ಮೈಸೂರಿನಲ್ಲಿ ಯೋಗ ದಿನಾಚರಣೆ: ಯೋಗಪಟುಗಳ ನಿರಾಸಕ್ತಿ
ಮೈಸೂರು, ಜೂನ್ 10 : ಜೂನ್ 21ರಂದು ವಿಶ್ವವಿಖ್ಯಾತ ಯೋಗ ದಿನಾಚರಣೆ ಅಂಗವಾಗಿ ನಡೆಯಲಿರುವ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಜಿಲ್ಲಾಡಳಿತ ಗಿನ್ನಿಸ್ ದಾಖಲೆಗೆ ಅರ್ಜಿ ಸಲ್ಲಿಸದಿದ್ದ ಕಾರಣ ಯೋಗದ ತಾಲೀಮಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎರಡು ವರ್ಷದ ಹಿಂದಿನ ಗಿನ್ನಿಸ್ ದಾಖಲೆಯನ್ನು ಮುರಿಯಬೇಕೆಂದು ಮೈಸೂರಿನ ಸಂಘಸಂಸ್ಥೆಗಳು ತಯಾರಿ ನಡೆಸಿದ್ದವು. ಆದರೆ ಮೈಸೂರು ಜಿಲ್ಲಾಡಳಿತ ಈ ಬಾರಿ ಗಿನ್ನಿಸ್ ದಾಖಲೆಗೆ ಹೋಗದಿರಲು ಪೂರ್ವಭಾವಿ ಸಭೆಯಲ್ಲಿ ಪ್ರಕಟಿಸಿತು. ಈ ಹೇಳಿಕೆ ಹಿನ್ನೆಲೆ ನಿರಾಸೆಗೊಂಡಿರುವ ಯೋಗಪಟುಗಳು ಯೋಗ ತಾಲೀಮಿಗೂ ಆಸಕ್ತಿ ತೋರಿಸುತ್ತಿಲ್ಲ. ಪರಿಣಾಮ ಮೈಸೂರು ಅರಮನೆ ಅಂಗಳದಲ್ಲಿ ನಡೆದ ಯೋಗ ತಾಲೀಮಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯೋಗಪಟುಗಳು ಭಾಗವಹಿಸಿರಲಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಹ ಯೋಗ ತಾಲೀಮಿನ ಕಡೆ ಮುಖ ಹಾಕದಿದ್ದದ್ದು ವಿಪರ್ಯಾಸ.
ಕಳೆದ ವಾರ ನಡೆದ ತಾಲೀಮಿನಲ್ಲಿ 500 ಮಂದಿಯಷ್ಟೇ ಭಾಗವಹಿಸಿದ್ದರು. ಜಿಲ್ಲಾಡಳಿತ ಈ ಬಾರಿ ಗಿನ್ನಿಸ್ ದಾಖಲೆಗೆ ಅರ್ಜಿ ಸಲ್ಲಿಸದಿರಲು ನಿರ್ಧರಿಸಿತು. ಜತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆಯುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದಿಲ್ಲ ಎಂಬುದೂ ಖಚಿತಗೊಂಡಿತು. ಇದರಿಂದ ಜನಪ್ರತಿನಿಧಿಗಳೂ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಗಪಟುಗಳು ತಾಲೀಮಿನಲ್ಲಿ ಭಾಗವಹಿಸಲಿಲ್ಲ.

ಸಂಘಟಕರು ಯೋಗ ದಿನಾಚರಣೆಯಂದು ಒಂದು ಲಕ್ಷ ಮಂದಿಯನ್ನು ಸೇರಿಸುವ ಗುರಿ ಹೊಂದಿದ್ದಾರೆ. ಸದ್ಯ ನಡೆದ 2ನೇ ತಾಲೀಮಿನಲ್ಲಿ 2,500 ಮಂದಿ ಭಾಗವಹಿಸಿದ್ದರು. ಮುಂದಿನ ವಾರ ರೇಸ್ಕೋರ್ಸ್ ನಲ್ಲಿ ಮತ್ತೊಂದು ಸುತ್ತಿನ ತಾಲೀಮು ನಡೆಯಲಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications