ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ವಿದ್ಯುನ್ಮಾನ ಚಾಲನಾ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಾರಿಗೆ ಸಚಿವರು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 24: "ಜಾಗೃತಿ ಮೂಡಿಸುವ ಮೂಲಕ ದೇಶದಲ್ಲಿ ಅಪಘಾತ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯ ಎಂಬುದನ್ನು ಸಾರುವ ಉದ್ದೇಶದೊಂದಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ" ಎಂದು ಸಾರಿಗೆ, ಕೃಷಿ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ದೇವನೂರು ಬಡಾವಣೆ ಸಮೀಪದ ಹೊರವರ್ತುಲ ರಸ್ತೆಯಲ್ಲಿ ಸ್ವಯಂ ಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥಕ್ಕೆ ಚಾಲನೆ ನೀಡಿ ಮಾತನಾಡಿದರು.

"ಮೈಸೂರಿನಲ್ಲಿ ಆಧುನಿಕ ತಂತ್ರಜ್ಞಾನದ ವಿದ್ಯುನ್ಮಾನ ಚಾಲನಾ ಪರೀಕ್ಷಾ ಕೇಂದ್ರದ ಉದ್ಘಾಟನೆಯಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಇಂಥದ್ದೊಂದು ತರಬೇತಿ ಕೇಂದ್ರ ಪ್ರಾರಂಭಿಸುವುದು ನಮ್ಮ ಗುರಿ. ಅದರ ಜೊತೆಗೆ ಪ.ಜಾತಿ/ಪ.ಪಂಗಡದವರಿಗೆ ತರಬೇತಿ ನೀಡುವ ಮೂಲಕ ಅವರನ್ನು ಚಾಲಕರನ್ನಾಗಿ ನಿರ್ಮಾಣ ಮಾಡುವ ಯೋಜನೆ ಇದೆ" ಎಂದು ತಿಳಿಸಿದರು.

ಬೆಂಗಳೂರು ಪಾದಚಾರಿಗಳಿಗೆ ನೆಮ್ಮದಿ ನೀಡಿದ ಬಿಬಿಎಂಪಿಬೆಂಗಳೂರು ಪಾದಚಾರಿಗಳಿಗೆ ನೆಮ್ಮದಿ ನೀಡಿದ ಬಿಬಿಎಂಪಿ

"ಸಾರಿಗೆ ಇಲಾಖೆಯಲ್ಲಿ ಪ್ರತಿವರ್ಷ ಮೈಸೂರು ಭಾಗದಿಂದ 450 ಕೋಟಿ ತೆರಿಗೆ ಸಂಗ್ರಹವಾಗಲಿದೆ. ಹೀಗಾಗಿ ಪ್ರಥಮ ಆದ್ಯತೆ ಮೈಸೂರಿಗೆ ಕೊಡಬೇಕೆಂಬ ಉದ್ದೇಶ ನಮ್ಮದು. ಅದಕ್ಕಾಗಿ ಇಲ್ಲಿಯೇ ಮೊದಲು ಉದ್ಘಾಟಿಸಲಾಗಿದೆ. ಮೈಸೂರು ಭಾಗದಲ್ಲಿ 23ಲಕ್ಷ ವಾಹನಗಳ ನೋಂದಣಿ ಆಗಿದೆ. ಇದರಿಂದ ಹೆಚ್ಚಿನ ಆದಾಯ ಬರಲು ಸಾಧ್ಯವಾಗಿದೆ" ಎಂದು ತಿಳಿಸಿದರು.

Lakshmana Savadi Inaugurated Electronic Driving Testing Center

"ನಮ್ಮ ದೇಶದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷ ಜನ ಅಪಘಾತದಿಂದ ಸಾವನ್ನಪ್ಪುತ್ತಾರೆಂದು ಅಧ್ಯಯನದಿಂದ ತಿಳಿದು ಬಂದಿದ್ದು, ಸುಮಾರು 6 ಲಕ್ಷ ಜನರು ಅಪಘಾತದಿಂದ ಗಾಯಗೊಂಡಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದಕ್ಕೆ ಕಾರಣ ನಮ್ಮ ಚಾಲಕರ ಅಪಕ್ವ ತರಬೇತಿ. ಅಪಘಾತ ತಡೆಯಲು ಪರಿಪಕ್ವ ಜ್ಞಾನವನ್ನು ಕೊಡುವ ಮೂಲಕ ದೇಶದಲ್ಲಿ ಅಪಘಾತ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯ" ಎಂದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಫೆ.26ರ ಡೆಡ್ ಲೈನ್!ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಫೆ.26ರ ಡೆಡ್ ಲೈನ್!

ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜು, ಸಾರಿಗೆ ಆಯುಕ್ತರು, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

English summary
Lakshmana Savadi Inaugurated Electronic Driving Testing Center In Mysuru Outer ring Road
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X