ಎಚ್ ಡಿ ಕೋಟೆಯಲ್ಲಿ ಹಾಡಹಗಲೇ ಯುವಕನ ಮೇಲೆ ಚಿರತೆ ದಾಳಿ
ಮೈಸೂರು, ಮಾರ್ಚ್ 6: ಹಾಡಹಗಲೇ ಚಿರತೆಯೊಂದು ಆಡುಗಳನ್ನು ಮೇಯಿಸುತ್ತಿದ್ದ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಎಚ್ ಡಿ ಕೋಟೆ ಗ್ರಾಮದಲ್ಲಿ ಜರುಗಿದೆ.
ಜೋನಿಗಿರಿ ಬೀದಿಯಲ್ಲಿರುವ ಮಖಾನ್ ಹತ್ತಿರ ಯರಹಳ್ಳಿ ಗ್ರಾಮದ ಸುರೇಶ್ (25) ತಮ್ಮ ಆಡುಗಳನ್ನು ಪಾಳು ಬಿದ್ದಿರುವ ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಪೊದೆಯಿಂದ ಬಂದ ಚಿರತೆ ದಿಢೀರನೆ ಆಡುಗಳ ಮೇಲೆ ದಾಳಿ ನಡೆಸಿದೆ.
ಇದರಿಂದ ಗಾಬರಿಗೊಂಡ ಸುರೇಶ್ ಚಿರತೆಯಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಆತನ ಮೇಲೂ ದಾಳಿ ನಡೆಸಿ ಭುಜ ಮತ್ತಿತರ ಭಾಗಗಳನ್ನು ಗಾಯಗೊಳಿಸಿದೆ. ಈ ವೇಳೆ ಸುರೇಶ ಭಯದಿಂದ ಕಿರುಚಿದ್ದಾನೆ. ಆತನ ಕಿರುಚಾಟ ಕೇಳಿ ತಾರಕ ನದಿ ಸಮೀಪದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಚಿರತೆ ಅಲ್ಲಿಂದ ಪರಾರಿಯಾಗಿದೆ.

ಈ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪುರಸಭೆ ಸದಸ್ಯರು ಚಿರತೆಯಿಂದ ದಾಳಿಗೊಳಗಾಗಿದ್ದ ಸುರೇಶ್ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಚಿರತೆ ದಾಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿಯಲು ಪಂಜರ ಇರಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications