ಲಾಕ್ ಡೌನ್; ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ
ಮೈಸೂರು, ಮೇ 09; ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸೋಂಕಿನ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ. ಇದರಿಂದ ಮನುಷ್ಯರು ನೀಡುವ ಆಹಾರವನ್ನೇ ನಂಬಿ ಬದುಕುತ್ತಿದ್ದ ಮೂಕ ಪ್ರಾಣಿಗಳು ಹಸಿವಿನಿಂದ ಸಂಕಷ್ಟಕ್ಕೀಡಾಗುತ್ತಿವೆ.
ಮೈಸೂರು ನಗರದಲ್ಲಿ ಜಾನುವಾರುಗಳು, ಕುದುರೆಗಳು, ಬೀದಿನಾಯಿಗಳು, ಕೋತಿಗಳು, ಅಳಿಲುಗಳು, ಪಾರಿವಾಳ ಹೀಗೆ ಹಲವು ಪ್ರಾಣಿಪಕ್ಷಿಗಳು ಮನುಷ್ಯರು ನೀಡುತ್ತಿದ್ದ ಆಹಾರದಿಂದಲೇ ಬದುಕನ್ನು ಕಂಡುಕೊಂಡಿದ್ದವು. ಆದರೆ ಈಗ ಮನುಷ್ಯರು ಮನೆಯಿಂದ ಹೊರಬರದ ಕಾರಣದಿಂದಾಗಿ ಬೀದಿನಾಯಿಗಳು ಸೇರಿದಂತೆ ಮೂಕ ಪ್ರಾಣಿಗಳು ಹಸಿವಿನಿಂದ ದಿನಕಳೆಯುವಂತಾಗಿದೆ.
ಮೇ 10ರಿಂದ ಲಾಕ್ ಡೌನ್; ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ
ಇತರೆ ದಿನಗಳಲ್ಲಿ ಜನ ಜಾನುವಾರುಗಳಿಗೆ ಹುಲ್ಲು, ನಾಯಿಗಳಿಗೆ ಬಿಸ್ಕೆಟ್, ಪಾರಿವಾಳಗಳಿಗೆ ಕಾಳುಗಳನ್ನು ಹಾಕುವ ಅಭ್ಯಾಸ ಮಾಡಿಕೊಂಡಿದ್ದರು. ಈಗ ಕೊರೊನಾ ಭಯ ಜತೆಗೆ ಲಾಕ್ ಡೌನ್ನಿಂದ ಮನೆಯಿಂದ ಹೊರಬರಲಾಗುತ್ತಿಲ್ಲ. ಇದರಿಂದ ಮೂಕ ಪ್ರಾಣಿಗಳು ಹಸಿವಿನಿಂದ ತತ್ತರಿಸಿದ್ದು, ಅಲ್ಲಲ್ಲಿ ಮಲಗಿ ಕೊಂಡಿರುವ ದೃಶ್ಯ ಎದುರಾಗಿದೆ.
ಮೈಸೂರು; ಸೋಂಕಿತರಿಂದ ಹೋಂ ಐಸೋಲೇಷನ್ ನಿಯಮ ಉಲ್ಲಂಘನೆ
ಇದನ್ನು ನೋಡಿದ ಕೆಲವು ಸಂಘ ಸಂಸ್ಥೆಗಳು ಮೂಕ ಪ್ರಾಣಿಗಳಿಗೆ ಆಹಾರ, ನೀರು ನೀಡುವ ಕಾರ್ಯಕ್ಕೆ ಮುಂದಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಕಳೆದ 13 ದಿನಗಳಿಂದ ಮಹಾರಾಜ ಮೈದಾನ, ಚಾಮುಂಡಿಬೆಟ್ಟ ತಪ್ಪಲು ಹಾಗೂ ಮೈಸೂರಿನ ಸುತ್ತಮುತ್ತ ಪ್ರದೇಶಗಳಿಗೆ ತೆರಳಿ ಪ್ರಾಣಿಗಳಿಗೆ ಬಿಸ್ಕೆಟ್, ಬ್ರೆಡ್ ಹಾಲು ನೀರು ಹಾಗೂ ಇನ್ನಿತರ ಆಹಾರ ವಸ್ತುಗಳನ್ನು ನೀಡುತ್ತಿದೆ. ಇದನ್ನು ಸೇವಿಸುವ ಮೂಕ ಪ್ರಾಣಿಗಳ ಮುಖದಲ್ಲಿ ಧನ್ಯತೆ ಮೂಡುತ್ತಿದೆ.
ಮೈಸೂರು; ಕೊರೊನಾಗೆ ತತ್ತರಿಸಿದ ರೈತರ ನಿದ್ದೆಗೆಡಿಸಿದ ಹುಲಿ
ಈ ಕುರಿತಂತೆ ಮಾತನಾಡಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, "ಸಾರ್ವಜನಿಕರು ತಮ್ಮ ಮನೆಯ ಮುಂಭಾಗ ಅಥವಾ ತಾರಸಿ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರು, ಆಹಾರವನ್ನು ಇಡುವ ಮೂಲಕ ಮೂಕ ಪ್ರಾಣಿ ಪಕ್ಷಿಗಳಿಗೆ ಎದುರಾಗಿರುವ ನೀರು ಮತ್ತು ಆಹಾರದ ಸಮಸ್ಯೆ ನೀಗಿಸುವಂತೆ" ಮನವಿ ಮಾಡಿದ್ದಾರೆ.