ಸೈಕಲ್ ಏರಿ ಇಂಧನ ಉಳಿತಾಯದ ಜಾಗೃತಿ ಮೂಡಿಸುವ ಲೈಬ್ರರಿ ಡಿಡಿ
ಮೈಸೂರು,ಜು6: ಮೈಸೂರು ಜಿಲ್ಲೆ ಹಾಗೂ ನಗರ ಸಾರ್ವಜನಿಕ ಗ್ರಂಥಾಲಯದ ಉಪ ನಿರ್ದೇಶಕ ಬಿ. ಮಂಜುನಾಥ್ ಜನರಲ್ಲಿ ಪುಸ್ತಕ ಪ್ರೇಮ ಬೆಳೆಸುವ ಉದ್ದೇಶದಿಂದ ಸೈಕಲ್ ಏರಿ ಜಾಗೃತಿ ಮೂಡಿಸುತ್ತಿದ್ದಾರೆ.
ಪುಸ್ತಕದ ಜೊತೆ ಇಂಧನ ಉಳಿತಾಯದ ಬಗ್ಗೆಯೂ ಅರಿವು ಮೂಡಿಸುತ್ತಿದ್ದಾರೆ. ಸಾಮಾನ್ಯವಾಗಿ ತಾಲೂಕು ಗ್ರಂಥಾಲಯಕ್ಕೆ ಮಂಜುನಾಥ್ ದಾಖಲೆ ಪರಿಶೀಲನೆಗೆಂದು ಪ್ರತಿ ತಿಂಗಳು ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವಾಗಲೆಲ್ಲಾ ಕಾರು ಬಳಸುವುದು ವಾಡಿಕೆ.
ಮಂಜುನಾಥ್ ಸೈಕಲ್ಏರಿ ಇಡೀ ಜಿಲ್ಲೆಯನ್ನು ಸುತ್ತಾಡಿ ಬಂದಿದ್ದಾರೆ. ಎರಡು ದಿನದಲ್ಲಿ 270 ಕಿ. ಮೀ. ಸೈಕಲ್ ತುಳಿದಿದ್ದಾರೆ. ಆ ಮೂಲಕ ಪುಸ್ತಕ ಹಾಗೂ ಇಂಧನ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಸೈಕಲ್ನಲ್ಲಿ ಸಂಚಾರ
ಮೊದಲ ದಿನ ಕೆ .ಆರ್. ನಗರ, ಹುಣಸೂರು, ಪಿರಿಯಾಪಟ್ಟಣ ಗ್ರಂಥಾಲಯಕ್ಕೆ ಭೇಟಿ ನೀಡಿದ ಡಿಡಿ ಬಿ. ಮಂಜುನಾಥ್, ಎಚ್.ಡಿ.ಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ನಂತರ ಎರಡನೇ ದಿನ ಸರಗೂರು, ತಿ.ನರಸೀಪುರ, ನಂಜನಗೂಡು ಮೂಲಕ ಮೈಸೂರು ತಲುಪಿದ್ದಾರೆ.
ಸರ್ಕಾರಿ ವ್ಯವಸ್ಥೆ ಹಾಗೂ ಸರ್ಕಾರಿ ನೌಕರರ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆಲಸ್ಯ ಭಾವನೆ. ಬಹುತೇಕ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸದಿರುವುದು, ಸಾರ್ವಜನಿಕರಿಗೆ ಸ್ಪಂದಿಸದಿರು ವುದು ಇದಕ್ಕೆ ಕಾರಣ. ಆದರೆ, ನಗರ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಬಿ. ಮಂಜುನಾಥ್ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಸೈಕಲ್ನಲ್ಲಿ ಸಂಚರಿಸಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸಲು ಪ್ರಯತ್ನಸಿದ್ದಾರೆ.

ಸೈಕಲ್ ನಗರಿಯೂ ಹೌದು
"ಮೈಸೂರು ಅರಮನೆ ನಗರಿ ಹೇಗೋ ಸೈಕಲ್ ನಗರಿ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಇಂಧನದ ಬೆಲೆ ದುಬಾರಿ ಆಗಿದೆ. ಅಲ್ಲದೆ, ಸೈಕಲ್ ಪರಿಸರ ಸ್ನೇಹಿ. ಅಲ್ಲದೆ, ಪುಸ್ತಕ ಓದುವ ಸಂಸ್ಕೃತಿ ಯುವಜನರಲ್ಲಿ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸೈಕಲ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಏರಿ ಮೈಸೂರಿನ ಎಲ್ಲಾ ತಾಲೂಕು ಗ್ರಂಥಾಲಯಕ್ಕೆ ಭೇಟಿ ನೀಡಿ ಕಚೇರಿ ಕೆಲಸಮುಗಿಸಿದ್ದೇನೆ," ಎನ್ನುತ್ತಾರೆ ಸಾರ್ವಜನಿಕ ಗ್ರಂಥಾಲಯದ ಉಪ ನಿರ್ದೇಶಕ ಬಿ. ಮಂಜುನಾಥ್.

ಗ್ರಂಥಾಲಯಗಳಲ್ಲಿ 10 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳು
ಸೈಕಲ್ ಜಾಥಾ ವೇಳೆ ಬಿ. ಮಂಜುನಾಥ್ ಅವರು ಗ್ರಂಥಾಲಯ ಇಲಾಖೆ, ಗ್ರಂಥಾಲಯಗಳು, ಶತಮಾನೋತ್ಸವ ಪೂರೈಸಿರುವ ನಗರ ಕೇಂದ್ರ ಗಂಥಾಲಯದ ಐತಿಹ್ಯ ಪರಿಚಯಿಸುವ ಕೆಲಸವನ್ನೂ ಮಾಡಿದ್ದಾರೆ. ಪೀಪಲ್ಸ್ ಪಾರ್ಕ್ ಆವರಣದ ವಿಶಾಲ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೂತನ ಗ್ರಂಥಾಲಯದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಗರದ ಕೇಂದ್ರ ಗ್ರಂಥಾಲಯದ 32ಕ್ಕೂ ಹೆಚ್ಚು ಶಾಖಾ ಗ್ರಂಥಾಲಯಗಳಲ್ಲಿ 10 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳು, ನಗರ ಕೇಂದ್ರ ಗ್ರಂಥಾಲಯ ಒಂದರಲ್ಲಿಯೇ 1 ಲಕ್ಷ ಪುಸ್ತಕಗಳ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಸೈಕಲ್ ಓಡಿಸುವ ಅಭ್ಯಾಸ
2017ರಲ್ಲಿ ಮೈಸೂರಿಗೆ ಸೈಕಲ್ ಬಳಕೆ ಹೆಚ್ಚು ಮಾಡುವ ಟ್ರಿಣ್ ಟ್ರಿಣ್ ಯೋಜನೆ ಜಾರಿಗೆ ಬಂತು. ಇದರ ಉದ್ಘಾಟನೆಗೆ ಮಂಜುನಾಥ್ ಕೂಡ ಹೋಗಿದ್ದರು. ಈ ವೇಳೆ ಅಂದಿನ ಪಾಲಿಕೆ ಆಯುಕ್ತರಾದ ಜಗದೀಶ್ ಅವರೊಂದಿಗೆ ಮಂಜುನಾಥ್ ಸೈಕಲ್ಏರಿದ್ದಾರೆ. ಆದರೆ ಸ್ವಲ್ಪ ದೂರ ಹೋಗುತ್ತಿದ್ದಂತೆ ತ್ರಾಸಗೊಂಡಿದ್ದಾರೆ. ಅಂದೆ ಸೈಕಲ್ ಓಡಿಸುವುದನ್ನು ಅಭ್ಯಾಸ ಶುರು ಮಾಡಿದ್ದಾರೆ. ಇದೀಗ ಸರಾಗವಾಗಿ ಮಂಜುನಾಥ್ ಅವರು ಸೈಕಲ್ ತುಳಿಯುತ್ತಾರೆ. ಚಿಕ್ಕಮಗಳೂರಿನಲ್ಲಿ ನಡೆದ ಸೈಕಲ್ ರೇಸ್ ನಲ್ಲಿ ಭಾಗವಹಿಸಿದ್ದಾರೆ. ಚಾರ್ಮಡಿಘಾಟ್ ಗೂ ಹೋಗಿ ಬಂದಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications