ಮೈಸೂರಿನಲ್ಲಿ ಲ್ಯಾಂಟನ್ ಪಾರ್ಕ್ ನೋಡಲು ಹರಿದುಬಂತು ಜನಸಾಗರ
ಮೈಸೂರು, ಅಕ್ಟೋಬರ್ 29: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ದಸರಾ ವಸ್ತುಪ್ರದರ್ಶನದ ವೈಭವವನ್ನು ಇನ್ನಷ್ಟು ಹೆಚ್ಚಿಸಲು 'ಲ್ಯಾಂಟನ್ ಪಾರ್ಕ್' ಸಜ್ಜಾಗಿದೆ.
ಭಾರತದಲ್ಲಿ ಇದೇ ಮೊದಲ ಬಾರಿಗೆ ಲ್ಯಾಂಟನ್ ಪಾರ್ಕ್ ಸಾಂಸ್ಕೃತಿಕ ಲೋಕವನ್ನು ಅನಾವರಣಗೊಳಿಸುತ್ತಿದ್ದು, 15 ಸಾವಿರ ಚದರ ಅಡಿ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಪಾರ್ಕ್ನಲ್ಲಿ ವಿವಿಧ ಗಾತ್ರದ ವರ್ಣರಂಜಿತ ಲ್ಯಾಂಟನ್ಗಳನ್ನು ವಿನ್ಯಾಸಗೊಳಿಸಲಾಗಿದೆ.
ನಗರದ 'ಡ್ರೀಮ್ ಪೆಟಲ್ಸ್' ಸಂಸ್ಥೆಯು ಚೀನಾದ 20 ಮಂದಿ ಪರಿಣತರ ನೆರವಿನಿಂದ ಈ ಪಾರ್ಕ್ ನಿರ್ಮಿಸಿದೆ.
ವಸ್ತು ಪ್ರದರ್ಶನದ ಆವರಣದಲ್ಲಿ 15 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ 1.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಲ್ಯಾಂಟನ್ ಪಾರ್ಕ್ ನಲ್ಲಿ 400 ವರ್ಷದಲ್ಲಿ ಮೈಸೂರು ನಗರ ಕಂಡಿರುವ ಅಭಿವೃದ್ಧಿ, ವಿಜಯನಗರ ಸಾಮ್ರಾಜ್ಯ, ಮೈಸೂರು ಅರಸರ ಆಳ್ವಿಕೆ, ದಸರಾ ನಡೆದು ಬಂದ ಹಾದಿ, ಚಾಮುಂಡಿಬೆಟ್ಟ, ಮಹಿಷಾಸುರ ಮರ್ಧನ, ಜಂಬೂಸವಾರಿ, ಪೂಜಾ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ಸಂಸ್ಕೃತಿಯನ್ನು ತ್ರಿಡಿ ಆಕೃತಿಗಳಿಂದ ಅನಾವರಣ ಗೊಳಿಸುತ್ತಿದೆ. ಹೌದು, ದಸರಾ ಮಹೋತ್ಸವದ ಮಹತ್ವವನ್ನು ಸಾರಲು 9 ಬಣ್ಣದ 9 ಅಶ್ವ ತ್ರಿಡಿ ಆಕೃತಿ ನಿಲ್ಲಿಸಲಾಗಿದೆ. ಮುಂದೆ ಓದಿ...

ಆಕರ್ಷಣೆಯ ಕೇಂದ್ರಬಿಂದು
ಮಹಿಷಾಸುರ ಮರ್ದಿನಿ ಅವತಾರದಲ್ಲಿ ಚಾಮುಂಡೇಶ್ವರಿಯ ತ್ರಿಡಿ ಆಕೃತಿ. ಅದರ ಸುತ್ತಲೂ 5 ಸಾವಿರ ಎಲ್ಇಡಿ ಲೈಟ್ ಗಳಿಂದ ರೋಜ್ ಗಾರ್ಡನ್ ನಿರ್ಮಿಸಲಾಗಿದ್ದು, ನೋಡುಗರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಜತೆಗೆ ಲ್ಯಾಂಟನ್ ಪಾರ್ಕ್ ಸುತ್ತಲೂ ಬಣ್ಣ-ಬಣ್ಣದ ಎಲ್ಇಡಿ ಲೈಟ್ ಗಳನ್ನು ಅಳವಡಿಸಿರುವುದರಿಂದ ನೋಡುಗರಿಗೆ ಮುದ ನೀಡಲಿದೆ.

ಪಾರ್ಕ್ ಗೆ ಪ್ರವೇಶ ಉಚಿತ
ಚೀನಾ ಹಾಗೂ ದುಬೈ ಸೇರಿದಂತೆ ವಿಶ್ವದ ಇನ್ನಿತರೆ ದೇಶಗಳಲ್ಲಿ ಲ್ಯಾಂಟರ್ನ್ ಪಾರ್ಕ್ ಜನಮನ್ನಣೆ ಗಳಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ವೀಕ್ಷಿಸುತ್ತಿದ್ದಾರೆ. ಅದೇ ರೀತಿ ಮೈಸೂರಿನ ಡ್ರೀಮ್ ಪೆಟಲ್ಸ್ ಸಂಸ್ಥೆಯು ಲ್ಯಾಂಟನ್ ಪಾರ್ಕ್ ಸಜ್ಜುಗೊಳಿಸಿದೆ. ಪ್ರವೇಶ ಉಚಿತವಾಗಿದ್ದು, ಲ್ಯಾಂಟನ್ ಪಾರ್ಕ್ ಅಂದವನ್ನು ಸವಿಯಬಹುದಾಗಿದೆ.

ಸೆಲ್ಫಿ ಕ್ಲಿಕ್ಕಿಸಿಕೊಂಡ ಜನ
ಉದ್ಘಾಟನೆಯಾದ ಕೆಲವೇ ನಿಮಿಷದಲ್ಲಿ ನೂರಾರು ಮಂದಿ ಸಾರ್ವಜನಿಕರು ಲ್ಯಾಂಟನ್ ಪಾರ್ಕ್ ಗೆ ದೌಡಾಯಿಸಿ ಅಂದವನ್ನು ಸವಿದರಲ್ಲದೆ, ಚಾಮುಂಡೇಶ್ವರಿಯ ತ್ರಿಡಿ ಆಕೃತಿ. ಅದರ ಸುತ್ತಲೂ ಎಲ್ಇಡಿ ಲೈಟ್ ಗಳಿಂದ ಅಲಂಕರಿಸಿದ್ದ ರೋಜ್ ಗಾರ್ಡನ್ ಬಳಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ದೇಶದಲ್ಲೇ ಮೊದಲ ಪ್ರಯತ್ನ
ಇದೇ ಸಂದರ್ಭದಲ್ಲಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಲ್ಯಾಂಟನ್ ಪಾರ್ಕ್ ನಿರ್ಮಾಣ ದೇಶದಲ್ಲೇ ಮೊದಲ ಪ್ರಯತ್ನ. ಇದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಸರಾದಲ್ಲೇ ಉದ್ಘಾಟಿಸಬೇಕಿತ್ತು. ಆದರೆ, ಕಾಮಗಾರಿ ನಡೆಯುತ್ತಿದ್ದರಿಂದ ತಡವಾಯಿತು. ಶೇ.70ರಷ್ಟು ಕೆಲಸ ಮುಗಿದಿದ್ದು, ಇನ್ನು 30ರಷ್ಟು ಬಾಕಿ ಇದೆ.
ಮೈಸೂರಿನ ಜನತೆ ವೀಕ್ಷಣೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಂದು ಉದ್ಘಾಟಿಸಿದ್ದು, ವಸ್ತು ಪ್ರದರ್ಶನ ಮುಗಿಯುವವರೆಗೂ ಇರಲಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಆಕಾಶ ಅಂಬಾರಿಗೆ ಬೇಡಿಕೆ ಹೆಚ್ಚಿರುವ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಮುಖ್ಯಮಂತ್ರಿಕುಮಾರಸ್ವಾಮಿ ಅವರು ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದಾರೆ.ವಿಮಾನ ಹಾರಾಟಕ್ಕೆ, ವಿಮಾನ ನಿಲ್ದಾಣ ವಿಸ್ತರಣೆಗೆ ಭೂಮಿ ಒದಗಿಸುವಂತೆ ತಿಳಿಸಿದ್ದಾರೆ. ಈ ಕುರಿತು ಸಿಎಂ, ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications