ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಣಸೂರು ಉಪಚುನಾವಣೆಗೆ ಅತ್ಯಾಧುನಿಕ ಎಂ-3 ಇವಿಎಂ

By ಮೈಸೂರು ಪ್ರತಿನಿಧಿ
|
Google Oneindia Kannada News

ಹುಣಸೂರು, ಸೆಪ್ಟೆಂಬರ್ 23: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಎಂ-3 ಇವಿಎಂ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ತಿಳಿಸಿದರು.

ನಗರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ವೇಳೆ ಬಳಸಿದ್ದ ಎಂ-2 ಮಾದರಿ ಯಂತ್ರದಲ್ಲಿ 64 ಅಭ್ಯರ್ಥಿಗಳ ಹೆಸರನ್ನು ಮಾತ್ರ ಸೇರಿಸಬಹುದಿತ್ತು.

Infographics: 15 ಕ್ಷೇತ್ರಗಳಲ್ಲಿ ಯಾವಾಗ ಉಪ ಚುನಾವಣೆ?Infographics: 15 ಕ್ಷೇತ್ರಗಳಲ್ಲಿ ಯಾವಾಗ ಉಪ ಚುನಾವಣೆ?

ಇದೀಗ ಎಂ-3 ಇವಿಎಂ ಯಂತ್ರ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಹ್ಯಾಂಗ್‌ ಆಗುವುದಿಲ್ಲ. ವಿಶೇಷವೆಂದರೆ ಈ ಇವಿಎಂನಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ನಮೂದಿಸಬಹುದಾಗಿದೆ. ಯಾವುದೇ ಸಣ್ಣಪುಟ್ಟ ಸಮಸ್ಯೆಗಳು ಬಾರದಂತೆ ಇವಿಎಂ ಯಂತ್ರ ಅಭಿವೃದ್ಧಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

M3 EVM For Hunsur By Election

ಮತಪಟ್ಟಿಗೆ ಸೇರ್ಪಡೆಗೆ ಅವಕಾಶ: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗಿದ್ದ ಮತದಾರರ ಪಟ್ಟಿಯನ್ನೇ ಈ ಬಾರಿಯೂ ಬಳಸಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಾಮಪತ್ರ ಸಲ್ಲಿಸುವ ಅಂತಿಮ ದಿನದವರೆಗೂ ಮತಪಟ್ಟಿಯಲ್ಲಿ ಸೇರಿಸಲು ಅರ್ಜಿ ಸಲ್ಲಿಸಬಹುದು. ಆದರೆ ಡಿಲೀಟ್‌ ಇನ್ನಿತರ ಯಾವುದೇ ಕಾರ್ಯಕ್ಕೆ ಅವಕಾಶವಿಲ್ಲ ಎಂದರು.

ಕಾಗವಾಡ ಉಪ ಚುನಾವಣೆ; ಬಿಜೆಪಿಗೆ ಟಿಕೆಟ್ ಹಂಚಿಕೆಯೇ ತಲೆನೋವು!ಕಾಗವಾಡ ಉಪ ಚುನಾವಣೆ; ಬಿಜೆಪಿಗೆ ಟಿಕೆಟ್ ಹಂಚಿಕೆಯೇ ತಲೆನೋವು!

ಸೂಕ್ಷ್ಮವೆಂದು ಘೋಷಿಸಬೇಡಿ: ಜೆಡಿಎಸ್ ಮುಖಂಡ, ವಕೀಲ ಪುಟ್ಟರಾಜು ಮಾತನಾಡಿ, "ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣ ಸೂಕ್ಷ್ಮ ಪ್ರದೇಶವೆಂದು ಘೋಷಿಸಬಾರದು. ಇದರಿಂದ ಸಹಜ ಮತದಾನಕ್ಕೆ ತೊಂದರೆಯಾಗುತ್ತದೆ" ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅಭಿರಾಂ, ಸೆಕ್ಟರ್ ಅಧಿಕಾರಿ ಹಾಗೂ ಪೊಲೀಸರು ಪ್ರತಿ ಮತಗಟ್ಟೆಯ ಕುರಿತಂತೆ ಮಾಹಿತಿ ಪಡೆದು, ಪೊಲೀಸರ ವರದಿಯನ್ವಯ ಸೂಕ್ಷ್ಮ, ಅತಿಸೂಕ್ಷ್ಮ ಎಂದು ಘೋಷಿಸಲಾಗುವುದು ಎಂದರು.

ನಗರದ ಮುನೇಶ್ವರ ಕಾವಲ್‌ ಮೈದಾನದ ಬಳಿಯ ನಗರಸಭೆಯ ನೂತನ ಕಟ್ಟಡದ ನೆಲ ಅಂತಸ್ತಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗಳನ್ನು ಪರಿಶೀಲನೆ ನಡೆಸಿದರು.

ಉಪ ಚುನಾವಣೆ; ಮಿಷನ್ 12 ಜೊತೆ ಕಣಕ್ಕಿಳಿದ ಸಿದ್ದರಾಮಯ್ಯ!ಉಪ ಚುನಾವಣೆ; ಮಿಷನ್ 12 ಜೊತೆ ಕಣಕ್ಕಿಳಿದ ಸಿದ್ದರಾಮಯ್ಯ!

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್, ಉಪವಿಭಾಗಾಧಿಕಾರಿ ಬಿ.ಎನ್‌.ವೀಣಾ, ತಹಶೀಲ್ದಾರ್ ಬಸವರಾಜು, ಡಿವೈಎಸ್ಪಿ ಕೆ.ಎಸ್‌.ಸುಂದರರಾಜ್, ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಹಾಗೂ ನಗರ ಕಾಂಗ್ರೆಸ್‌ ಅಧ್ಯಕ್ಷ ಶಿವಯ್ಯ, ಅಸ್ವಾಳ್ ಕೆಂಪೇಗೌಡ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

English summary
DC Abhiram Ji shankar said that the M-3 EVM machines are being used for the by-election in the Hunsur assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X