ಭೂ ಒತ್ತುವರಿ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಹೋರಾಟ
ಮೈಸೂರು, ಜೂನ್ 17: "ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸುವುದಾಗಿ,'' ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ರಾಜೀವ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಶಾಸಕ ಸಾ.ರಾ ಮಹೇಶ್ ಹಾಗೂ ನನಗೂ ಒಂದು ರುಪಾಯಿ ವ್ಯವಹಾರವಿಲ್ಲ. ಅವರೊಂದಿಗೆ ಯಾವುದೇ ವ್ಯವಹಾರವನ್ನು ನಡೆಸಿಲ್ಲ. ಹೀಗಾಗಿ ನನ್ನ ಹೆಸರು ಪ್ರಸ್ತಾಪದ ಬಗ್ಗೆ ನನ್ನ ಆಪ್ತರ ಹಾಗೂ ಪಕ್ಷದ ಹಿರಿಯರ ಜೊತೆ ಮಾತುಕತೆ ನಡೆಸಿ ಬಳಿಕ ಕಾನೂನಿನ ಹೋರಾಟದ ಬಗ್ಗೆ ಚಿಂತನೆ ನಡೆಸುತ್ತೇನೆ.''
"ಲಿಂಗಾಂಬುದಿಪಾಳ್ಯದಲ್ಲಿ ನನ್ನದು 3 ಎಕರೆ ಜಮೀನಿದೆ, ಅದರಲ್ಲಿ ಯಾವುದೇ ಲೋಪವಿಲ್ಲ. ಅದು ನನ್ನ ತಂದೆಯ ಆಸ್ತಿಯಾಗಿದ್ದು, ನನ್ನ ಹೆಸರು ಪ್ರಸ್ತಾಪಿಸಿರುವ ಬಗ್ಗೆ ನೀವು ಅವರನ್ನೇ ಪ್ರಶ್ನಿಸುವುದು ಸೂಕ್ತ,'' ಎಂದು ರೋಹಿಣಿ ಸಿಂಧೂರಿ ಆಡಿಯೋದಲ್ಲಿ ಸಾ.ರಾ ಹಾಗೂ ರಾಜೀವ್ ಹೆಸರು ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.

"ಅಲ್ಲದೇ, ನಾನು ಯಾವೊಂದು ತೀರ್ಮಾನವನ್ನೂ ಏಕಪಕ್ಷೀಯವಾಗಿ ತೆಗೆದುಕೊಂಡಿಲ್ಲ. ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಸೇರಿ 26 ಸದಸ್ಯರು ಮುಡಾದಲ್ಲಿ ಇದ್ದಾರೆ. ಕಾನೂನು ಉಲ್ಲಂಘಿಸಿ ಯಾವೊಂದು ಕೆಲಸವನ್ನೂ ಮಾಡಿಲ್ಲ. ಮಾಧ್ಯಮಗಳಲ್ಲೂ ಏನೇನೋ ಅಪಪ್ರಚಾರ ಆಗಿದೆ. ನಾನು ಜೀವಮಾನದಲ್ಲಿ ಅಧಿಕಾರ ದುರುಪಯೋಗ ಮಾಡಿಲ್ಲ,'' ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಆರೋಪಕ್ಕೆ ಎಚ್.ವಿ. ರಾಜೀವ್ ತಿರುಗೇಟು ನೀಡಿದರು.
"10 ವರ್ಷಗಳಲ್ಲಿ ಹೇಗಿದ್ದವರು ಹೇಗಾಗಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜೀವ್, ನಾನು ಸರ್ಕಾರದ ಯಾವುದೇ ಒಂದು ಜಾಗವನ್ನು ಇಲ್ಲಿಯವರೆಗೆ ಖರೀದಿಸಿಲ್ಲ. ಸಾವಿರಾರು ಮನೆಗಳನ್ನು ನಿರ್ಮಿಸಿ ಸರ್ಕಾರದ ದರಕ್ಕಿಂತ ಕಡಿಮೆ ದರದಲ್ಲೇ ಜನರಿಗೆ ವಸತಿ ನೀಡಿರುವ ತೃಪ್ತಿ ನನಗಿದೆ. ಮೈಸೂರು ಹಸಿರೀಕರಣಕ್ಕೆ 75 ಲಕ್ಷ ಸ್ವಂತ ಹಣದಿಂದ ಗಿಡಗಳನ್ನು ನೆಡುವ ಕೆಲಸವಾಗುತ್ತಿದೆ. ಮೌಢ್ಯ, ಜಾತಿ ಧರ್ಮದ ಎಲ್ಲೇ ಮೀರಿ ಕೆಲಸ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕರೆಗೆ ನೂರಾರು ಅಭಿಯಾನ ಮಾಡಿದ್ದೇನೆ.''
"ನನಗೇನು ಪ್ರಚಾರದ ಹುಚ್ಚೆನಿಲ್ಲ, ನನ್ನ ಎಲ್ಲ ವ್ಯವಹಾರಗಳು ಕಾನೂನಿನ ಮೂಲಕವೇ ನಡೆಯುತ್ತಿದೆ. ನನ್ನ ವ್ಯವಹಾರಗಳಿಗೆ ತೆರಿಗೆ ಕಟ್ಟುತ್ತಾ, ನನ್ನ ವ್ಯವಹಾರ ನಾನು ಮಾಡುತ್ತಿದ್ದೇನೆ. ಆದರೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪಗಳು ಬಂದಿದೆ. ಮೈಸೂರಿನ ಜನ ಯಾರೋ ಹೇಳಿದ್ದನ್ನು ನಂಬಿಕೊಳ್ಳುವ ಬದಲು ವಾಸ್ತವವಾಗಿ ನಾನೇನು ಕೆಲಸ ಮಾಡಿದ್ದೇನೆ ಅನ್ನುವುದನ್ನು ಗಮನಿಸಬೇಕು,'' ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications