ್ಲದೇ ಪ್ರವೇಶ ಪಡೆಯಬಹುದು. ದೇಶದ ಶೇ 50ಕ್ಕೂ ಹೆಚ್ಚು ಯುವಜನರು ಪದವಿ ಪೂರ್ಣಗೊಳಿಸಬೇಕು ಎಂಬ ಕೇಂದ್ರ ಸರ್ಕಾರದ ಉದ್ದೇಶಕ್ಕೆ ನಮ್ಮ ವಿಶ್ವವಿದ್ಯಾಲಯ ಎಲ್ಲಾ ರೀತಿಯಲ್ಲೂ ನೆರವಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಸ್ತುತ 51 ವಿವಿಧ ಕೋರ್ಸ್ ಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಬಹುದು" ಎಂದರು.
"ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದಲ್ಲಿ ಹಲವು ಸಮಸ್ಯೆಗಳಿದ್ದು, ವಾರಕ್ಕೊಮ್ಮೆ ಸಪ್ತಾಹದ ಮೂಲಕ ಕಡತ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ನಾನು ಅಧಿಕಾರ ವಹಿಸಿಕೊಂಡ ನಂತರ 1,500 ಪ್ರಕರಣ ಇತ್ಯರ್ಥಗೊಳಿಸಿದ್ದು, 4 ಸಾವಿರ ಕಡತ ಬಾಕಿ ಉಳಿದಿವೆ. ಪರೀಕ್ಷಾ ವಿಭಾಗದಲ್ಲಿ ಸಮಸ್ಯೆ ಉಳಿಯದಂತೆ ನೋಡಿಕೊಳ್ಳಲು ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಲಾಗುವುದು" ಎಂದು ತಿಳಿಸಿದರು.

2019-20ನೇ ಸಾಲಿನಲ್ಲಿ ಪದವಿ ಪ್ರವೇಶಕ್ಕೆ ಜುಲೈ 25 ಕೊನೆಯ ದಿನವಾಗಿದೆ. ಆ. 21ರವರೆಗೆ 200 ರೂ ದಂಡ ಹಾಗೂ ಆ. 31ರವರೆಗೆ 400 ರೂ ದಂಡ ಸಹಿತ ಪ್ರವೇಶಾತಿಗೆ ಅವಕಾಶ ನೀಡಲಾಗಿದೆ. ಪ್ರಸಕ್ತ ವರ್ಷ 25 ಸಾವಿರ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯಕ್ಕೆ ಪ್ರವೇಶ ಮಾಡುವ ಗುರಿಯನ್ನು ಹೊಂದಲಾಗಿದೆ. ಪದವಿಗೆ ನೇರ ಹಾಗೂ ಆನ್ಲೈನ್ ಮೂಲಕ ಪ್ರವೇಶಕ್ಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ.
"ಮುಕ್ತ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ 500 ರೂ ಶುಲ್ಕದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ಪ್ರಾದೇಶಿಕ ಕೇಂದ್ರಗಳಲ್ಲಿ ಆರಂಭಿಸುವ ಯೋಜನೆಯಿದೆ. ಎಲ್ಲಾ ಪ್ರಾದೇಶಿಕ ಕಚೇರಿಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲಾಗಿದೆ. ದೂರಶಿಕ್ಷಣ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಲೇಸ್ ಮೆಂಟ್ ವಿಭಾಗ ರಚಿಸಲಾಗಿದ್ದು, ವಿಶೇಷ ಅಧಿಕಾರಿ ನೇಮಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ವಿಶ್ವಾಸ ಹೆಚ್ಚುವುದರ ಜೊತೆಗೆ ಪ್ರವೇಶಾತಿ ಹೆಚ್ಚಳವಾಗುವ ನಿರೀಕ್ಷೆಯಿದೆ" ಎಂದು ತಿಳಿಸಿದರು.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications