ಬಾಲಿವುಡ್ ನಟ ಅಮರೀಶ್ ಪುರಿ ತಂಗಿ ಮನೆ ಕನ್ನ ಹಾಕಿದ್ದ ಮೈಸೂರಿನ ಕಳ್ಳಿ
ಮೈಸೂರು, ಜುಲೈ 31 : ಬಾಲಿವುಡ್ ನಟ ಅಮರೀಷ್ ಪುರಿ ಅವರ ತಂಗಿಯ ಮನೆಯಲ್ಲಿ 30 ಲಕ್ಷ ರುಪಾಯಿ ಮೌಲ್ಯದ ವಜ್ರಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಚ್.ಡಿ. ಕೋಟೆ ಮೂಲದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಲಕ್ಷಾಂತರ ರುಪಾಯಿ ಮೌಲ್ಯದ ವಜ್ರ ಹಾಗೂ ಚಿನ್ನದ ಆಭರಣಗಳನ್ನು ದೋಚಿಕೊಂಡು ಬಂದಿದ್ದ ಎಚ್.ಡಿ.ಕೋಟೆ. ತಾಲೂಕಿನ ಹಾದನೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತುಳಸಿ (30)ಯನ್ನು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆ ಬಳಿಕ ವಿಚಾರಣೆಗೆ ಒಳಪಡಿಸಿ, ಗಿರವಿ ಇಟ್ಟಿದ್ದ 29.75 ಲಕ್ಷ ರುಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡು, ನ್ಯಾಯಾಧೀಶರ ಅನುಮತಿ ಪಡೆದು, ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಯಿತು.

ಎಚ್.ಡಿ.ಕೋಟೆ ಪಟ್ಟಣದ ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದ ತುಳಸಿ, ಕೆಲ ವರ್ಷಗಳ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ನಡುವೆ ಕೆಲಸಕ್ಕಾಗಿ ಮಂಗಳೂರು ಮೂಲದ ಏಜೆಂಟ್ ನನ್ನು ಸಂಪರ್ಕಿಸಿದ್ದಳು. 2 ತಿಂಗಳ ಹಿಂದೆ ಆತ, ತುಳಸಿಯನ್ನು ಮುಂಬೈಗೆ ಕರೆದೊಯ್ದು, ವಾಸ್ತುಶಿಲ್ಪಿ ದಂಪತಿ ಮನೆಯಲ್ಲಿ ಕೆಲಸಕ್ಕೆ ಸೇರಿಸಿದ್ದ.
ಆದರೆ, ಇದ್ದಕ್ಕಿದ್ದಂತೆ ಈಕೆ ಮನೆಯ ಮಾಲೀಕರಿಗೂ ತಿಳಿಸದೆ ಕೆಲಸ ಬಿಟ್ಟಿದ್ದಳು. ಇದರಿಂದ ಅನುಮಾನಗೊಂಡ ಮನೆ ಮಾಲೀಕರು, ಬೀರುವನ್ನು ಪರಿಶೀಲಿಸಿದಾಗ ಅದರಲ್ಲಿದ್ದ ಸುಮಾರು 30.75 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದವು. ಆ ನಂತರ ಮಹಿಮಾ ಪೊಲೀಸ್ ಠಾಣೆಗೆ ದೂರು ನೀಡಿ, ಮನೆಗೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು.
ತುಳಸಿಯ ಬಟ್ಟೆಗಳಿದ್ದ ಬ್ಯಾಗ್ ಸಿಕ್ಕಿತ್ತಾದರೂ, ಆಕೆಯ ವಿಳಾಸದ ಬಗ್ಗೆ ಯಾವುದೇ ಸುಳಿವು ದೊರೆತಿರಲಿಲ್ಲ. ಮೂರ್ನಾಲ್ಕು ದಿನಗಳ ಕಾಲ ಸ್ವಿಚ್ ಆಫ್ ಆಗಿದ್ದ ತುಳಸಿ ಮೊಬೈಲ್ ಆನ್ ಆಗುತ್ತಿದ್ದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದರು. ಮೊಬೈಲ್ ಸಿಗ್ನಲ್ ಜಾಡು ಹಿಡಿದು ತನಿಖೆ ನಡೆಸಿದಾಗ ತುಳಸಿಯು ಎಚ್.ಡಿ.ಕೋಟೆ ಭಾಗದಲ್ಲಿರುವುದು ತಿಳಿದಿದೆ.
ಮುಂಬೈ ಪೊಲೀಸರ ತಂಡ ಜುಲೈ 27ರಂದು ಎಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಬಂದು, ಪ್ರಕರಣದ ವಿವರ ನೀಡಿ, ಸಹಕಾರ ಕೋರಿದ್ದರು. ಆ ಬಳಿಕ ಮೇಲಧಿಕಾರಿಗಳ ಸೂಚನೆ ಮೇರೆಗೆ ಎಚ್.ಡಿ.ಕೋಟೆ ಠಾಣೆಯ ಪೊಲೀಸರು ಮುಂಬೈ ಪೊಲೀಸ್ ತಂಡದೊಂದಿಗೆ ಖತರ್ನಾಕ್ ಕಳ್ಳಿ ತುಳಸಿ ಹುಡುಕಾಟಕ್ಕೆ ಬಲೆ ಬೀಸಿದ್ದರು.
ಹಾದನೂರು ಗ್ರಾಮದಲ್ಲಿ ಹಗಲು ವೇಳೆ ಮನೆಯಿಂದ ಹೊರ ಬಾರದ ತುಳಸಿ, ರಾತ್ರಿಯಾದರೆ ಗ್ರಾಮಸ್ಥರ ಕಣ್ಣಿಗೂ ಬೀಳದಂತೆ ಮೈಸೂರಿಗೆ ಹೋಗಿ ಬರುತ್ತಿದ್ದಳು. ಈಕೆಯ ನಿಗೂಢ ಓಡಾಟದ ಬಗ್ಗೆ ಪೋಷಕರಿಗೂ ತಿಳಿದಿರಲಿಲ್ಲ. ಕಡೆಗೂ ಆಕೆ ಮನೆಯಲ್ಲಿದ್ದಾಗಲೇ ತುಳಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲೇ ತಾನು ಮುಂಬೈನಲ್ಲಿ ಕಳ್ಳತನ ಮಾಡಿದ್ದನ್ನು ಒಪ್ಪಿಕೊಂಡಿದ್ದಾಳೆ. ತುಳಸಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಅವರ ಅನುಮತಿ ಪಡೆದು ಮುಂಬೈಗೆ ಕರೆದೊಯ್ಯಲಾಯಿತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications