ಹೈಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಬಲ: ಸಂತೋಷ್ ಹೆಗ್ಡೆ
ಮೈಸೂರು, ಆಗಸ್ಟ್ 12: "ಹೈಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದವರೂ ಈ ತೀರ್ಪುನ್ನು ವಿರೋಧಿಸಬಹುದು" ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಎಸಿಬಿಯಿಂದ ಒಬ್ಬ ಜನಪ್ರತಿನಿಧಿಗೆ ಶಿಕ್ಷೆ ಆಗಿಲ್ಲ. ಒಬ್ಬ ಶಾಸಕನನ್ನು ಕೂಡ ವಿಚಾರಣೆ ಮಾಡಿಲ್ಲ. ಆದರೆ ಈಗ ಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿದೆ. ಹೈಕೋರ್ಟ್ ತೀರ್ಪು ಲೋಕಾಯುಕ್ತಕ್ಕೆ ಮತ್ತೆ ಬಲವನ್ನು ತಂದುಕೊಟ್ಟಿದೆ. ಇದರಿಂದ ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ" ಎಂದು ತಿಳಿಸಿದ್ದಾರೆ.
"ಹೈಕೋರ್ಟ್ ತೀರ್ಪು ವಿರೋಧಿಸಿದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ. ಚುನಾವಣೆ ಸಮೀಪಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಹಾಗಾಗಿ ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂಮೊರೆ ಹೋಗಬಹುದು. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರಾರು ಕೋಟಿ ರೂ. ನಷ್ಟ ಉಂಟಾಗಿದೆ. ಆದರೆ, ಶೇ 40 ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ" ಎಂದು ಆರೋಪಿಸಿದರು.

ಎಸಿಬಿಯಿಂದ ಒಬ್ಬ ಜನಪ್ರತಿನಿಧಿಗೆ ಶಿಕ್ಷೆ ಆಗಿಲ್ಲ; "ಒಬ್ಬ ಶಾಸಕನನ್ನು ಕೂಡ ವಿಚಾರಣೆ ಮಾಡಿಲ್ಲ. ಸಾಮಾನ್ಯ ಜನರು ತಪ್ಪು ಮಾಡಿದರೆ ಹೀಗೆ ನಡೆದುಕೊಳ್ಳುತ್ತಿದ್ದಾರಾ?. ಸರಕಾರಿ ಅಧಿಕಾರಿಗಳು ತನಿಖೆ ಮಾಡಬೇಕಾದರೆ ಸರಕಾರದ ಅನುಮತಿ ಕೇಳುತ್ತಾರೆ. ಇದು ಬ್ರಿಟಿಷ್ ಆಡಳಿತದ ಕಾನೂನು. ಅಂದಿನ ಬ್ರಿಟಿಷರು ತಮ್ಮ ಪ್ರಾಬಲ್ಯಕ್ಕಾಗಿ ಈ ನಿಯಮ ಜಾರಿಗೆ ತಂದಿದ್ದರು. ಆದರೆ ಇಂದು ನಮ್ಮದೇ ಸರಕಾರ ಇರುವಾಗ ಅನುಮತಿ ಯಾಕೆ ಬೇಕು?" ಎಂದು ಪ್ರಶ್ನಿಸಿದರು.
"ಭ್ರಷ್ಟರಿಗೆ ಜನ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದು, ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತಾರೆ. ಭ್ರಷ್ಟರಿಗೆ, ಭ್ರಷ್ಟಾಚಾರಿಗಳಿಗೆ ಜೈಕಾರ ಹಾಕಲಾಗುತ್ತದೆ. ಏರ್ಪೋರ್ಟ್ ಹೊರಗೆ ಹೋಗಿ ಸ್ವಾಗತ ಕೋರುತ್ತಾರೆ. ಸದ್ಯ ಜನರ ಮನಃಸ್ಥಿತಿ ಹಣ, ಅಧಿಕಾರದ ಹಿಂದೆ ಸಾಗಿದೆ" ಎಂದು ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

"ಲೋಕಾಯುಕ್ತ ಆಗಿದ್ದಾಗ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಆದರೆ, ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸಲಿಲ್ಲ. ಎಸಿಬಿಯಲ್ಲಿ ಸಾವಿರಾರು ಕೇಸ್ಗಳು ದಾಖಲಾಗಿವೆ. ಆದರೆ ಯಾರಿಗೂ ಶಿಕ್ಷೆ ಆಗಿಲ್ಲ. ಈ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನು ನೀಡಿ ಬಲಪಡಿಸಬೇಕು" ಎಂದು ತಿಳಿಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications