ಮೈದುಂಬಿದ ಹಾರಂಗಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
Recommended Video

ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಚ್ ಡಿ ಕುಮಾರಸ್ವಾಮಿ ದಂಪತಿ | Oneindia Kannada
ಮೈಸೂರು, ಜುಲೈ.19: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿ ಸಮೇತವಾಗಿ ಗುರುವಾರ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು ಕೊಡಗಿನ ಮಳೆಹಾನಿ ಪರಿಸ್ಥಿತಿ ತಿಳಿದು ಸ್ಪಂದಿಸಲು ಬಂದಿದ್ದೇನೆ. ಮೂವತೈದು ವರ್ಷಗಳ ಬಳಿಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.
ಜಿಲ್ಲೆಯ ಜಲಾಶಯ, ಜಲಪಾತಗಳು ಉಕ್ಕಿ ಹರಿಯುತ್ತಿವೆ. ಆದರೆ ಮಳೆಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿರೋದು ತಿಳಿದಿದೆ. ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದರು.
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಡಿಕೆ ತಿಳಿಸಿದರು.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಡಿ. ರೇವಣ್ಣ, ಸಾ.ರಾ. ಮಹೇಶ್, ಶಾಸಕ ಕೆ.ಜಿ. ಬೋಪಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications