ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧ ಕುರುಬ ಸಮುದಾಯ ಕೆಂಡಾಮಂಡಲ
ಮೈಸೂರು, ಮಾರ್ಚ್ 5: ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿದ್ದ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೀಸಲಾತಿ ವಿಷಯದ ಕುರಿತು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಹೇಳಿಕೆಯನ್ನು ಖಂಡಿಸಿರುವ ಹಾಲುಮತ ಮಹಾಸಭಾ ನಾಯಕರು, ಎಸ್.ಟಿ ಮೀಸಲಾತಿಯಲ್ಲಿ ಅನ್ಯಾಯವಾಗಿರುವ ಕುರುಬ ಸಮಾಜದ ಪರವಾಗಿ ಧ್ವನಿಯಾಗಬೇಕಾದ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರೇ ಕುರುಬರ ಮೇಲೆ ಯಾಕೆ ಸಿಟ್ಟು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿರುವ ಮುಗ್ಧ, ನಾಚಿಕೆ ಸ್ವಭಾವ ಹಾಗೂ ಬುಡಕಟ್ಟು ಸಂಸ್ಕೃತಿ, ಆಚರಣೆಗಳನ್ನು ಹೊಂದಿರುವ ಕುರುಬ ಸಮಾಜದ 1950ನೇ ಇಸವಿಯಲ್ಲಿನ ಗೆಜೆಟ್ನಲ್ಲಿ ಪ್ರಕಟವಾಗಿರುವ 6 ಜಾತಿಗಳಲ್ಲಿ 2 ಜಾತಿಗಳಾದ ಜೇನು ಕುರುಬ, ಕಾಡು ಕುರುಬ ಜಾತಿಗಳು ಇವೆ. 1977ರಲ್ಲಿ ಕುರುಬ ಜಾತಿಯ 1) ಗೊಂಡ, ರಾಜಗೊಂಡ 2) ಕುರುಮನ್ಸ್ 3) ಕಾಟ್ಟುನಾಯಕನ್ 4) ಕುರುಬ ಎಂಬ ಜಾತಿಗಳು ಸೇರಿ ಒಟ್ಟು 6 ಜಾತಿಗಳು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಹೀಗಾಗಿ ಕುರುಬರು ಹೊಸದಾಗಿ ಎಸ್.ಟಿ ಮೀಸಲಾತಿ ನೀಡಿ ಎಂದು ಬೇಡಿಕೆ ಸಲ್ಲಿಸಿ, ಒತ್ತಾಯಿಸುತ್ತಿಲ್ಲ ಎಂದಿದ್ದಾರೆ.

ಬದಲಾಗಿ, ಈಗಾಗಲೇ ಎಸ್.ಟಿ ಮೀಸಲಾತಿ ಪಟ್ಟಿಯಲ್ಲಿರುವ ಕುರುಬರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ನಮ್ಮ ಒತ್ತಾಯವಾಗಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಕುರುಬರು ಪಾದಯಾತ್ರೆಯ ಮೂಲಕ ಬೆಂಗಳೂರಿನಲ್ಲಿ ಕುರುಬರ ಜಾಗೃತಿ ಸಭೆಯಲ್ಲಿ ಸರ್ಕಾರದ ಕಂದಾಯ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ. 1991ರಲ್ಲಿ ವಾಲ್ಮೀಕಿ ಸಮಾಜದವರಿಗೆ ಬೇರೆ ರಾಜ್ಯದಲ್ಲಿರುವ ಸಮಾನಾರ್ಥ ಪದದನ್ವಯ ಎಸ್.ಟಿ ಮೀಸಲಾತಿಯಲ್ಲಿ ಸೇರಿಸಿರುವಂತೆ, ಕುರುಬ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ, ರಾಜ್ಯದಲ್ಲಿರುವ ಸಮಾನಾರ್ಥ ಪದದನ್ವಯ ಎಸ್.ಟಿ ಮೀಸಲಾತಿ ವಿಸ್ತರಿಸಬೇಕಿದೆ ಎಂದು ಕುರುಬ ಸಮುದಾಯ ಹೇಳಿದೆ.
ಈ ಹಿನ್ನೆಲೆಯಲ್ಲಿ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಅನ್ಯಾಯವಾಗಿರುವ ಕುರುಬ ಸಮಾಜದ ಧ್ವನಿಯಾಗಬೇಕು. ಆದರೆ ಅವರೇ, ಸಿಟ್ಟು ಮಾಡಿಕೊಂಡರೆ ಹೇಗೆ? ಎಂದು ಪ್ರಶ್ನಿಸಿರುವ ಹಾಲುಮಹಾ ಮಹಾಸಭಾದ ಮುಖಂಡರು, ಕುರುಬ ಸಮಾಜದಲ್ಲಿ ಬೆರಳೆಣಿಕೆಯಷ್ಟು ಜನರು ಸ್ಥಿತಿವಂತರಿರಬಹುದು. ಆದರೆ ಇಡೀ ಕುರುಬ ಸಮಾಜದಲ್ಲಿ ರಾಜ್ಯಮಟ್ಟದ ರಾಜಕಾರಣಿಗಳಿರುವುದೇ ಬೆರಳೆಣಿಕೆಯಷ್ಟು ಮಾತ್ರ.

ಯಾರೋ ಒಬ್ಬರು ಹೆಲಿಕ್ಯಾಪ್ಟರ್ ನಲ್ಲಿ ಓಡಾಡಿದ ಮಾತ್ರಕ್ಕೆ ಸಮಾಜವೇ ಹೀಗಿದೆ ಎಂದು ಹೇಳಲು ಸಾಧ್ಯವೇ? ಕುರುಬ ಸಮಾಜ ಶೈಕ್ಷಣಿಕ, ಸಾಮಾಜಿಕವಾಗಿ ಇಂದಿಗೂ ಬಡತನದಲ್ಲಿದ್ದು, ಕುರುಬರು ತುಳಿತಕ್ಕೆ ಒಳಪಡುತ್ತಿದ್ದಾರೆ. ಈ ಕಾರಣಕ್ಕೆ ನ್ಯಾಯಯುತವಾಗಿ ಹಾಗೂ ಸಂವಿಧಾನಬದ್ಧವಾಗಿ ಕುರುಬ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ರಾಜ್ಯದಲ್ಲಿರುವ ಪ್ರತಿಯೊಬ್ಬ ಕುರುಬರಿಗೂ ಎಸ್.ಟಿ ಮೀಸಲಾತಿ ವಿಸ್ತಾರ ಮಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜತೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಸಹ ಕುರುಬರಿಗೆ ST ಮೀಸಲಾತಿಯಲ್ಲಿ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕೆಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಮನವಿ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications