ಪಿರಿಯಾಪಟ್ಟಣ: ಹುಚ್ಚು ನಾಯಿ ದಾಳಿಗೆ ಮಕ್ಕಳು ಸೇರಿ ಒಂಬತ್ತು ಮಂದಿಗೆ ಗಾಯ
ಮೈಸೂರು, ಜುಲೈ. 04: ರಾಜ್ಯದಲ್ಲಿ ಮಕ್ಕಳ ಮೇಲೆ ನಾಯಿ ದಾಲಿ ಮಾಡುವ ಘಟನೆಗಳು ವರದಿಯಾಗುತ್ತಿದ್ದವು. ಇದರ ಬೆನ್ನಲ್ಲೇ ಹುಚ್ಚು ನಾಯಿಯೊಂದು ಮೂವರು ಬಾಲಕರು ಸೇರಿ ಒಂಬತ್ತು ಮಂದಿಗೆ ಕಚ್ಚಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಪಿರಿಯಾಪಟ್ಟಣದ ಈಡಿಗರ ಬೀದಿಯ ಬಳಿ ಈ ಘಟನೆ ನಡೆದಿದ್ದು ಸ್ಥಳೀಯ ನಿವಾಸಿ ಇಬಾದುಲ್ಲಾ ಖಾನ್ ಎಂಬುವವರ ಮಗ 9 ವರ್ಷದ ಮಗು ಫರಾನ್ ಎಂಬುವವರಿಗೆ ಈ ಹುಚ್ಚು ನಾಯಿ ಮೊದಲು ಕಚ್ಚಿದೆ. ಈ ಬಗ್ಗೆ ಇಬಾದುಲ್ಲಾ ಖಾನ್ ಪಟ್ಟಣ ಪಂಚಾಯಿತಿಗೂ ಮಾಹಿತಿ ನೀಡಿದ್ದಾರೆ. ಆದರೆ ಸಂತ್ರಸ್ತರ ಮಾಹಿತಿ ನಿರ್ಲಕ್ಷಿಸಿದ ಪುರಸಭೆಯವರು ಯಾವುದೆ ಕ್ರಮವಹಿಸಿಲ್ಲ.

ಇದೇ ಹುಚ್ಚು ನಾಯಿ ಸಂಜೆಯ ವೇಳೆಗೆ ವರ್ಧನ್ ಆರ್ಯ ಎಂಬ 10 ವರ್ಷದ ಮಗುವಿನ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿ ಕಚ್ಚಿದ್ದು ತೊಡೆಯ ಭಾಗ, ಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ. ಇದಾದ ನಂತರ ಜುಬೇರ್ ಶರೀಫ್, ದರ್ಶನ್, ಸುಯೇಬ್ ಶರೀಫ್ ಮತ್ತು ಇಬಾದುಲ್ಲಾಖಾನ್ ಅವರ ಮೇಲೂ ದಾಳಿ ಮಾಡಿದೆ.
ಒಂದೇ ದಿನದಲ್ಲಿ ಬರೋಬ್ಬರಿ ಏಳು ಮಂದಿ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಜಬೀರ್ ಶರೀಫ್ ಮತ್ತು ರಂಗಮ್ಮ ಎಂಬ ಮಹಿಳೆಗೆ ತೀವ್ರವಾಗಿ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಇಬ್ಬರು ಗಾಯಾಳುಗಳಿಗೆ ಬೆಳಗ್ಗೆ ರ್ಯಾಡೀಸ್ ಇಮನೋಗೋಬಿನ್ ಎಂಬ ಇಂಜೆಕ್ಷನ್ ನೀಡಲಾಗಿತ್ತು. ಬಳಿಕ ನಂತರ ಬಂದ ಎಂಟು ಮಂದಿಗೆ ಇಂಜೆಕ್ಷನ್ ಇಲ್ಲವಾದ ಕಾರಣ ಎಲ್ಲರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದಲ್ಲದೆ ಬೀದಿ ನಾಯಿಗಳ ಹಾವಳಿಯ ಬಗ್ಗೆ ಹುಚ್ಚು ನಾಯಿ ಕಡಿತಕ್ಕೆ ಒಳಗಾದವರ ಬಗ್ಗೆ ಕ್ರಮವಹಿಸುವಂತೆ ಪತ್ರ ಬರೆದು ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ನಾಯಿ ಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಪ್ರಮೋದ್ ತಿಳಿಸಿದ್ದಾರೆ.
ಪಿರಿಯಾಪಟ್ಟಣದ ತುಂಬೆಲ್ಲಾ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿಸುವ ಸಂಬಂಧ ಪುರಸಭೆ ಕ್ರಮವಹಿಸಬೇಕು. ಈ ಮೂಲಕ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಬೇಕು. ಹೀಗೆ ನಾಯಿ ಕಡಿತಕ್ಕೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಸಿಗಬೇಕು ಮತ್ತು ಯಾರಾದರೂ ಹುಚ್ಚುನಾಯಿ ಬಗ್ಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ತಕ್ಷಣ ಪುರಸಭೆ ವತಿಯಿಂದ ಸ್ಪಂದಿಸುವ ಕೆಲಸವಾಗಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಇನ್ನು, ಹುಚ್ಚು ನಾಯಿ ದಾಳಿ ಮಾಡಿ ಕಚ್ಚಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು ಶೀಘ್ರದಲ್ಲಿ ಕ್ರಮವಹಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮುತ್ತಪ್ಪ ತಿಳಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications