ಸಿಎಂ, ಡಿಸಿಎಂ ಕಳೆದುಹೋಗಿದ್ದಾರೆ, ಹುಡುಕಿಕೊಡಿ ಎಂದು ದೂರು ಕೊಡಲು ಮುಂದಾದ ಮೈಸೂರಿನ ವಕೀಲ
ಮೈಸೂರು, ಅಕ್ಟೋಬರ್. 25: ವಾಲ್ಮೀಕಿ ಜಯಂತಿ ಉತ್ಸವದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾದ ಹಿನ್ನೆಲೆಯಲ್ಲಿ ಅವರನ್ನು ಹುಡುಕಿಕೊಡಿ ಎಂದು ನಗರದ ವಕೀಲರೊಬ್ಬರು ಪೊಲೀಸರ ಮೊರೆ ಹೋಗಿದ್ದಾರೆ.
ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಡಿಸಿಎಂ ಇಬ್ಬರು ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹುಡುಕಿಕೊಡಿ ಎಂದು ಮೈಸೂರಿನ ಲಕ್ಷ್ಮೀಪುರಂ ಠಾಣೆಗೆ ದೂರು ನೀಡಲು ವಕೀಲ ಪಡುವಾರಹಳ್ಳಿ ರಾಮಕೃಷ್ಣ ಮುಂದಾಗಿದ್ದಾರೆ.
ಇಬ್ಬರು ನಾಯಕರು ಗೈರು ಹಾಜರಾಗುವ ಮೂಲಕ ಆ ಸಮುದಾಯದವರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಈ ಇಬ್ಬರೂ ರಾಜ್ಯದ ಜನತೆ, ವಾಲ್ಮೀಕಿ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕು ಎಂದು ವಕೀಲರು ಆಗ್ರಹಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು ಬುಧವಾರ ಉದರಬೇನೆಯಿಂದ ಬಳಲುತ್ತಿದ್ದ ಕಾರಣ ಅಂದಿನ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಬಗ್ಗೆ ಸಿಎಂ ಕಚೇರಿ ನೀಡಿರುವ ಸ್ಪಷ್ಟನೆ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ, ಅದೇನೆ ಇರಲಿ ಸಮಾಜದ ಜನತೆ ಸಿಎಂ, ಡಿಸಿಎಂ ವರ್ತನೆಯಿಂದ ಅಸಮಧಾನಗೊಂಡಿದ್ದಾರೆ. ವಾಲ್ಮೀಕಿ ಬಗ್ಗೆ ನಿಜವಾದ ಗೌರವವಿದ್ದರೆ ತಮ್ಮ ಕಚೇರಿಯಲ್ಲೇ ಜಯಂತಿ ಆಚರಿಸಬೇಕು ಎಂದು ವಕೀಲ ರಾಮಕೃಷ್ಣ ಒತ್ತಾಯಿಸಿದರು.
ಮಾಜಿ ಪ್ರಧಾನಿ ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಕೊಟ್ಟಿರುವುದು ಸೂಕ್ತವಲ್ಲ. ಅವರಿಗೆ ವಾಲ್ಮೀಕಿ ಗೌರವ ನೀಡಿರುವುದಕ್ಕೆ ನನ್ನ ವಿರೋಧವಿದೆ. ನಾಯಕ ಸಮುದಾಯದಲ್ಲಿ ಅರ್ಹ ವ್ಯಕ್ತಿಗಳು ಇದ್ದಾರೆ. ಅವರಿಗೆ ನೀಡಿ ಗೌರವ ಒದಗಿಸಬೇಕಿತ್ತು ಎಂದು ವಕೀಲ ಪಡುವಾರಹಳ್ಳಿ ರಾಮಕೃಷ್ಣ ಸೂಚಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications