ಜಂಬೂ ಸವಾರಿಗೆ ಚಾಲನೆ, ತಾಯಿ ಚಾಮುಂಡೇಶ್ವರಿ ಹೊತ್ತು ಹೊರಟ ರಾಜಗಜ
ಮೈಸೂರು, ಅಕ್ಟೋಬರ್ 19: ಮೈಸೂರು ದಸರಾದ ಹೆಮ್ಮೆ ಜಂಬೂ ಸವಾರಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 2:30 ರಿಂದ 3:15 ರ ನಡುವಿನ ಸಮಯದಲ್ಲಿ ನಂದಿ ಧ್ವಜ ಪೂಜೆ ನಂತರ ಜಂಬೂ ಸವಾರಿ ಆರಂಭವಾಗಲಿದೆ.
ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾದ ತಾಯಿ ಚಾಮುಂಡೇಶ್ವರಿ ಅವರ ಚಿನ್ನದ ಮೂರ್ತಿಯನ್ನು ಹೊತ್ತು ಪಟ್ಟದ ಆನೆ ಅರ್ಜುನ ಹೊತ್ತು ರಾಜಬೀದಿಯಲ್ಲಿ ಮೆರವಣಿಗೆಯಲ್ಲಿ ಸಾಗಲಿದ್ದಾನೆ.

ಕುಮಾರಸ್ವಾಮಿ ಹಾಗೂ ಕೆಲವು ಸಚಿವರು ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಮಹರಾಜ ಯಧುವೀರ ಅವರು ಇರಲಿದ್ದಾರೆ.
ಕಲಾತಂಡಗಳು, ಜನಪದ ತಂಡಗಳು, ಕುಂಭ ಹತಹೊತ್ತ ಮಹಿಳೆಯರು ಜಂಬೂ ಸವಾರಿಯ ಜೊತೆ ಸಾಗಲಿದ್ದು, ಕರ್ನಾಟಕದ ಇತಿಹಾಸ, ಸಂಸ್ಕೃತಿ ಬಿಂಬಿಸುವ 42 ಸ್ಥಬ್ದ ಚಿತ್ರಗಳು ಜನರ ಕಣ್ ತಣಿಸಲಿವೆ.

ಅಂಬಾರಿ ಸಾಗುತ್ತಿರುವ ದಾರಿಯ ಇಕ್ಕೆಲದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿರುವ ಜನಸ್ತೋಮ. ಹೂಗಳನ್ನು ಎರಚಿ ಕೈಮುಗಿಯುತ್ತಿರುವ ಜನಸಮೂಹ.
ಜಯಚಾಮರಾಜೇಂದ್ರ ವೃತ್ತ, ಕೃಷ್ಣರಾಜೇಂದ್ರ ವೃತ್ತ, ಮಾರ್ಕೆಟ್ ರಸ್ತೆ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪವನ್ನು ಜಂಬೂ ಸವಾರಿ ತಲುಪುತ್ತದೆ. ಒಟ್ಟು ಐದುವರೆ ಕಿ.ಮೀ ಜಂಬೂ ಸವಾರಿ ಸಾಗುತ್ತದೆ.
7ನೇ ಬಾರಿ ಅಂಬಾರಿ ಹೊತ್ತಿರುವ ಅರ್ಜುನ ಸರಿ ಸುಮಾರಿ 1000 ಕೆ.ಜಿ ಭಾರವನ್ನು ಹೊತ್ತು ಸಾಗುತ್ತಿದ್ದಾನೆ. ಆತನ ಪಕ್ಕ ಕುಮ್ಕಿ ಆನೆಗಳು ಸಾಗುತ್ತಿವೆ. ಹಿಂದೆ ಗಜಪಡೆ ಸಾಗಿಬರುತ್ತಿದೆ.
ಕಾಲಾಳುಗಳು, ಅಶ್ವಪಡೆ, ಪೊಲೀಸ್ ಪಡೆ, ಪೊಲೀಸ್ ಬ್ಯಾಂಡ್, ಸ್ಕಾಟ್ಲ್ಯಾಂಡ್ ಬ್ಯಾಂಡ್ ಇನ್ನೂ ಹಲವು ದಳಗಳು ಅಂಬಾರಿಯ ಹಿಂದೆ ಸಾಲಾಗಿ ಗತ್ತಿನಿಂದ ಸಾಗುತ್ತಿವೆ.
ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ. ಅಂಬಾರಿ ಹೊತ್ತ ಅರ್ಜುನ ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. ಆತನ ಪಕ್ಕ ಕುಮ್ಕಿ ಆನಿಗಳಾದ ಕಾವೇರಿ ಮತ್ತು ವರಲಕ್ಷ್ಮಿ ಜೊತೆಗೂಡಿವೆ.
ಅಂಬಾರಿಯನ್ನು ಕಟ್ಟುವ ಕಾರ್ಯ ಪ್ರಾರಂಭ. ಮುಸ್ಲಿಂ ಕುಟುಂಬವೊಂದು ಅಂಬಾರಿಯನ್ನು ಕಟ್ಟುವ ಕಾರ್ಯವನ್ನು ತಲೆತಲಾಂತರದಿಂದ ಮಾಡಿಕೊಂಡು ಬರುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ದೇವನಹಳ್ಳಿ ಕೋಟೆಯ ಸ್ಥಬ್ಧ ಚಿತ್ರವನ್ನು ಮೈಸೂರು ದಸರಾದಲ್ಲಿ ಪ್ರದರ್ಶಿಸಲಾಯಿತು. ಬೆಂಗಳೂರು ನಗರ ಜಿಲ್ಲೆಯು ಸ್ವಚ್ಛತಾ ಅಭಿಯಾನ ಕುರಿತ ಸ್ತಬ್ಧ ಚಿತ್ರ ಪ್ರದರ್ಶಿಸಿತು.
ಡೊಳ್ಳು ಕುಣಿತ, ವೀರಗಾಸೆ, ವಾಲಗ, ವೀರಭದ್ರನ ಕುಣಿತ, ನಂದಿ ಧ್ವಜ ಕುಣಿತ, ಮದ್ದಳೆ ಕಲೆ, ಜಗ್ಗಲಿಗೆ ಇನ್ನೂ ಹಲವು ಕಲಾ ತಂಡಗಳ ಪ್ರದರ್ಶನ ನಡೆಯುತ್ತಿದೆ.
ಸ್ತಬ್ಧ ಚಿತ್ರಗಳ ಪ್ರದರ್ಶನ ಆರಂಭವಾಗಿದೆ. ರಾಜ್ಯದ ಇತಿಹಾಸ, ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳ ಪ್ರದರ್ಶನ
ಸುಧಾ ಮೂರ್ತಿ, ಅನಿತಾ ಕುಮಾರಸ್ವಾಮಿ, ಸಚಿವ ಜಿ.ಟಿ.ದೇವೇಗೌಡ, ಜಯಮಾಲಾ, ಸಾರಾ ಮಹೇಶ್ ಇನ್ನೂ ಹಲವು ಮುಖಂಡರು ಜಂಬೂ ಸವಾರಿ ಚಾಲನೆಯಲ್ಲಿ ಭಾಗಿ.
ಜಂಬೂ ಸವಾರಿ ಚಾಲನೆಗೆ ಹಸಿರು ಶಾಲು ಹೊದ್ದು, ರೈತ ಪರ ನಿಲುವು ಪ್ರದರ್ಶಿಸಿದ ಕುಮಾರಸ್ವಾಮಿ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಂದಲೂ ಪೂಜೆ.
More From
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications