ಸೈಕಲ್ ಏರಿ ಇಂಧನ ಉಳಿತಾಯದ ಜಾಗೃತಿ ಮೂಡಿಸುವ ಲೈಬ್ರರಿ ಡಿಡಿ
ಮೈಸೂರು,ಜು6: ಮೈಸೂರು ಜಿಲ್ಲೆ ಹಾಗೂ ನಗರ ಸಾರ್ವಜನಿಕ ಗ್ರಂಥಾಲಯದ ಉಪ ನಿರ್ದೇಶಕ ಬಿ. ಮಂಜುನಾಥ್ ಜನರಲ್ಲಿ ಪುಸ್ತಕ ಪ್ರೇಮ ಬೆಳೆಸುವ ಉದ್ದೇಶದಿಂದ ಸೈಕಲ್ ಏರಿ ಜಾಗೃತಿ ಮೂಡಿಸುತ್ತಿದ್ದಾರೆ.
ಪುಸ್ತಕದ ಜೊತೆ ಇಂಧನ ಉಳಿತಾಯದ ಬಗ್ಗೆಯೂ ಅರಿವು ಮೂಡಿಸುತ್ತಿದ್ದಾರೆ. ಸಾಮಾನ್ಯವಾಗಿ ತಾಲೂಕು ಗ್ರಂಥಾಲಯಕ್ಕೆ ಮಂಜುನಾಥ್ ದಾಖಲೆ ಪರಿಶೀಲನೆಗೆಂದು ಪ್ರತಿ ತಿಂಗಳು ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವಾಗಲೆಲ್ಲಾ ಕಾರು ಬಳಸುವುದು ವಾಡಿಕೆ.
ಮಂಜುನಾಥ್ ಸೈಕಲ್ಏರಿ ಇಡೀ ಜಿಲ್ಲೆಯನ್ನು ಸುತ್ತಾಡಿ ಬಂದಿದ್ದಾರೆ. ಎರಡು ದಿನದಲ್ಲಿ 270 ಕಿ. ಮೀ. ಸೈಕಲ್ ತುಳಿದಿದ್ದಾರೆ. ಆ ಮೂಲಕ ಪುಸ್ತಕ ಹಾಗೂ ಇಂಧನ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಸೈಕಲ್ನಲ್ಲಿ ಸಂಚಾರ
ಮೊದಲ ದಿನ ಕೆ .ಆರ್. ನಗರ, ಹುಣಸೂರು, ಪಿರಿಯಾಪಟ್ಟಣ ಗ್ರಂಥಾಲಯಕ್ಕೆ ಭೇಟಿ ನೀಡಿದ ಡಿಡಿ ಬಿ. ಮಂಜುನಾಥ್, ಎಚ್.ಡಿ.ಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ನಂತರ ಎರಡನೇ ದಿನ ಸರಗೂರು, ತಿ.ನರಸೀಪುರ, ನಂಜನಗೂಡು ಮೂಲಕ ಮೈಸೂರು ತಲುಪಿದ್ದಾರೆ.
ಸರ್ಕಾರಿ ವ್ಯವಸ್ಥೆ ಹಾಗೂ ಸರ್ಕಾರಿ ನೌಕರರ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆಲಸ್ಯ ಭಾವನೆ. ಬಹುತೇಕ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸದಿರುವುದು, ಸಾರ್ವಜನಿಕರಿಗೆ ಸ್ಪಂದಿಸದಿರು ವುದು ಇದಕ್ಕೆ ಕಾರಣ. ಆದರೆ, ನಗರ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಬಿ. ಮಂಜುನಾಥ್ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಸೈಕಲ್ನಲ್ಲಿ ಸಂಚರಿಸಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸಲು ಪ್ರಯತ್ನಸಿದ್ದಾರೆ.

ಸೈಕಲ್ ನಗರಿಯೂ ಹೌದು
"ಮೈಸೂರು ಅರಮನೆ ನಗರಿ ಹೇಗೋ ಸೈಕಲ್ ನಗರಿ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಇಂಧನದ ಬೆಲೆ ದುಬಾರಿ ಆಗಿದೆ. ಅಲ್ಲದೆ, ಸೈಕಲ್ ಪರಿಸರ ಸ್ನೇಹಿ. ಅಲ್ಲದೆ, ಪುಸ್ತಕ ಓದುವ ಸಂಸ್ಕೃತಿ ಯುವಜನರಲ್ಲಿ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸೈಕಲ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಏರಿ ಮೈಸೂರಿನ ಎಲ್ಲಾ ತಾಲೂಕು ಗ್ರಂಥಾಲಯಕ್ಕೆ ಭೇಟಿ ನೀಡಿ ಕಚೇರಿ ಕೆಲಸಮುಗಿಸಿದ್ದೇನೆ," ಎನ್ನುತ್ತಾರೆ ಸಾರ್ವಜನಿಕ ಗ್ರಂಥಾಲಯದ ಉಪ ನಿರ್ದೇಶಕ ಬಿ. ಮಂಜುನಾಥ್.

ಗ್ರಂಥಾಲಯಗಳಲ್ಲಿ 10 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳು
ಸೈಕಲ್ ಜಾಥಾ ವೇಳೆ ಬಿ. ಮಂಜುನಾಥ್ ಅವರು ಗ್ರಂಥಾಲಯ ಇಲಾಖೆ, ಗ್ರಂಥಾಲಯಗಳು, ಶತಮಾನೋತ್ಸವ ಪೂರೈಸಿರುವ ನಗರ ಕೇಂದ್ರ ಗಂಥಾಲಯದ ಐತಿಹ್ಯ ಪರಿಚಯಿಸುವ ಕೆಲಸವನ್ನೂ ಮಾಡಿದ್ದಾರೆ. ಪೀಪಲ್ಸ್ ಪಾರ್ಕ್ ಆವರಣದ ವಿಶಾಲ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೂತನ ಗ್ರಂಥಾಲಯದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಗರದ ಕೇಂದ್ರ ಗ್ರಂಥಾಲಯದ 32ಕ್ಕೂ ಹೆಚ್ಚು ಶಾಖಾ ಗ್ರಂಥಾಲಯಗಳಲ್ಲಿ 10 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳು, ನಗರ ಕೇಂದ್ರ ಗ್ರಂಥಾಲಯ ಒಂದರಲ್ಲಿಯೇ 1 ಲಕ್ಷ ಪುಸ್ತಕಗಳ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಸೈಕಲ್ ಓಡಿಸುವ ಅಭ್ಯಾಸ
2017ರಲ್ಲಿ ಮೈಸೂರಿಗೆ ಸೈಕಲ್ ಬಳಕೆ ಹೆಚ್ಚು ಮಾಡುವ ಟ್ರಿಣ್ ಟ್ರಿಣ್ ಯೋಜನೆ ಜಾರಿಗೆ ಬಂತು. ಇದರ ಉದ್ಘಾಟನೆಗೆ ಮಂಜುನಾಥ್ ಕೂಡ ಹೋಗಿದ್ದರು. ಈ ವೇಳೆ ಅಂದಿನ ಪಾಲಿಕೆ ಆಯುಕ್ತರಾದ ಜಗದೀಶ್ ಅವರೊಂದಿಗೆ ಮಂಜುನಾಥ್ ಸೈಕಲ್ಏರಿದ್ದಾರೆ. ಆದರೆ ಸ್ವಲ್ಪ ದೂರ ಹೋಗುತ್ತಿದ್ದಂತೆ ತ್ರಾಸಗೊಂಡಿದ್ದಾರೆ. ಅಂದೆ ಸೈಕಲ್ ಓಡಿಸುವುದನ್ನು ಅಭ್ಯಾಸ ಶುರು ಮಾಡಿದ್ದಾರೆ. ಇದೀಗ ಸರಾಗವಾಗಿ ಮಂಜುನಾಥ್ ಅವರು ಸೈಕಲ್ ತುಳಿಯುತ್ತಾರೆ. ಚಿಕ್ಕಮಗಳೂರಿನಲ್ಲಿ ನಡೆದ ಸೈಕಲ್ ರೇಸ್ ನಲ್ಲಿ ಭಾಗವಹಿಸಿದ್ದಾರೆ. ಚಾರ್ಮಡಿಘಾಟ್ ಗೂ ಹೋಗಿ ಬಂದಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications