ಲಕ್ಷ್ಮಮ್ಮನ ಸೂರಿನ ಕನಸು ಈಡೇರಿಸುವರೇ ಎಚ್.ಡಿ.ಕುಮಾರಸ್ವಾಮಿ?
ಮೈಸೂರು, ಜುಲೈ 3 : ಎಚ್.ಡಿ. ಕುಮಾರಸ್ವಾಮಿ 2006-07 ರಲ್ಲಿ ಸಿಎಂ ಆಗಿದ್ದಾಗ ಮೈಸೂರಿನಲ್ಲಿರುವ ಲಕ್ಷಮ್ಮ ಎಂಬ ಮಹಿಳೆಯ ಗುಡಿಸಲೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ಗುಡಿಸಲನ್ನು ಮನೆಯಾಗಿ ಪರಿವರ್ತಿಸುವುದಾಗಿ ಆ ಕುಟುಂಬಕ್ಕೆ ಭರವಸೆ ನೀಡಿದ್ದರು.
ಈ ಭರವಸೆಯನ್ನು ನಂಬಿಕೊಂಡು 11 ವರ್ಷದಿಂದ ಕುಮಾರಸ್ವಾಮಿ ಅವರನ್ನೇ ಎದುರು ನೋಡುತ್ತಿದ್ದಾರೆ ಲಕ್ಷಮ್ಮ. ಮೈಸೂರಿನ ಮೇದರ್ ಬ್ಲಾಕ್ ನಲ್ಲಿರುವ ಲಕ್ಷ್ಮಮ್ಮ ಅವರ ಗುಡಿಸಲಿನಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದ ವೇಳೆ ಸೊಪ್ಪಿನ ಸಾರು, ಮುದ್ದೆ ಸವಿದಿದ್ದರಂತೆ.
ತದ ನಂತರ ಬೆಂಗಳೂರಿಗೆ ತೆರಳಿದ್ದ ಕುಮಾರಸ್ವಾಮಿ ಆ ಸಮಯದಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಮತ್ತೆ ಎಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ಬಂದು ನಮ್ಮ ಸಮಸ್ಯೆ ಆಲಿಸುತ್ತಾರೆ, ಇಂದಲ್ಲ, ನಾಳೆ ಮನೆ ಕಟ್ಟಿಸಿಕೊಡುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಲಕ್ಷಮ್ಮ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮಮ್ಮ, ಈಗ ಕುಮಾರಸ್ವಾಮಿ ಮತ್ತೆ ಸಿಎಂ ಆಗಿದ್ದಾರೆ. ಸಿಎಂ ಮೈಸೂರಿಗೆ ಬಂದರು ಸರಿಯೇ ಅಥವಾ ನಾವೇ ಬೆಂಗಳೂರಿಗೆ ತೆರಳಿ ಮನವಿ ಮಾಡುತ್ತೀವಿ ಅವರು ನಮಗೆ ಮೋಸ ಮಾಡುವುದಿಲ್ಲ.
ಕುಮಾರಸ್ವಾಮಿ ಮಲಗಿದ್ದ ಮಂಚ, ಬೆಡ್ ಶೀಟ್ ಅನ್ನು ಇವತ್ತಿಗೂ ಜೋಪಾನ ಮಾಡಿದ್ದೇನೆ ಎಂದು ಭಾವುಕರಾಗಿ ನುಡಿಯುತ್ತಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications