ಮೈಸೂರು : 2 ಗಂಟೆಗಳ ಬಳಿಕ ಕೊನೆಗೂ ಬಲೆಗೆ ಬಿದ್ದ ಚಿರತೆ
ಮೈಸೂರು, ಅಕ್ಟೋಬರ್ 26 : ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಗುರುವಾರ ಮುಂಜಾನೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃಗಾಲಯದ ಆವರಣದಲ್ಲಿನ ಮರದ ಮೇಲೆ ಚಿರತೆ ಕಂಡು ಸ್ವತಃ ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದರು. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಗುರುವಾರ ಬೆಳಗ್ಗೆ ಮೃಗಾಲಯದ ಸಿಬ್ಬಂದಿಯೊಬ್ಬರು ಮೃಗಾಲಯ ಸುತ್ತ ಗಸ್ತು ತಿರುಗುತ್ತಿದ್ದಾಗ ಮರದ ಮೇಲೆ ಚಿರತೆಯನ್ನು ನೋಡಿದರು. ಕೂಡಲೇ ಅವರು ಮೇಲ್ವಿಚಾರಕರಿಗೆ ವಿಷಯ ತಿಳಿಸಿದರು. ಆದರೆ, ಚಿರತೆ ಮೃಗಾಯದಿಂದ ತಪ್ಪಿಸಿಕೊಂಡಿದ್ದೋ?, ಹೊರಗಿನಿಂದ ಬಂದಿದ್ದೋ? ಎಂಬ ಗೊಂದಲ ಉಂಟಾಯಿತು.
ತಕ್ಷಣ ಸಿಬ್ಬಂದಿಗಳು ಮೃಗಾಲಯದಲ್ಲಿರುವ ಚಿರತೆಗಳ ಬೋನುಗಳನ್ನು ಪರಿಶೀಲನೆ ನಡೆಸಿದರು. ಆಗ ಚಿರತೆ ಮೃಗಾಲಯದಿಂದ ತಪ್ಪಿಸಿಕೊಂಡಿಲ್ಲ. ಹೊರಗಿನಿಂದ ಬಂದು ಮೃಗಾಲಯಕ್ಕೆ ನುಗ್ಗಿದೆ ಎಂಬುದು ಖಚಿತವಾಯಿತು. ನಂತರ ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಯಿತು.
ಸುಮಾರು ಎರಡು ಗಂಟೆಗಳ ಕಾಲ ಮೃಗಾಲಯದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದರು. ಕಾರ್ಯಾಚರಣೆ ಮುಗಿಯುವ ತನಕ ಮೃಗಾಲಯಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು...

ಎಲ್ಲಿಂದ ಬಂತು ಚಿರತೆ?
ಕಾರಂಜಿ ಕೆರೆ ಬಳಿಯ ದ್ವಾರದಿಂದ ಮುಂಜಾನೆ ಚಿರತೆ ಮೃಗಾಯದೊಳಗೆ ನುಗ್ಗಿರಬೇಕು ಎಂದು ಶಂಕಿಸಲಾಗಿದೆ. ಬೆಳಗ್ಗೆ ಮರವೇರಿ ಕುಳಿತ ಚಿರತೆಯನ್ನು ಸಿಬ್ಬಂದಿಗಳು ನೋಡಿದ್ದು, ನಂತರ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಪ್ರವಾಸಿಗರಿಗೆ ಆತಂಕ
ಚಿರತೆ ಮೃಗಾಲಯದ ಆವರಣದಲ್ಲಿನ ಮರವೇರಿ ಕುಳಿತಿದೆ ಎಂಬುದು ತಿಳಿಯುವಾಗ ಹಲವು ಪ್ರವಾಸಿಗರು ಒಳಗಿದ್ದರು. ಇದರಿಂದಾಗಿ ಸಿಬ್ಬಂದಿ ಮತ್ತು ಪ್ರವಾಸಿಗರು ಆತಂಕಗೊಂಡರು.

ಪ್ರವಾಸಿಗರಿಗೆ ನಿಷೇಧ
ಚಿರತೆ ಪತ್ತೆಯಾದ ತಕ್ಷಣ ಎಲ್ಲಾ ಪ್ರವಾಸಿಗರನ್ನು ಮೃಗಾಲಯದಿಂದ ಹೊರಗೆ ಕಳಿಸಲಾಯಿತು. ಎರಡು ಗಂಟೆಗಳ ಕಾಲ ಮೃಗಾಲಯಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಯಿತು.

ಅರಣ್ಯ ಇಲಾಖೆ ಸಿಬ್ಬಂದಿ ಆಗಮನ
ಮೃಗಾಲಯಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿದರು. ನಂತರ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಚರ್ಚಿಸಿ ಚಿರತೆ ಹಿಡಿಯುವ ಕಾರ್ಯಾಚರಣೆಯನ್ನು ಆರಂಭಿಸಿದರು.

ಅರವಳಿಕೆ ಚುಚ್ಚುಮದ್ದು
ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಯಿತು. ಸುಮಾರು ಎರಡು ಗಂಟೆಗಳ ಬಳಿಕ ಕಾರ್ಯಾಚರಣೆ ಪೂರ್ಣಗೊಂಡಿತು. ಚಿರತೆ ಯಶಸ್ವಿಯಾಗಿ ಬೋನಿಗೆ ಬಿದ್ದಿತು.

ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ
ಚಿರತೆ ಯಾವ ಕಡೆಯಿಂದ ಬಂದಿದೆ ಎಂಬುದನ್ನು ಪರಿಶೀಲಿಸಿ, ಮತ್ತೆ ಹೊರಗಿನ ಪ್ರಾಣಿಗಳು ಒಳಗೆ ಪ್ರವೇಶಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮೃಗಾಲಯ ಅಧಿಕಾರಿಗಳು ಹೇಳಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications