ಪಾಸ್ಪೋರ್ಟ್, ಮೊಬೈಲ್ ಕಳೆದರೆ ಆನ್ಲೈನ್ನಲ್ಲಿ ದೂರು ಕೊಡಿ
ಮೈಸೂರು, ಜೂ. 12 : ಪಾಸ್ ಪೋರ್ಟ್, ಮೊಬೈಲ್, ಲ್ಯಾಪ್ ಟಾಪ್ ಕಳೆದು ಹೋದರೆ ಇನ್ನು ಮುಂದೆ ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಬೇಕಾಗಿಲ್ಲ. ಆನ್ಲೈನ್ ಮೂಲಕ ದೂರು ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆಯುವ ವ್ಯವಸ್ಥೆಯನ್ನು ಮೈಸೂರು ಪೊಲೀಸರು ಜಾರಿಗೆ ತಂದಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಈ ನೂತನ ಸೇವೆಗೆ ಚಾಲನೆ ನೀಡಿದ್ದಾರೆ. ಮೈಸೂರಿನ ಜನರು www.mysorecitypolice.gov.in. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಕೆಳೆದುಕೊಂಡ ವಸ್ತುವಿನ ಕುರಿತು ದೂರು ನೀಡಬಹುದಾಗಿದೆ. [ಪೊಲೀಸರಿಗೆ ವಾಟ್ಸಪ್ ಮೂಲಕ ದೂರು ಕೊಡಿ]

ಆನ್ಲೈನ್ ಮೂಲಕ ಮೊಬೈಲ್, ಲ್ಯಾಪ್ಟಾಪ್, ಪಾಸ್ಪೋರ್ಟ್ ಸೇರಿದಂತೆ ಎಲೆಕ್ಟ್ರಾನಿಕ್ ಮತ್ತು ದಾಖಲಾತಿಗಳನ್ನು ಕಳೆದುಕೊಂಡ ಬಗ್ಗೆ ಮಾತ್ರ ದೂರು ನೀಡಬಹುದಾಗಿದೆ. ಅಪರಾಧ ಪ್ರಕರಣಗಳ ಬಗ್ಗೆ ದೂರು ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಷನೆ ನೀಡಿದ್ದಾರೆ. [ಟ್ವಿಟ್ಟರಿಗೆ ಬಂದ ಮೈಸೂರು ಪೊಲೀಸರು]
ಮೈಸೂರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸಹಾಯಕವಾಗಲಿ ಎಂದು ಈ ಆನ್ಲೈನ್ ಸೇವೆಯನ್ನು ಆರಂಭಿಸಲಾಗಿದೆ. ದೂರು ದಾಖಲು ಮಾಡಿದ ನಂತರ ಜನರಿಗೆ ಸ್ವೀಕೃತಿ ಪತ್ರ ದೊರೆಯಲಿದ್ದು, ಅದನ್ನು ಡೌಲ್ಲೋಡ್ ಮಾಡಿಕೊಳ್ಳಬೇಕು ಎಂದು ದಯಾನಂದ ಅವರು ತಿಳಿಸಿದ್ದಾರೆ. [ದೂರು ಕೊಡಲು ಇಲ್ಲಿ ಕ್ಲಿಕ್ ಮಾಡಿ]
ವಾಟ್ಸಪ್ ಸೇವೆ : ಅಪರಾಧ ಪ್ರಕರಣಗಳ ಬಗ್ಗೆ ವಾಟ್ಸಪ್ ಮೂಲಕ ದೂರು ನೀಡುವ ಸೇವೆಗೆ ಮೈಸೂರು ಪೊಲೀಸರು ಗುರುವಾರ ಚಾಲನೆ ನೀಡಿದ್ದಾರೆ. 8861786385 ನಂಬರ್ ಮೂಲಕ ಸಾರ್ವಜನಿಕರು ಪೊಲೀಸರಿಗೆ ನೇರವಾಗಿ ದೂರನ್ನು ನೀಡಬಹುದಾಗಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications