Get Updates
Get notified of breaking news, exclusive insights, and must-see stories!

ಲೋಕಸಭಾ ಚುನಾವಣೆ: ಸುಗಮವಾಯ್ತು ಸಂಸದ ಪ್ರತಾಪ್ ಸಿಂಹ ಹಾದಿ, ಕಾರಣವೇನು..?

ಮೈಸೂರು, ಫೆಬ್ರವರಿ 29: ಜೆಡಿಎಸ್ ನಾಯಕ ಮಾಜಿ ಸಚಿವ ಸಾ.ರಾ. ಮಹೇಶ್ ಕೂಡ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹರಡಿದ್ದವು ಆದರೀಗ ಅವರು ನಾನು ಆಕಾಂಕ್ಷಿ ಅಲ್ಲ ಎನ್ನುವುದರ ಮೂಲಕ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಹಾದಿ ಸುಗಮವಾಗಿದ್ದು, ಅವರಲ್ಲಿ ಗೆಲುವಿನ ಆತ್ಮವಿಶ್ವಾಸವನ್ನು ಇಮ್ಮಡಿಸಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಸಾ.ರಾ.ಮಹೇಶ್ ಅವರು ಕೂಡ ಆಕಾಂಕ್ಷಿ ಹೀಗಾಗಿ ಪ್ರತಾಪ್ ಸಿಂಹ ಮತ್ತು ಸಾ,ರಾ.ಮಹೇಶ್ ನಡುವೆ ಟಿಕೆಟ್ ಗಾಗಿ ಪೈಪೋಟಿ ಶುರುವಾಗಲಿದೆ. ಜೆಡಿಎಸ್ ಮೈಸೂರು ಕೊಡಗು ಕ್ಷೇತ್ರಕ್ಕಾಗಿ ಪಟ್ಟು ಹಿಡಿದಿದೆ ಎಂಬಂತಹ ಮಾತುಗಳು ಪುಂಖಾನುಪುಂಖವಾಗಿ ಹೊರ ಬಂದಿದ್ದವು. ಇದು ರಾಜಕೀಯದಲ್ಲಿ ಹಲವು ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿತ್ತು.

Lok Sabha Election 2024: MP Pratap Singhs Path In The Lok Sabha Elections Has Been Clear

ಕಾಂಗ್ರೆಸ್ ಗೆ ಇದೊಂದು ಅಸ್ತ್ರವೂ ಆಗಿತ್ತು. ಜೆಡಿಎಸ್ ಮತ್ತು ಬಿಜೆಪಿ ನಡುವೆ ಟಿಕೆಟ್ ಗಾಗಿ ಸಂಘರ್ಷ ಏರ್ಪಟ್ಟರೆ ಅದರ ಲಾಭ ಪಡೆದುಕೊಳ್ಳಲು ತಯಾರಿ ಆರಂಭವಾಗಿದ್ದವು. ಸಾ.ರಾ,ಮಹೇಶ್ ಅವರು ಕಣಕ್ಕಿಳಿಯುವ ಸುದ್ದಿ ಹರಿದಾಡುತ್ತಿದ್ದರೂ ಅದರ ಬಗ್ಗೆ ಅವರು ಯಾವುದೇ ಸ್ಪಷ್ಟನೆ ನೀಡುವ ಪ್ರಯತ್ನವನ್ನು ಮಾಡಿರಲಿಲ್ಲ. ಹೀಗಾಗಿ ಅದಕ್ಕೆ ರೆಕ್ಕೆಪುಕ್ಕಗಳು ಕೂಡ ಹುಟ್ಟಿಕೊಂಡು ಹಲವು ರೀತಿಯ ವಿಶ್ಲೇಷಣೆಗಳು ನಡೆದಿದ್ದವು. ಈ ನಡುವೆ ಪ್ರತಾಪ್ ಸಿಂಹ ಮಾತ್ರ ಆ ರೀತಿಯ ಯಾವುದೇ ಮಾತುಕತೆಗಳು ನಡೆದಿಲ್ಲ. ಈ ಬಾರಿಯೂ ನಾನೇ ಅಭ್ಯರ್ಥಿ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಲೇ ಇದ್ದರು.

ಸಾ.ರಾ.ಮಹೇಶ್ ನೀಡಿದ ಸ್ಪಷ್ಟನೆ ಏನು?

ಇದೆಲ್ಲದರ ಮಧ್ಯೆ ಸಂಸದ ಪ್ರತಾಪ್ ಸಿಂಹ ವಿರೋಧಿಗಳು ಮಾತ್ರ ಟಿಕೆಟ್ ಸಾ.ರಾ.ಮಹೇಶ್ ಅವರಿಗೆ ಸಿಕ್ಕೇ ಬಿಡ್ತು ಎಂಬಂತೆ ಬಿಂಬಿಸುತ್ತಲೇ ಹೋದರು. ಇದರಿಂದ ಎಲ್ಲೋ ಒಂದು ಕಡೆ ಮೈಸೂರಿನಲ್ಲಿ ಟಿಕೆಟ್ ಗಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಘರ್ಷವಾಗಲಿದ್ದು, ಇದರ ಸಂಪೂರ್ಣ ಲಾಭ ಕಾಂಗ್ರೆಸ್ಸಿಗೆ ಆಗಲಿದೆ ಎಂಬ ಸುದ್ದಿಯೂ ಹರಡಲಾರಂಭಿಸಿತ್ತು. ಆದರೀಗ ಎಲ್ಲ ಊಹಾಪೋಹಗಳಿಗೆ ಸ್ವತಃ ಸಾ.ರಾ.ಮಹೇಶ್ ಅವರೇ ಸ್ಪಷ್ಟನೆ ನೀಡುವ ಮೂಲಕ ನಾನು ಆಕಾಂಕ್ಷಿನೇ ಅಲ್ಲ ಎಂಬ ಹೇಳಿಕೆ ನೀಡಿದ್ದಾರೆ.

Lok Sabha Election 2024: MP Pratap Singhs Path In The Lok Sabha Elections Has Been Clear

ಹಾಗೆನೋಡಿದರೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವಿನ ನಾಗಾಲೋಟದಲ್ಲಿ ಸಾಗುತ್ತಿದ್ದ ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಅವರು 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಬೇಕಾಗಿ ಬಂತು. ಅದು ಅವರಿಗೆ ನೀಡಿದ ಆಘಾತ ಎಂದರೂ ತಪ್ಪಾಗಲಾರದು. ಸದಾ ಗೆಲುವಿನ ರುಚಿಯನ್ನೇ ಅನುಭವಿಸಿದ್ದ ಅವರಿಗೆ ಸೋಲಿನ ಆಘಾತದಿಂದ ಚೇತರಿಸಿಕೊಳ್ಳುವುದು ಕಷ್ಟವಾಗಿದೆ ಎಂಬುದು. ಅವರ ಮಾತನ್ನು ಗಮನಿಸಿದರೆ ಸುಲಭವಾಗಿ ಅರ್ಥವಾಗಿ ಬಿಡುತ್ತದೆ. ಸದ್ಯಕ್ಕೆ ಅವರ ಮಾತುಗಳು ಚುನಾವಣೆಯಿಂದಲೇ ದೂರ ಸರಿಯುತ್ತಾರೆಯೇನೋ ಎಂಬಂತಿದೆ.

ಆರೋಗ್ಯ, ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ

ಇನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸಾ.ರಾ.ಮಹೇಶ್ ಏನು ಹೇಳಿದ್ದಾರೆ ಎಂಬುದನ್ನು ನೋಡಿದ್ದೇ ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಾನು ಖಂಡಿತವಾಗಿಯೂ ಟಿಕೆಟ್ ಆಕಾಂಕ್ಷಿ ಅಲ್ಲ. ನನ್ನ ಮಾನಸಿಕ, ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ನನಗೆ ಕಳೆದ 35 ವರ್ಷಗಳಿಂದಲೂ ಬಿಜೆಪಿ ಜೊತೆ ಒಡನಾಟವಿದೆ. ಆದರೆ ಚುನಾವಣೆ ವಿಚಾರವಾಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ ಹಾಗೂ ಅದರ ಕುರಿತಂತೆ ಯಾವ ಚರ್ಚೆಯೂ ನಡೆದಿಲ್ಲ ಎಂದಿದ್ದಾರೆ.

Lok Sabha Election 2024: MP Pratap Singhs Path In The Lok Sabha Elections Has Been Clear

ಸದ್ಯಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಪ್ರತಾಪ್ ಸಿಂಹ ಅವರೇ ಕಣಕ್ಕಿಳಿಯಲಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದೊಂದೇ ನಮ್ಮ ಗುರಿಯಾಗಿದೆ. ಆದರೆ ನನಗೆ ಯಾವ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇಲ್ಲ. ಹೀಗಾಗಿ ಸದ್ಯಕ್ಕೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿರುವ ಎಲ್ಲ ಚರ್ಚೆಗಳು ಸತ್ಯಕ್ಕೆ ದೂರವಾದವು. ಕುಮಾರಸ್ವಾಮಿ ಅವರು ನಮ್ಮ ನಾಯಕರಾಗಿದ್ದು, ಅವರು ಈ ಬಗ್ಗೆ ಏನು ನಿರ್ಧಾರ ಮಾಡುತ್ತಾರೆ ಗೊತ್ತಿಲ್ಲ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದರೂ, ಚುನಾವಣೆ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ ಎಂದ ಅವರು, ಈ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವುದು ಊಹಾಪೋಹಗಳಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಹೆಚ್ಚಿದ ಆತ್ಮವಿಶ್ವಾಸ

ಸಾ.ರಾ.ಮಹೇಶ್ ಅವರು ಮಾಧ್ಯಮಗಳ ಮುಂದೆ ಬಂದು ಈ ಹೇಳಿಕೆ ನೀಡಿದ ಮೇಲೆ ಜೆಡಿಎಸ್ ಮೈಸೂರು ಕೊಡಗು ಕ್ಷೇತ್ರದ ಮೇಲೆ ಕಣ್ಣಿಟ್ಟಿಲ್ಲ ಎಂಬುದು ಮನದಟ್ಟಾಗಿದೆ. ಅಷ್ಟೇ ಅಲ್ಲದೆ ಮೈತ್ರಿ ನಾಯಕರು ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಲು ಪಣತೊಡಲಿದ್ದಾರೆ ಎಂಬುದು ಗೊತ್ತಾಗಿದೆ. ಈ ಬಾರಿ ಜೆಡಿಎಸ್‌ನ ಮುಖಂಡರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಜಿ,ಟಿ.ದೇವೇಗೌಡ ಅವರ ಪುತ್ರ ಜಿ.ಡಿ.ಹರೀಶ್ ಗೌಡ ಹೀಗೆ ಎಲ್ಲರ ಬೆಂಬಲ ಪ್ರತಾಪ್ ಸಿಂಹ ಅವರ ಮೇಲಿರುವುದರಿಂದ ಗೆಲುವು ನನ್ನದೇ ಎಂಬ ಆತ್ಮವಿಶ್ವಾಸ ಸಂಸದ ಪ್ರತಾಪ್ ಸಿಂಹರಲ್ಲಿ ಹೆಚ್ಚಾಗಿದೆ.

ಏನೇ ಹೇಳಿದರೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೊಳಪಡುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿದೆ. ಹೀಗಾಗಿ ಕಾಂಗ್ರೆಸ್ ಕಣಕ್ಕೆ ಯಾರನ್ನು ಇಳಿಸುತ್ತದೆ ಎನ್ನುವುದರ ಮೇಲೆ ರಾಜಕೀಯ ಜಿದ್ದಾಜಿದ್ದಿಗೆ ವೇಗಸಿಗಲಿದೆ. ಜತೆಗೆ ಮತದಾರರು ರಾಜ್ಯದ ಸಿಎಂ ಸಿದ್ದರಾಮಯ್ಯ ಅವರ ಕಾರ್ಯ ವೈಖರಿ ನೋಡಿ ಮತಹಾಕುತ್ತಾರೋ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಅಭಿಲಾಷೆಯಿಂದ ಮತಹಾಕುತ್ತಾರೋ? ಎಂಬುದರ ಮೇಲೆ ಅಭ್ಯರ್ಥಿಗಳ ಗೆಲುವು ತೀರ್ಮಾನವಾಗುವುದಂತು ನಿಜ. ಏನೆಲ್ಲ ರಾಜಕೀಯ ಬೆಳವಣಿಗೆಯಾಗುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+