ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ದೀಪ ಹಚ್ಚಿದರೆ ವೈರಸ್ ಗಳು ಶಾಖಕ್ಕೆ ಸಾಯುತ್ತವೆ": ಶಾಸಕ ರಾಮದಾಸ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 04: "ದೀಪ ಹಚ್ಚುವುದರ ಹಿಂದೆ ಒಂದು ಕಾರಣವಿದೆ. ದೀಪ ಹಚ್ಚಿದರೆ ವೈರಸ್​ಗಳು ಆ ದೀಪದ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ" ಎಂದು ಬಿಜೆಪಿ ಶಾಸಕ ಎಸ್​.ಎ. ರಾಮದಾಸ್ ಹೇಳಿದ್ದಾರೆ.

ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಶದ ಜನರೆಲ್ಲರೂ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಮೋಂಬತ್ತಿ ಅಥವಾ ಮೊಬೈಲ್ ಟಾರ್ಚ್​ ಬೆಳಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆನೀಡಿದ್ದರು.

 ಮೈಸೂರಲ್ಲಿ ಸ್ಥಾಪನೆಯಾಯ್ತು ಕೋವಿಡ್ ಕೇರ್‌ ಟೀಮ್ ಮೈಸೂರಲ್ಲಿ ಸ್ಥಾಪನೆಯಾಯ್ತು ಕೋವಿಡ್ ಕೇರ್‌ ಟೀಮ್

ಹೀಗಾಗಿ ಶಾಸಕ ರಾಮದಾಸ್ ಮೈಸೂರಿನ ದಸರಾ ವಸ್ತು ಪ್ರದರ್ಶನದ ಮಾರುಕಟ್ಟೆಯಲ್ಲಿ ಮೋಂಬತ್ತಿ, ಮಾಸ್ಕ್​ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, "ಧಾನಿ ಮೋದಿ ದೀಪ ಹಚ್ಚಲು ಹೇಳಿರುವುದರ ಹಿಂದೆ ಕಾರಣವಿದೆ. ದೀಪ ಹಚ್ಚಿದರೆ ವೈರಸ್​ಗಳು ದೀಪದ ಬಳಿ ಬರುತ್ತವೆ. ಆಗ ಅವು ದೀಪದ ಶಾಖಕ್ಕೆ ಸಾಯುತ್ತವೆ" ಎಂದು ತಮ್ಮದೇ ವ್ಯಾಖ್ಯಾನ ನೀಡಿದ್ದಾರೆ.

Virus Will Die By Lamp Heat Said Ramdas

"ನಮ್ಮ ಮನೆಯ ಒಳಗೆ ವೈರಸ್ ಇರಬಾರದು ಎಂದು ಮೋದಿ ಈ ಚಿಂತನೆ ಮಾಡಿದ್ದಾರೆ. ಹಾಗಾಗಿ ನಾಳೆ ರಾತ್ರಿ ಎಲ್ಲರೂ ದೀಪ ಹಚ್ಚಿ ಕೊರೊನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿ" ಎಂದು ಮೈಸೂರಿನಲ್ಲಿ ಶಾಸಕ ಎಸ್. ರಾಮದಾಸ್ ಮನವಿ ಮಾಡಿದ್ದಾರೆ.

English summary
"virus will die by lamps heat" said mla ramdas in mysuru. He gave this reaction to modi"s call for lighting lamp on april 5,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X