BPL Card : ಉಳ್ಳವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಕಾನೂನು ಕ್ರಮ: ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ
ಮೈಸೂರು; ಏ.13: "ಉಳ್ಳವರು ಬಿಪಿಎಲ್ ಪಡಿತರ ಕಾರ್ಡ್ಗಳನ್ನು ಪಡೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ," ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದ್ದು.ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು," ಎಂದರು.
"ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು," ಎಂದು ತಿಳಿಸಿದರು.

"ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಬಡವರಿಗೋಸ್ಕರ ಇರುವ ಯೋಜನೆಯನ್ನು ಇತರರು ಪಡೆಯಬಾರದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಪುನರುಚ್ಚರಿಸಿದರು.
ಬಿಪಿಎಲ್ ಕಾರ್ಡ್ ದುರ್ಬಳಕೆ ತಡೆಯಲು ಈ ಯೋಜನೆ
"ಸ್ವಂತ ಮನೆ ಹೊಂದಿ 2-3 ಮಹಡಿಯ ಮನೆ ಕಟ್ಟಿಕೊಂಡು ಇರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಕೇಂದ್ರ ಸರ್ಕಾರ ದೇಶದಲ್ಲಿ ಎಂಬತ್ತು ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದ್ದು ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್ ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ," ಎಂದು ತಿಳಿಸಿದರು.

ಬಿಪಿಎಲ್ ಕಾರ್ಡ್ ಪಡೆಯಲು ಮಾನದಂಡಗಳು ಯಾವುದು?
2017ಕ್ಕೆ ಹೊರಡಿಸಿದ ಪರಿಷ್ಕೃತ ಮಾನದಂಡದ ಪ್ರಕಾರ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸಂಸ್ಥೆಗಳು/ಮಂಡಳಿಗಳು ನಿಗಮಗಳು, ಆದಾಯ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ.
ಇನ್ನು ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗೆ ಅರ್ಹವಲ್ಲ. ಪ್ರತಿ ತಿಂಗಳು 150 ಯುನಿಟ್ಗಳಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಅರ್ಹರಲ್ಲ.
ಆರ್ಥಿಕವಾಗಿ ಸದೃಢವಾಗಿರುವವರು, ಸರ್ಕಾರಿ ನೌಕರರೂ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಹಲವರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ. ಹೀಗೆ ತಪ್ಪು ಮಾಹಿತಿ ನೀಡಿ ಪಡೆಯಲಾಗಿದ್ದ ಸುಮಾರು 94 ಸಾವಿರ ಬಿಪಿಎಲ್ ಹಾಗೂ ಎಎವೈ ಪಡಿತರ ಚೀಟಿಗಳನ್ನು ಕಳೆದ ವರ್ಷ ಸರ್ಕಾರ ರದ್ದುಗೊಳಿಸಿದೆ.
Recommended Video
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ









Click it and Unblock the Notifications