ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ನಾಯಿ ಕದ್ದೊಯ್ಯುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 20: ನಗರದ ಬೆಮೆಲ್ ಲೇಔಟಿನ ನಿವಾಸಿಗಳಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಕಳೆದ ಒಂದು ವಾರದಿಂದಲೂ ನಾಯಿಗಳನ್ನು ಹೊತ್ತೊಯ್ದು ಇಲ್ಲಿನ ನಿವಾಸಿಗಳಿಗೆ ಆಗಾಗ್ಗೆ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ ಸೃಷ್ಟಿಸಿತ್ತು.

ನಾಲ್ಕು ತಿಂಗಳಿನಿಂದ ಸತಾಯಿಸುತ್ತಿದ್ದ ಚಿರತೆ ಕೊನೆಗೂ ಸಿಕ್ಕಿಬಿತ್ತುನಾಲ್ಕು ತಿಂಗಳಿನಿಂದ ಸತಾಯಿಸುತ್ತಿದ್ದ ಚಿರತೆ ಕೊನೆಗೂ ಸಿಕ್ಕಿಬಿತ್ತು

ಮಂಗಳವಾರ ರಾತ್ರಿ ಬೆಮೆಲ್ ಕಾರ್ಖಾನೆಯ ಆವರಣದಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವುದಾಗಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ದೇವರಾಜು ತಿಳಿಸಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಸುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು. ಅದರಂತೆ ಅರಣ್ಯ ಇಲಾಖೆ ಅಧಿಕಾರಿಗಳು ಒಂದು ವಾರದಿಂದಲೂ ಬೋನನ್ನು ಇರಿಸಿ ಅದಕ್ಕೆ ನಾಯಿಯನ್ನು ಕಟ್ಟಿ ಕಾಯುತ್ತಿದ್ದರು.

Leopard Capture In BEML Factory In Mysuru

ನಿನ್ನೆ ರಾತ್ರಿ ಸಮಯದಲ್ಲಿ ನಾಯಿಯನ್ನು ಹೊತ್ತೊಯ್ಯಲು ಬಂದ ಚಿರತೆ ರಾತ್ರಿ ಸುಮಾರು 2.30 ಗಂಟೆಯಲ್ಲಿ ಸೆರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆರೆ ಹಿಡಿಯಲಾದ ಗಂಡು ಚಿರತೆ 4 ವರ್ಷದ್ದಾಗಿದ್ದು, ಅದನ್ನು ಹಿಡಿದು ನಾಗರಹೊಳೆ ಅಭಯಾರಣ್ಯಕ್ಕೆ ಇಂದು ಬಿಡಲಾಯಿತು.

English summary
A Leopard that has created fear in the residents of the city's Beml layout has finally captured by Forest Department today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X