ಇನ್ನೂ ನಡೆದಿಲ್ಲ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರ
ಮೈಸೂರು, ಫೆಬ್ರವರಿ 20 : ಭಾನುವಾರ (ಫೆ.18) ನಿಧನ ಹೊಂದಿದ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ಅವರ ಅಂತಿಮ ಸಂಸ್ಕಾರ ಗುರುವಾರ(ಫೆ.22) ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಒಕ್ಕಲಿಗರ ಸಂಪ್ರದಾಯದಂತೆ ಗುರುವಾರ ಮಧ್ಯಾಹ್ನದ ವೇಳೆಗೆ ಕ್ಯಾತನಹಳ್ಳಿಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬ ನಿರ್ಧರಿಸಿದೆ. ಅವರ ಇರ್ವರು ಪುತ್ರಿಯರು ವಿದೇಶದಲ್ಲಿ ನೆಲೆಸಿರುವ ಕಾರಣ, ಅವರು ಬರುವವರೆಗೂ ಕೊನೆಯ ವಿಧಿವಿಧಾನಗಳನ್ನು ನೆರವೇರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಾಗಿ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
In Pics : ಅಗಲಿದ ರೈತ ನಾಯಕನಿಗೆ ಗಣ್ಯರ ಅಶ್ರುತರ್ಪಣ
ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರಿಯರಾದ ಸ್ಮಿತಾ, ಅಕ್ಷತಾ ಕೆನಡಾ ಹಾಗೂ ಸೋದರಿ ರೇಣುಕಾ ಅಮೇರಿಕಾದಲ್ಲಿರುವ ಕಾರಣ ಅವರೆಲ್ಲರೂ ಬುಧವಾರ ಆಗಮಿಸುವ ನಿರೀಕ್ಷೆ ಇದೆ. ಅಂತ್ಯಕ್ರಿಯೆ ಹಿನ್ನೆಲೆ ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿಯೇ ಸಂರಕ್ಷಣೆ ಮಾಡಲಾಗುತ್ತಿದೆ. ಪಾರ್ಥಿವ ಶರೀರ ಮೈಸೂರಿಗೆ ರವಾನೆಯಾದ್ದರಿಂದ ಅಂತಿಮದರ್ಶನಕ್ಕೆ ಆಗಮಿಸಿದ್ದ ಪುಟ್ಟಣ್ಣಯ್ಯ ಅವರ ಅಭಿಮಾನಿಗಳಿಗೆ ದರ್ಶನ ಸಿಗದೆ ನಿರಾಸೆಯಾಗಿದೆ.

ಇದಕ್ಕೆ ಅಭಿಮಾನಿಗಳ ಬಳಿ ಕ್ಷಮೆಕೋರಿರುವ ಶಾಸಕ ಪುಟ್ಟಣ್ಣಯ್ಯ ಕುಟುಂಬಸ್ಥರು ಗುರುವಾರದಂದು ಎಲ್ಲರಿಗೂ ಅಂತಿಮದರ್ಶನ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಪಾಂಡವರಪುರದ ಕಾತ್ಯನಹಳ್ಳಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನವನ್ನು ನಿನ್ನೆ(ಫೆ.19) ಮಧ್ಯಾಹ್ನ 1 ಗಂಟೆಯ ವೇಳೆಗೂ ದರ್ಶನಕ್ಕೆ ಇಡಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications