ಕಬ್ಬಿನ ಗದ್ದೆಯಲ್ಲಿ ಕಂಡ ಚಿರತೆ ಮರಿ ಮುದ್ದಾಡಿದ ಗ್ರಾಮಸ್ಥರು
ಮೈಸೂರು, ಜನವರಿ 31: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಯೊಂದು ಜನರ ಕಣ್ಣಿಗೆ ಕಾಣಿಸಿಕೊಂಡಿದ್ದು, ಅದನ್ನು ಎತ್ತಿ ಮುದ್ದಾಡಿದ್ದಾರೆ ಗ್ರಾಮಸ್ಥರು.
ಪ್ರೀತಿಯ ಕೋತಿಗಾಗಿ ಮಂದಿರ ನಿರ್ಮಿಸುತ್ತಿದ್ದಾರೆ ಶಾಸಕ ಸಾ.ರಾ.ಮಹೇಶ್
ಕೆ.ಆರ್.ನಗರ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಕಬ್ಬು ಕಟಾವು ವೇಳೆ ಚಿರತೆ ಮರಿಯೊಂದು ಸಂತೋಷ್ ಎಂಬುವರ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದೆ. ಅದನ್ನು ಕಂಡು ಗ್ರಾಮಸ್ಥರು ಎತ್ತಿ ಮುದ್ದಾಡಿದ್ದಾರೆ. ಒಂದು ತಿಂಗಳ ಈ ಗಂಡು ಮರಿಯನ್ನು ರಕ್ಷಣೆ ಮಾಡಲಾಗಿದೆ.
ಕಬ್ಬು ಕಟಾವು ಮಾಡುತ್ತಿದ್ದವರು ಚಿರತೆ ಮರಿಯನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖಾ ಸಿಬ್ಬಂದಿಗಳು ಚಿರತೆ ಮರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಗದ್ದೆಯೊಳಗೆ ಮರಿ ಹಾಕಿರುವ ಚಿರತೆ ಕಾಡಿಗೆ ಮರಿಗಳನ್ನು ತೆಗೆದುಕೊಂಡು ಹೋಗುವಾಗ ಇದೊಂದು ಮರಿಯನ್ನು ಬಿಟ್ಟುಹೋಗಿರಬಹುದು ಎಂದು ಅಂದಾಜಿಸಲಾಗಿದೆ.
Comments
English summary
A leopard cub was found in the cane field In Mirle village of KR Nagar, The villagers cuddled it
Story first published: Friday, January 31, 2020, 13:28 [IST]