ಸೋರುತಿಹುದು ಮಚ್ಚರೆ ಶಾಲೆಯ ಮಾಳಿಗೆ, ಪಾಠ ಮಾಡುವುದು ಹೇಗೆ?
ಮೈಸೂರು, ಜೂನ್ 30 : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯವಾಗಿದೆ. ಒಂದೇ ಕೊಠಡಿಯಲ್ಲಿ ಹಲವು ತರಗತಿಗಳು, ಪೀಠೋಪಕರಣಗಳಿಲ್ಲದೆ ನೆಲದಲ್ಲಿ ಕುಳಿತುಕೊಳ್ಳುವ ವಿದ್ಯಾರ್ಥಿಗಳು, ಸೋರುವ ಛಾವಣಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು... ಹೀಗೆ ಹತ್ತಾರು ಸಮಸ್ಯೆಗಳು ತಾಂಡವವಾಡುತ್ತಿರುತ್ತವೆ.
ಸರ್ಕಾರ ಇಂಥ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದಾಗಿ ಹೇಳುತ್ತಿದ್ದರೂ ಕೆಲವೆಡೆಗಳಲ್ಲಿ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಇರುವ ಶಾಲೆಗಳ ಕಟ್ಟಡಗಳನ್ನು ಅಭಿವೃದ್ಧಿಗೊಳಿಸದ ಕಾರಣ ಮಳೆಬಂದರೆ ಸೋರುವ ಪರಿಸ್ಥಿತಿ ನಿರ್ಮಾಗೊಂಡಿದೆ. [ಈ ಶಾಲೆಯಲ್ಲಿ ಬಾಗಿಲು ತೆರೆದಿದೆ, ಛಾವಣಿಯೂ ತೆರೆದಿದೆ!]

ಗ್ರಾಮೀಣ ಪ್ರದೇಶದಲ್ಲಿ ಏಕೋಪಾಧ್ಯಾಯ ಶಾಲೆಗಳಿದ್ದು 1ನೇ ತರಗತಿಯಿಂದ 5ನೇ ತರಗತಿವರೆಗೆ ಮಕ್ಕಳು ಓದುತ್ತಿದ್ದು, ಒಬ್ಬರೇ ಶಿಕ್ಷಕರು ಪಾಠ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಆದರೂ ಶಿಕ್ಷಕರು ಉತ್ಸಾಹದಿಂದಲೇ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ.
ಆದರೆ ಕಟ್ಟಡವೇ ಕುಸಿಯುವ ಹಂತದಲ್ಲಿದ್ದು, ಮಳೆ ನೀರು ತರಗತಿಯೊಳಗೆ ನುಗ್ಗಿದರೆ ವಿದ್ಯಾರ್ಥಿಗಳು ಕುಳಿತು ಪಾಠ ಕೇಳುವುದಾದರೂ ಹೇಗೆ? ಶಿಕ್ಷಕರು ಪಾಠ ಮಾಡುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. ಆದರೆ ಎಚ್.ಡಿ.ಕೋಟೆ ತಾಲೂಕು ಮಚ್ಚರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಇಂತಹ ಪರಿಸ್ಥಿತಿಯಲ್ಲೂ ಮಕ್ಕಳಿಗೆ ಪಾಠ ಮಾಡುವ ಮೂಲಕ ತನ್ನ ಕರ್ತವ್ಯ ಪಾಲಿಸುತ್ತಿದ್ದಾರೆ.
1997-98ರಲ್ಲಿ ಆರಂಭಗೊಂಡ ಮಚ್ಚರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಒಂದೇ ಕೊಠಡಿಯನ್ನು ಹೊಂದಿದ್ದು, ಇದೇ ಕೊಠಡಿಯಲ್ಲಿ 5 ತರಗತಿಗಳು ನಡೆಯುತ್ತಿವೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಮಳೆಗಾಲದಲ್ಲಿ ಕೊಠಡಿಯಲ್ಲಿ ನೀರು ನಿಲ್ಲುತ್ತಿದೆ. ಹೀಗಾಗಿ ಈ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದೆ ಬರುತ್ತಿಲ್ಲ. [ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಮಂಡ್ಯದ ಸರ್ಕಾರಿ ಶಾಲೆ]

ಸುಮಾರು 8 ಮಕ್ಕಳಿಗೆ ಕುಸಿದಿದ್ದ ವಿದ್ಯಾರ್ಥಿಗಳ ಸಂಖ್ಯೆಯನ್ನು ಶಿಕ್ಷಕರಾಗಿರುವ ಚೇತನ್ಕುಮಾರ್ ಅವರು 29ಕ್ಕೇರಿಸಿದ್ದಾರೆ. ಇದೀಗ ಮಳೆ ಸುರಿಯುತ್ತಿರುವುದರಿಂದ ತರಗತಿ ಸೋರುತ್ತಿದ್ದು, ನೀರು ತುಂಬಿ ಕುಳಿತುಕೊಳ್ಳಲಾಗದ ಸ್ಥಿತಿಗೆ ತಲುಪಿದೆ. ಆದ್ದರಿಂದ ಕಟ್ಟಡದ ಆವರಣದಲ್ಲಿ ಪಾಠ ಮಾಡುತ್ತಿದ್ದಾರೆ. ಮಕ್ಕಳು ಮಳೆ ಚಳಿಗೆ ಹೊರಗೆ ಕುಳಿತುಕೊಳ್ಳುವುದು ಅನಿವಾರ್ಯವಾಗಿದೆ.
ಮಕ್ಕಳ ಪರಿಸ್ಥಿತಿಯನ್ನು ನೋಡಿದ ಇಲ್ಲಿ ಮಕ್ಕಳಿಗೆ ತೊಂದರೆಯಾದರೆ ಎಂಬ ಭಯದಿಂದ ಬೇರೆ ಶಾಲೆಗೆ ಸೇರಿಸುವತ್ತ ಯೋಚಿಸುತ್ತಿದ್ದಾರೆ. ಒಂದು ವೇಳೆ ಕಟ್ಟಡವನ್ನು ಅಭಿವೃದ್ಧಿ ಪಡಿಸದೆ ಹೋದರೆ ಮುಂದೆ ಈ ಶಾಲೆಯತ್ತ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುವುದಂತು ಖಚಿತ.
ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಶಾಲೆಯನ್ನು ಅಭಿವೃದ್ಧಿಗೊಳಿಸುವತ್ತ ಮುಂದಾಗುವರೇ ಎಂಬುವುದನ್ನು ಕಾದು ನೋಡಬೇಕಿದೆ. [ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರಕ್ಕೆ ಧಿಕ್ಕಾರ!]
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications