ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರೀತಿ ಮಾಡ್ಬೇಡಿ ಅಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

|
Google Oneindia Kannada News

ಮೈಸೂರು, ಆಗಸ್ಟ್ 5: ಪ್ರೀತಿ ಮಾಡಬೇಡಿ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಬೇಸರಗೊಂಡು ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದ ಹೆಮ್ಮಿಗೆ ಸೇತುವೆ ಬಳಿ ನಡೆದಿದೆ.

ಗಂಡನ ಆಸ್ತಿಗಾಗಿ ಅಲೆದಾಡಿ ಬೇಸತ್ತು ನೇಣಿಗೆ ಶರಣಾದ ಮಹಿಳೆ ಗಂಡನ ಆಸ್ತಿಗಾಗಿ ಅಲೆದಾಡಿ ಬೇಸತ್ತು ನೇಣಿಗೆ ಶರಣಾದ ಮಹಿಳೆ

ಮನು (21) ಹಾಗೂ ದೀಪಶ್ರೀ (16) ಆತ್ಮಹತ್ಯೆ ಮಾಡಿಕೊಂಡವರು. ಮನು ನಂಜನಗೂಡಿನ ಕಾಮಹಳ್ಳಿ ಗ್ರಾಮದ ಯುವಕನಾಗಿದ್ದು, ದೀಪಶ್ರೀ ಟಿ. ನರಸೀಪುರದ ಶ್ರೀರಾಂಪುರ ಗ್ರಾಮ ನಿವಾಸಿ. ದೀಪಶ್ರೀ ಟಿ.ನರಸೀಪುರದ ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಕೆಲವು ದಿನಗಳಿಂದ ದೀಪಶ್ರೀ ಹಾಗೂ ಮನು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಚಾರ ಅರಿತ ಇಬ್ಬರ ಪೋಷಕರೂ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಮನನೊಂದು ಈ ಪ್ರೇಮಿಗಳು ಮೈಸೂರಿನ ತಲಕಾಡಿನ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Lovers Committed Suicide In T Narasipura

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನು ವಿಡಿಯೋ ಚಿತ್ರೀಕರಿಸಿದ್ದಾನೆ. ತೀವ್ರ ಶೋಧನೆಯ ಬಳಿಕ ಇಬ್ಬರ ಶವಗಳು ಪತ್ತೆಯಾಗಿದೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

English summary
young lovers committed suicide when their parents told them not to do love. the incident took place near Hemmige bridge in T.Narasipur in Mysore district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X