ಕೆ.ಆರ್.ನಗರ: ಜನರ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಕೊನೆಗೂ ಸೆರೆ
ಮೈಸೂರು, ನವೆಂಬರ್ 4: ಜಿಲ್ಲೆಯ ಕೆಆರ್ ನಗರದಲ್ಲಿ ಜನರ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಪಟ್ಟಣದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಕೆಆರ್ ನಗರದಿಂದ ಮುಳ್ಳೂರಿಗೆ ಹೋಗುವ ರಸ್ತೆಯಲ್ಲಿ ಕಂಡ ಕಂಡವರ ಮೇಲೆ ಚಿರತೆ ದಾಳಿ ನಡೆಸಿ ಆತಂಕ ಮೂಡಿಸಿತ್ತು. ಚಿರತೆಯ ಪ್ರತ್ಯಕ್ಷದಿಂದ ಪಟ್ಟಣದ ಜನತೆ ಭಯ ಭೀತರಾಗಿ ಮನೆ ಸೇರಿಕೊಂಡಿದ್ದರು. ಆದರೈ ಜನನಿಬಿಡ ಪ್ರದೇಶ ಪ್ರವೇಶಿಸಿದ್ದ ಚಿರತೆರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರ ಮೇಲೆ ದಾಳಿಗೆ ಯತ್ನಿಸಿತು. ಚಿರತೆ ದಾಳಿಯಿಂದ ಬೈಕ್ ಕೆಳಗೆ ಬಿದ್ದು, ಸವಾರ ಗಾಯಗೊಂಡರೆ, ಇದರ ಬೆನ್ನಲ್ಲೆ ಬೈಕ್ ಸವಾರನ ರಕ್ಷಣೆಗೆ ತೆರಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ದಾಳಿ ಮಾಡಿತು.
ಗುರುವಾರ ರಾತ್ರಿಯೇ ಕೆಆರ್ ನಗರಕ್ಕೆ ಚಿರತೆ ಬಂದಿದ್ದು, ರಸ್ತೆ ನಡುವೆ ಕುಳಿತಿರುವ ಚಿರತೆ ಕಂಡು ಜನ ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಜನರನ್ನು ಚಿರತೆ ಸೆರೆಹಿಡಿಯುವವರೆಗೆ ಯಾರು ಹೊರ ಬರದಂತೆ ಮುನ್ಸೂಚನೆ ನೀಡಲಾಗಿತ್ತು.

ಎರಡು ಗಂಟೆ ಕಾರ್ಯಾಚರಣೆ ನಂತರ ಸೆರೆ
ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಆತಂಕ ಮೂಡಿಸಿದ ಚಿರತೆಯನ್ನು ಎರಡು ಗಂಟೆ ಕಾರ್ಯಾಚರಣೆ ಮಾಡಿ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಅರಣ್ಯ ಇಲಾಖೆ ಸೆರೆ ಹಿಡಿದಿದ್ದಾರೆ. ಅರವಳಿಕೆ ನೀಡಿದ ನಂತರ ಚಿರತೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಸ್ಥಳದಲ್ಲೇ ಅರಣ್ಯಾಧಿಕಾರಿಗಳ ಹಾರೈಕೆ ಮಾಡಿ ಅದನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲು ಕೊಂಡೊಯ್ದರು. ಚಿರತೆ ಸಿಕ್ಕ ಸುದ್ದಿ ಕೆಆರ್ ನಗರ ಜನತೆ ನೆಮ್ಮದಿಯನ್ನುಂಟು ಮಾಡಿದ್ದು, ಅರಣ್ಯ ಇಲಾಖೆಗೆ ಧನ್ಯವಾದ ತಿಳಿಸಿದ್ದಾರೆ.
ಟಿ ನರಸೀಪುರದಲ್ಲಿ ಚಿರತೆ ದಾಳಿಗೆ ಯುವಕ ಬಲಿ
ಮಹಾರಾಜ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಟಿ.ನರಸೀಪುರ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಯುವಕ ಮಂಜುನಾಥ್ (18) ಚಿರತೆ ದಾಳಿಗೆ ಯುವಕ ಬಲಿಯಾಗಿದ್ದಾನೆ.
ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಪೊದೆಯಿಂದ ಜಿಗಿದು ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿತು. ಸ್ನೇಹಿತರು ಚಿರತೆಗೆ ಕಲ್ಲು ಹೊಡೆದು ರಕ್ಷಿಸಲು ಮುಂದಾದರಾದರೂ ಮಂಜುನಾಥನನ್ನು ಚಿರತೆ ಬಿಡಲಿಲ್ಲ, ಗ್ರಾಮಸ್ಥರು ಬರುವ ವೇಳೆಗೆ ಚಿರತೆ ಯುವಕನ್ನು ಕೊಂದು ಪರಾರಿಯಾಗಿತ್ತು. ಈ ಘಟನೆ ಬೆನ್ನಲ್ಲೆ ಮಲ್ಲಪ್ಪನ ಬೆಟ್ಟದ ಸುತ್ತಮುತ್ತಲಿನ ಗ್ರಾಮದ ಮನೆಯಿಂದ ಹೊರಬರಲು ಆತಂಕ ಪಡುವಂತಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications