'ನಾನು ಆಸ್ತಿಕನೇ, ನಾಸ್ತಿಕ ಎಂದು ಅಪಪ್ರಚಾರ ಮಾಡುತ್ತಾರೆ'
ಮೈಸೂರು, ಫೆಬ್ರವರಿ 23 : ಟಿ.ನರಸೀಪುರದಲ್ಲಿ ನಡೆಯುತ್ತಿದ್ದ 10ನೇ ವರ್ಷದ ಐತಿಹಾಸಿಕ ಕುಂಭಮೇಳಕ್ಕೆ ತೆರಬಿದ್ದಿದ್ದು, ಕೊನೆಯ ದಿನವಾದ ಸೋಮವಾರ ಹರಚರಗುರುಮೂರ್ತಿಗಳು ಸೇರಿದಂತೆ ಸಹಸ್ರಾರು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸುವುದರೊಂದಿಗೆ ಚಂಡಿ ಹೋಮ, ಪೂರ್ಣಾಹುತಿ ಹಾಗೂ ಪೂಜಾ ಕೈಂಕರ್ಯಗಳು ನಡೆದವು. ಇದೇ ಸಂದರ್ಭ ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ವಿವಿಧ ಮಠಾಧೀಶರು ಮತ್ತು ಗಣ್ಯರು, ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಬಳಿಕ ದೇವಾಲಯಗಳಿಗೆ ಭೇಟಿ ನೀಡಿದರು. [ಮಹಾಕುಂಭಮೇಳದಿಂದ ಕಳೆಗಟ್ಟಿದ ಟಿ. ನರಸೀಪುರ]

ಸೋಮವಾರ ಕುಂಭಮೇಳದ ಸಮಾರೋಪ ಸಮಾರಂಭದ ಧಾರ್ಮಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. 'ನೂತನ ಪ್ರವಾಸೋದ್ಯಮ ನೀತಿಯಂತೆ ತ್ರಿವೇಣಿ ಸಂಗಮ, ಕಾವೇರಿ ನದಿ ಪಾತ್ರಗಳ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ' ಎಂದು ಹೇಳಿದರು.
ತಲಕಾಡು, ಸೋಮನಾಥಪುರ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಹೇಳಿದ ಮುಖ್ಯಮಂತ್ರಿಗಳು, ತ್ರಿವೇಣಿ ಸಂಗಮ, ನರಸೀಪುರ ಎರಡು ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ಅನುದಾನ ನೀಡಿರುವುದಾಗಿ ಹೇಳಿದರು.
ನಾನು ಕೂಡ ಆಸ್ತಿಕನೇ : 'ಅನೇಕರು ಸಿದ್ದರಾಮಯ್ಯ ನಾಸ್ತಿಕ ಎಂದು ಅಪಪ್ರಚಾರ ಮಾಡುತ್ತಾರೆ. ನಾನು ಕೂಡ ಆಸ್ತಿಕನೇ. ನಾನು ನಂಬಿಕೆಯನ್ನು ನಂಬುತ್ತೇನೆ, ಒಳಿತಿನ ಹಿತದೃಷ್ಟಿಯಿಂದ ಇರುವ ನಂಬಿಕೆಗಳಿಗೆ ನಾನು ಬೆಲೆ ಕೊಡುತ್ತೇನೆ. ಮೌಢ್ಯತೆ, ಕಂದಾಚಾರಗಳನ್ನು ನಾನು ನಂಬುವುದಿಲ್ಲ. ಹಿಮಾಲಯಕ್ಕೆ ಹೋಗಿ ದೇವರನ್ನು ಕಾಣಬೇಕೆಂಬುದರಲ್ಲಿ ನನಗೆ ನಂಬಿಕೆ ಇಲ್ಲ' ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಸ್ವಾಮೀಜಿ ಅವರು ಮಾತನಾಡಿ 'ಕಾವೇರಿ, ಕಪಿಲಾ ಸ್ಫಟಿಕ ಸರೋವರಗಳ ಸಂಗಮ ಕ್ಷೇತ್ರ ತಿರುಮಕೂಡಲು ನರಸೀಪುರ ಕುಂಭಮೇಳ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶಾಶ್ವತವಾದ ಯೋಜನೆಗಳನ್ನು ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರು ಅನುಷ್ಠಾನಗೊಳಿಸಬೇಕು' ಎಂದು ಮಾಡಿದರು.
ಲೋಕೋಪಯೋಗಿ ಸಚಿವ ಮಹದೇವಪ್ಪ, ಸಹಕಾರ ಸಚಿವ ಮಹದೇವಪ್ರಸಾದ್, ಚಾಮರಾಜನಗರ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ನರೇಂದ್ರ, ಆರ್.ಧರ್ಮಸೇನಾ, ಎಂ.ಕೆ. ಸೋಮಶೇಖರ್, ಮಾಜಿ ಶಾಸಕ ಎಸ್.ಕೃಷ್ಣಪ್ಪ ಮುಂತಾದವರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications