ಮೈಸೂರು ಮೃಗಾಲಯದಲ್ಲಿ ಗುಜರಾತ್ ನಿಂದ ತಂದಿದ್ದ ಸಿಂಹಿಣಿ ಸಾವು
ಮೈಸೂರು, ಡಿಸೆಂಬರ್ 28 : ಗಂಡು ಸಿಂಹದೊಂದಿಗೆ ಕಾದಾಡಿ ಗಾಯಗೊಂಡಿದ್ದ ಹೆಣ್ಣು ಸಿಂಹ 'ರನಿತಾ' ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಮೃತಪಟ್ಟಿದೆ.
ಗುಜರಾತಿನ ಜುನಾಗಡ್ ನಗರದ ಸಕ್ಕರ್ ಭಾಗ್ ಮೃಗಾಲಯದಿಂದ 2016ರ ಆಗಸ್ಟ್ 4ರಂದು ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಮೃಗಾಲಯಕ್ಕೆ ತರಲಾಗಿತ್ತು. ಡಿ.26ರಂದು ಗಂಡು ಸಿಂಹದೊಂದಿಗೆ ಕಾದಾಡಿದ ರನಿತಾಗೆ ಬಲ ಮತ್ತು ಎಡ ಭುಜಗಳಲ್ಲಿ ಸಣ್ಣಪುಟ್ಟ ಗಾಯಗಳಾಗಿತ್ತು.

ಆ ನಂತರ ಡಿ.27ರಂದು ಆಹಾರ ಸೇವಿಸುವುದಕ್ಕೆ ನಿರಾಸಕ್ತಿ ತೋರಿಸಿದ್ದನ್ನು ಗಮನಿಸಿ, ಕೂಡಲೇ ಚಿಕಿತ್ಸೆ ನೀಡಲು ಮೃಗಾಲಯ ವೈದ್ಯರು ಮುಂದಾಗಿದ್ದರು. ರಕ್ತ ಪರೀಕ್ಷೆಯ ವರದಿಯಂತೆ ಸಾಮಾನ್ಯ ಸೋಂಕು ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಯಿತು.
ಆದರೂ ಸಿಂಹದ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಹಿನ್ನೆಲೆಯಲ್ಲಿ ರಕ್ತ ಮತ್ತು ಅಂಗಗಳ ಮಾದರಿಯನ್ನು ಹೈದರಾಬಾದಿನ ಸಿಸಿಎಂಬಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಸಿಂಹದ ಚೇತರಿಕೆಗಾಗಿ ತಜ್ಞರನ್ನು ಕರೆಸಿ ತೀವ್ರ ಪರೀಕ್ಷೆಗಳನ್ನು ನಡೆಸಲಾಯಿತು.
ಆದರೆ ಹಿಂದಿನ ಕಾಲುಗಳಿಗೆ ಪಾರ್ಶ್ವವಾಯು ಪೀಡಿತವಾದ ರನಿತಾ ನಡೆಯಲಾರದೆ ಮೈ ಚಾಚಿಕೊಂಡಿತ್ತು. ಅಲ್ಲದೇ ಒಂದು ವಾರದಿಂದ ಆಹಾರ ಸೇವನೆಯನ್ನೂ ತ್ಯಜಿಸಿತ್ತು. ತಜ್ಞರ ಸಲಹೆಯಂತೆ ಎಲ್ಲ ಚಿಕಿತ್ಸೆಗಳನ್ನು ನೀಡಿದರೂ ಆರೋಗ್ಯದಲ್ಲಿ ಚೇತರಿಕೆಯಾಗದೆ ಡಿ.27ರ ಸಂಜೆ 4.30ಕ್ಕೆ ಮೃತಪಟ್ಟಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications