ಮೈಸೂರು; ಚಿರತೆ ನೋಡುವ ಭರದಲ್ಲಿ ಕೊರೊನಾ ಮರೆತ ಜನ

ಮೈಸೂರು, ಮೇ 22: ಕಳೆದ ಎರಡು ಮೂರು ತಿಂಗಳಿಗಳಿಂದ ತಿ. ನರಸೀಪುರ ತಾಲೂಕಿನ ಕುರುಬಾಳನಹುಂಡಿ ಗ್ರಾಮದ ಜನರಿಗೆ ವಿಪರೀತ ಕಾಟ ಕೊಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇದರಿಂದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಚಿರೆತ ಹಿಡಿಯುವ ಭರದಲ್ಲಿ ಕೊರೊನಾವನ್ನೂ ಮರೆತು ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು ಕಂಡುಬಂದಿದೆ.

Recommended Video

      ಚಿತ್ರದುರ್ಗದಲ್ಲಿ ಯಶಸ್ವಿಯಾಯ್ತು ಆಪರೇಷನ್ ಚಿರತೆ | Operation Cheetah | Chitradurga

      ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸುತಿತ್ತು. ಅಷ್ಟೇ ಅಲ್ಲದೆ ರಾತ್ರಿ ನಾಯಿಗಳನ್ನೂ ಹೊತ್ತೊಯ್ಯುತಿತ್ತು. ಇದರಿಂದಾಗಿ ಗ್ರಾಮಸ್ಥರಲ್ಲಿ ಜೀವ ಭಯ ಹುಟ್ಟಿಕೊಂಡಿತ್ತು. ಈ ಸಂಬಂಧ ಅರಣ್ಯ ಇಲಾಖೆಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ದೂರು ನೀಡಿದ್ದರು.

      People Gathered In Large Number To See Leopard In Mysuru

      ಈ ಹಿನ್ನೆಲೆಯಲ್ಲಿ ರೈತ ರಾಜು ಎಂಬುವವರ ಜಮೀನಿನಲ್ಲಿ ಬೋನು ಇರಿಸಿ ನಾಯಿಯನ್ನು ಕಟ್ಟಿ ಹಾಕಲಾಗಿತ್ತು. ಶುಕ್ರವಾರ ರಾತ್ರಿ ಬೇಟೆಯಾಡಲು ಬಂದ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಸೆರೆಯಾಗಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ನಿರ್ಧರಿಸಿದ್ದಾರೆ. ಈ ಸಮಯ ಚಿರತೆ ನೋಡಲು ನೂರಾರು ಸಂಖ್ಯೆಯಲ್ಲಿ ಜನರು ಮುಗಿಬಿದ್ದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+