ಮೈಸೂರಿನಲ್ಲಿ ಕುವೆಂಪು ಜನ್ಮ ದಿನ: 13 ಭಾಷೆಗಳಲ್ಲಿ ಕೃತಿ ಬಿಡುಗಡೆ
ಮೈಸೂರು, ಡಿಸೆಂಬರ್ 22 : ಜ್ಞಾನಪೀಠ ಪುರಸ್ಕೃತ, ರಾಷ್ಟ್ರಕವಿ ಕುವೆಂಪು 112ನೇ ಜನ್ಮದಿನದಂಗವಾಗಿ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವೂ ಮತ್ತು ರಂಗಾಯಣದ ಸಂಯುಕ್ತಾಶ್ರಯದಲ್ಲಿ ಬಹುಭಾಷೆಗಳಲ್ಲಿ ಕುವೆಂಪು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಡಿ.23ರಂದು ಸಂಜೆ 5:30ಕ್ಕೆ ಮೈಸೂರಿನ ರಂಗಾಯಣದ ಭೂಮಿಗೀತೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸುವರು. ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ನಾರಾಯಣ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಡಾ.ಜಿ.ಎನ್.ದೇವಿ, ಕುವೆಂಪುರವರ ಪುತ್ರಿ ತಾರಿಣಿ ಚಿದಾನಂದಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ ಉಪಸ್ಥಿತರಿರುವರು.[ಕುವೆಂಪು ವಿಚಾರ ಕ್ರಾಂತಿ - ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ]

ಕುವೆಂಪುರವರ ಬರಹಗಳನ್ನು ಇತರ ಭಾಷೆಗಳ ಓದುಗರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಸೃಜನಶೀಲ ಬರಹಗಳು, ವೈಚಾರಿಕ ಲೇಖನಗಳನ್ನು ದೇಶದೆಲ್ಲೆಡೆ ಪಸರಿಸುವ ಉದ್ದೇಶದಿಂದ ಪ್ರಸ್ತುತ 5 ಸಾಂಸ್ಕೃತಿಕ ಮಹತ್ವದ ಬರಹಗಳನ್ನು ಉರ್ದು, ಇಂಗ್ಲಿಷ್, ತಮಿಳು, ತೆಲುಗು, ಕೊಂಕಣಿ, ಮರಾಠಿ, ಗುಜರಾತಿ, ಪಂಜಾಬಿ, ಬಂಗಾಳಿ, ಒಡಿಯಾ, ಅಸ್ಸಾಮಿ ಸೇರಿದಂತೆ ಒಟ್ಟು 13 ಭಾಷೆಗಳಿಗೆ ಪುಸ್ತಕಗಳನ್ನು ಅನುವಾದ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರವೂ ಕಳೆದ ಎರಡೂವರೆ ವರ್ಷದಿಂದ ಕಾರ್ಯಪ್ರವೃತವಾಗಿದೆ. ಡಿ.29ರ ಅವರ ಜನ್ಮದಿನಕ್ಕೆ ಈ ವಿಶೇಷ ಕೊಡುಗೆ ನೀಡಲಿದೆ.[ನಾಡಗೀತೆಗೆ ಕತ್ತರಿ ಪ್ರಯೋಗ ವಾಗಲಿದೆಯೇ?]
ಅನುವಾದ ಲೇಖನ : ಬಹುಭಾಷಾ ಭಾರತಿಗೆ ಐಕ್ಯತೆಯ ಆರತಿ, ಸಾಂಸ್ಕೃತಿಕ ವಿಚಾರ ಕಾಂತ್ರಿಗೆ ಆಹ್ವಾನ, ವೈಚಾರಿಕ ಕ್ರಾಂತಿ, ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಮತ್ತು ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಲೇಖನಗಳನ್ನು ಅನುವಾದಗೊಳಿಸಲಾಗಿದೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications