ಚಂದ್ರ ಗ್ರಹಣಕ್ಕೆ ಆಷಾಢ ಶುಕ್ರವಾರ ಚಾಮುಂಡಿ ದೇವಿ ದರ್ಶನ ಸಮಯ ಬದಲು
Recommended Video

ಮೈಸೂರು, ಜುಲೈ 26 : ಖಗ್ರಾಸ ಚಂದ್ರಗ್ರಹಣವು ಶುಕ್ರವಾರ ಇದ್ದು, ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಶುಕ್ರವಾರ ರಾತ್ರಿ 9 ಗಂಟೆಗೆ ಚಾಮುಂಡೇಶ್ವರಿ ದೇವಾಲಯ ಬಂದ್ ಮಾಡಲಾಗುತ್ತದೆ. ಗ್ರಹಣದ ನಿಮಿತ್ತ ದೇವಾಲಯ 2 ಗಂಟೆ ಮುಂಚಿತವಾಗಿ ದರ್ಶನ ಸ್ಥಗಿತ ಮಾಡಲಾಗುತ್ತಿದೆ. ಆಷಾಢ ಶುಕ್ರವಾರದಲ್ಲಿ ಲಕ್ಷಾಂತರ ಭಕ್ತರು ಬರುವ ಕಾರಣಕ್ಕೆ ಭಕ್ತರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಭಕ್ತರು ಬೆಟ್ಟಕ್ಕೆ ತೆರಳಲು ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ರಾತ್ರಿ 9 ಗಂಟೆಯೊಳಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದೆ. ಆಷಾಢ ಮಾಸದ ಶುಕ್ರವಾರಗಳಂದು ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಆದರೆ ಚಂದ್ರ ಗ್ರಹಣದ ಕಾರಣಕ್ಕೆ ಇಪ್ಪತ್ತೇಳನೇ ತಾರೀಕು ರಾತ್ರಿ 9 ಗಂಟೆಗೆ ದೇವಾಲಯದ ಬಾಗಿಲು ಹಾಕಿ, ಮಧ್ಯ ರಾತ್ರಿ ದೇವಿಗೆ ವಿಶೇಷ ಪೂಜೆ ನಡೆಸಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಲಕ್ಷ - ಲಕ್ಷ ಆದಾಯ
ಚಾಮುಂಡಿ ಬೆಟ್ಟದಲ್ಲಿ ಭಕ್ತರು ಚಾಮುಂಡಿ ದೇವಿಗೆ ಹರಕೆ ರೂಪದಲ್ಲಿ ನೀಡುವ ಸೀರೆಗಳ ಹರಾಜಿನಿಂದ ದೇವಸ್ಥಾನಕ್ಕೆ ಭಾರೀ ಆದಾಯ ಬಂದಿದೆ. ದೇವಿಗೆ ಉಡಿಸುವ ಸೀರೆಗಳ ಹರಾಜಿನಿಂದ ಈ ವರ್ಷ ಒಂದು ಕೋಟಿ 73 ಲಕ್ಷ ರುಪಾಯಿ ಆದಾಯ ಬಂದಿದೆ.
ಈ ಮೊದಲು ಬಹಿರಂಗವಾಗಿ ಸೀರೆ ಹರಾಜು ಮಾಡಲಾಗುತ್ತಿತ್ತು. ಆಗ ಭಾರೀ ಬೆಲೆಯ ಸೀರೆಗಳು ಕಡಿಮೆ ಬೆಲೆಗೆ ಹರಾಜು ಆಗುತಿತ್ತು. ಹೀಗಾಗಿ ಸೀರೆಗಳ ಬಹಿರಂಗ ಹರಾಜಿನಿಂದ ಕಡಿಮೆ ಆದಾಯ ಬರುತ್ತಿತ್ತು.
ಈಗ ಈ ಪದ್ಧತಿ ಬದಲಾಯಿಸಿ ಸೀರೆಯ ಮುಖಬೆಲೆಯ ಮೇಲೆ ಶೇಕಡಾ 25ರಷ್ಟು ರಿಯಾಯಿತಿ ನೀಡಿ, ಹರಾಜು ಹಾಕಲಾಗುತ್ತಿದೆ. ಅದರ ಪರಿಣಾಮವಾಗಿ ಸೀರೆ ಹರಾಜಿನಿಂದ ಬರುವ ಆದಾಯ ದುಪ್ಪಟ್ಟಾಗಿದೆ. ಆದ್ದರಿಂದ ಈ ಬಾರಿ ಸೀರೆಗಳು ಹರಾಜಿನಿಂದ ಆದಾಯ ಹೆಚ್ಚಳವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications