ಮೈಸೂರಿನಲ್ಲಿ ಯೋಗ ದಿನಾಚರಣೆ: ಯೋಗಪಟುಗಳ ನಿರಾಸಕ್ತಿ
ಮೈಸೂರು, ಜೂನ್ 10 : ಜೂನ್ 21ರಂದು ವಿಶ್ವವಿಖ್ಯಾತ ಯೋಗ ದಿನಾಚರಣೆ ಅಂಗವಾಗಿ ನಡೆಯಲಿರುವ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಜಿಲ್ಲಾಡಳಿತ ಗಿನ್ನಿಸ್ ದಾಖಲೆಗೆ ಅರ್ಜಿ ಸಲ್ಲಿಸದಿದ್ದ ಕಾರಣ ಯೋಗದ ತಾಲೀಮಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎರಡು ವರ್ಷದ ಹಿಂದಿನ ಗಿನ್ನಿಸ್ ದಾಖಲೆಯನ್ನು ಮುರಿಯಬೇಕೆಂದು ಮೈಸೂರಿನ ಸಂಘಸಂಸ್ಥೆಗಳು ತಯಾರಿ ನಡೆಸಿದ್ದವು. ಆದರೆ ಮೈಸೂರು ಜಿಲ್ಲಾಡಳಿತ ಈ ಬಾರಿ ಗಿನ್ನಿಸ್ ದಾಖಲೆಗೆ ಹೋಗದಿರಲು ಪೂರ್ವಭಾವಿ ಸಭೆಯಲ್ಲಿ ಪ್ರಕಟಿಸಿತು. ಈ ಹೇಳಿಕೆ ಹಿನ್ನೆಲೆ ನಿರಾಸೆಗೊಂಡಿರುವ ಯೋಗಪಟುಗಳು ಯೋಗ ತಾಲೀಮಿಗೂ ಆಸಕ್ತಿ ತೋರಿಸುತ್ತಿಲ್ಲ. ಪರಿಣಾಮ ಮೈಸೂರು ಅರಮನೆ ಅಂಗಳದಲ್ಲಿ ನಡೆದ ಯೋಗ ತಾಲೀಮಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯೋಗಪಟುಗಳು ಭಾಗವಹಿಸಿರಲಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಹ ಯೋಗ ತಾಲೀಮಿನ ಕಡೆ ಮುಖ ಹಾಕದಿದ್ದದ್ದು ವಿಪರ್ಯಾಸ.
ಕಳೆದ ವಾರ ನಡೆದ ತಾಲೀಮಿನಲ್ಲಿ 500 ಮಂದಿಯಷ್ಟೇ ಭಾಗವಹಿಸಿದ್ದರು. ಜಿಲ್ಲಾಡಳಿತ ಈ ಬಾರಿ ಗಿನ್ನಿಸ್ ದಾಖಲೆಗೆ ಅರ್ಜಿ ಸಲ್ಲಿಸದಿರಲು ನಿರ್ಧರಿಸಿತು. ಜತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆಯುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದಿಲ್ಲ ಎಂಬುದೂ ಖಚಿತಗೊಂಡಿತು. ಇದರಿಂದ ಜನಪ್ರತಿನಿಧಿಗಳೂ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಗಪಟುಗಳು ತಾಲೀಮಿನಲ್ಲಿ ಭಾಗವಹಿಸಲಿಲ್ಲ.

ಸಂಘಟಕರು ಯೋಗ ದಿನಾಚರಣೆಯಂದು ಒಂದು ಲಕ್ಷ ಮಂದಿಯನ್ನು ಸೇರಿಸುವ ಗುರಿ ಹೊಂದಿದ್ದಾರೆ. ಸದ್ಯ ನಡೆದ 2ನೇ ತಾಲೀಮಿನಲ್ಲಿ 2,500 ಮಂದಿ ಭಾಗವಹಿಸಿದ್ದರು. ಮುಂದಿನ ವಾರ ರೇಸ್ಕೋರ್ಸ್ ನಲ್ಲಿ ಮತ್ತೊಂದು ಸುತ್ತಿನ ತಾಲೀಮು ನಡೆಯಲಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications