ಕೆಆರ್ ಎಸ್ ಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ
ಮೈಸೂರು, ಜುಲೈ.20: ಕೆಆರ್ ಎಸ್ ನಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಾಗಿನ ಅರ್ಪಿಸಿದರು. ಜಲಾಶಯದ ಬಳಿ ಬಾಗಿನಗಳಿಗೆ ಪೂಜಾ ಕೈಂಕರ್ಯ ಕೈಗೊಳ್ಳಲಾಯಿತು. ಪುರೋಹಿತ ಡಾ. ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆಯಿತು.
4.20ಕ್ಕೆ ಬಾಗಿನ ಸಮರ್ಪಣೆ ಮಾಡಿದ ಸಿಎಂ, ಕಾಲ್ನಡಿಗೆಯಲ್ಲೇ ಸಂಚರಿಸಿ ಡ್ಯಾಂ ವೀಕ್ಷಣೆ ಮಾಡಿದರು. ಸಿಎಂ ಎಚ್.ಡಿ.ಕೆ ಗೆ ಪತ್ನಿ ಅನಿತಾ, ಸಚಿವರಾದ ಡಿ.ಕೆ.ಶಿವಕುಮಾರ್, ಸಿ.ಎಸ್.ಪುಟ್ಟರಾಜು ಸಾಥ್ ನೀಡಿದರು.
ಡ್ಯಾಂ ಮೇಲಿಂದಲೇ ಜನರತ್ತ ಎಚ್ ಡಿಕೆ, ಡಿಕೆಶಿ ಕೈ ಬೀಸಿದರು. ಈ ವೇಳೆ ಪೂಜಾ ಕುಣಿತ, ಪಟದ ಕುಣಿತ, ವಿವಿಧ ಜಾನಪದ ಕಲಾ ತಂಡಗಳು, ಮಂಗಳವಾಧ್ಯ, ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣ ಕುಂಭ ಹೊತ್ತು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಬಾಗಿನ ಸಲ್ಲಿಕೆ ಬಳಿಕ ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.
ರಾಜ್ಯದಲ್ಲಿ ಹಲವು ವರ್ಷಗಳಿಂದ ಮಳೆಯೇ ಆಗಿರಲಿಲ್ಲ. ಇದೀಗ ರಾಜ್ಯದಲ್ಲಿ ನಾಲ್ಕು ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಬಾಗಿನ ಅರ್ಪಣೆ ಮಾಡಲು ಬಂದಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ಜಲಾಶಯಗಳು ಭರ್ತಿಯಾದ ವೇಳೆ ಬಾಗಿನ ಅರ್ಪಣೆ ಮಾಡುವುದು ಹಿಂದಿನಿಂದಲೂ ಪ್ರತೀತಿ. ನಿನ್ನೆ ಗುರುವಾರ ಹಾರಂಗಿಯಲ್ಲಿ ಬಾಗಿನ ಆರ್ಪಣೆ ಮಾಡಿದ್ದೇವೆ. ಇಂದು ಶುಕ್ರವಾರ ಕೆಆರ್ ಎಸ್ ಗೆ ಅರ್ಪಣೆ ಮಾಡಿದೆ. ನಂತರ ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡುತ್ತೇವೆ ಎಂದರು.
ನಮ್ಮ ಸಚಿವ ಸಂಪುಟದ ಕೆಲವು ಸಚಿವರುಗಳ ಸಹ ಬಾಗಿನ ಅರ್ಪಣೆ ಮಾಡಲು ನನ್ನ ಜೊತೆ ಬಂದಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ನಿರಾಕರಿಸಿದ ಅವರು, ನಾನು ಈ ಸಮಯದಲ್ಲಿ ರಾಜಕೀಯ ವಿಚಾರಗಳಿಗೆ ಉತ್ತರಿಸುವುದಿಲ್ಲ ಎಂದರು.
ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
ಬೆಳಗ್ಗೆ ನಾಡ ಅಧಿದೇವತೆ ದರ್ಶನಕ್ಕೆ ಆಗಮಿಸಿದ ಸಿಎಂ ಅವರನ್ನು ಚಾಮುಂಡಿ ಬೆಟ್ಟದ ಅಡಳಿತ ಮಂಡಳಿ ಪೂರ್ಣ ಕುಂಭ ಹೊತ್ತು ಅದ್ದೂರಿಯಾಗಿ ಸ್ವಾಗತಿಸಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಸಿಎಂ ದಂಪತಿ ಸಮೇತ ಆಗಮಿಸಿದ್ದರು.
ಸಿಎಂಗೆ ಸಚಿವ ಜಿಟಿ.ದೇವೇಗೌಡ, ಡಿ.ಕೆ.ಶಿವಕುಮಾರ್, ಎನ್.ಮಹೇಶ್ ಮತ್ತಿತರರು ಸಾಥ್ ನೀಡಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications