ಮಧ್ಯಪ್ರದೇಶದ ಕಳ್ಳರ ಗ್ಯಾಂಗ್ ಅಂದರ್: ಬೆಳಕಿಗೆ ಬಂತು 28 ಮನೆಗಳ್ಳತನ ಪ್ರಕರಣ
ಮೈಸೂರು, ಜನವರಿ 21: ನಿಮ್ಮ ಮನೆಗೆ ಹ್ಯಾಂಗಿಂಗ್ ಲಾಕ್ ಹಾಕಿ ಊರಿಗೆ ತೆರಳಿದ್ದೀರಾ? ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಹಾಲು, ದಿನಪತ್ರಿಕೆಗಳನ್ನು ಹಾಕದಿರಲು ತಿಳಿಸಿಲ್ಲವೆ? ಎಚ್ಚರ ಮಾಲೀಕರೇ? ನೀವು ಮನೆಯಲ್ಲಿ ಇಲ್ಲದಿರುವುದನ್ನು ನಿಮ್ಮ ಮನೆಯ ವಾತಾವರಣ ಖಚಿತಪಡಿಸಿದರೆ ಮನೆಗೆ ಕನ್ನ ಗ್ಯಾರಂಟಿ.
ಹೌದು, ಇಂತಹ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕನ್ನ ಹಾಕುತ್ತಿದ್ದ ಮಧ್ಯಪ್ರದೇಶದ ಖದೀಮರ ತಂಡವೊಂದನ್ನು ಸಿಸಿಬಿ ಪೊಲೀಸರು ಸಿನಿಮೀಯ ಮಾದರಿಯಲ್ಲಿ ಬೇಟೆಯಾಡಿದ್ದಾರೆ. ಆದರೆ, ತಂಡದ ಮತ್ತಷ್ಟು ಸದಸ್ಯರು ನಗರದಲ್ಲಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಪರ ಊರಿಗೆ ತೆರಳುವಾಗ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಖದೀಮರ ತಂಡ ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸುಳಿವರಿತ ಸಿಸಿಬಿ ಪೊಲೀಸರು ಎರಡು ದಿನಗಳ ಹಿಂದೆ ಮನೆಗಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಐವರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ. ವಿಚಾರಣೆ ವೇಳೆ ತಾವು ಕಳ್ಳತನ ನಡೆಸುವ ವಿಧಾನ, ಮನೆಗಳನ್ನು ಆಯ್ಕೆ ಮಾಡಿಕೊಳ್ಳುವ ರೀತಿಯನ್ನು ಕಳ್ಳರು ವಿವರವಾಗಿ ತಿಳಿಸಿದ್ದಾರೆ.
ಖದೀಮರು ನೀಡಿದ ಮಾಹಿತಿ ಆಧರಿಸಿ ಕಳ್ಳರೇ ತುಂಬಿರುವ ಮಧ್ಯಪದೇಶದ ಗ್ರಾಮವೊಂದಕ್ಕೆ ತೆರಳಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವ ಮೂಲಕ ಸಾಹಸ ಮೆರೆದಿದ್ದಾರೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾ ತಾಲ್ಲೂಕು, ಬಗೌಲಿ ಗ್ರಾಮದ ನಿವಾಸಿಗಳಾದ ಭರತ್(27), ಮಾನ್ಸಿಂಗ್(30), ಆಲಂಸಿಂಗ್(21), ತರ್ಸಿಂಗ್ ಗ್ರಾಮದ ನಿವಾಸಿ ಕಾಲು ದಾವರ್(25) ಹಾಗೂ ಶಾಗಿಯಾ ಗ್ರಾಮದ ನಿವಾಸಿ ಪಾರ್ಸಿಂಗ್(47) ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿದ ವೇಳೆ ಅವರುಗಳು ಮನೆ ಕಳ್ಳತನ ಮಾಡಲು ಇಟ್ಟುಕೊಂಡಿದ್ದ ಟಪಾರಿಯ ಕಟರ್, ಕಬ್ಬಿಣದ ರಾಡು, ರಿಂಚ್ ಸ್ಪ್ಯಾನರ್, ಸ್ಕ್ರೂ ಡ್ರೈವರ್ ಮತ್ತಿತರ ಆಯುಧಗಳು ಮತ್ತು ಪರಿಕರಗಳನ್ನು ಇಟ್ಟುಕೊಂಡಿದ್ದ ಬ್ಯಾಗನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಕಿಗೆ ಬಂತು
ಆರೋಪಿಗಳನ್ನು ವಿಚಾರಣೆಗೊಳಪಡಿಸಿದ ವೇಳೆ ಮೈಸೂರು, ಶಿವಮೊಗ್ಗ, ಭದ್ರಾವತಿ, ಬೆಳ್ಳೂರು, ತಮಿಳುನಾಡಿನಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಆರೋಪಿಗಳ ಬಂಧನದಿಂದಾಗಿ ಒಟ್ಟು 28 ಮನೆ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳ್ಳರ ಟಾರ್ಗೆಟ್
ಆರೋಪಿಗಳು ಬಸ್ಸಿನ ಮೂಲಕ ಮಧ್ಯಪ್ರದೇಶದಿಂದ ಮೈಸೂರಿಗೆ ಬಂದು ಹಗಲು ವೇಳೆ ಹ್ಯಾಂಗಿಂಗ್ ಲಾಕ್ ಹಾಕಿರುವ ಮನೆಗಳನ್ನು ಹಾಗೂ ಹಲವು ದಿನಗಳಿಂದ ದಿನ ಪತ್ರಿಕೆಗಳು ಮನೆಯ ಮುಂದೆ ಬಿದ್ದಿರುವ ಮನೆಗಳನ್ನು ಗುರುತಿಸಿಕೊಂಡು ಹೋಗುತ್ತಿದ್ದರು. ಕತ್ತಲಾಗುತ್ತಿದ್ದಂತೆ ಮತ್ತೆ ಅಲ್ಲಿಗೆ ಬರುತ್ತಿದ್ದ ಅವರು, ಮನೆಗಳ ಬಳಿ ಇರುವ ಪೊದೆಗಳ ಬಳಿ ಅವಿತು ಕುಳಿತು ಮಧ್ಯರಾತ್ರಿ 1 ಗಂಟೆ ನಂತರ ಮನೆಗಳ ಬೀಗ ಮುರಿದು, ಚಿನ್ನಾಭರಣ ಮತ್ತು ನಗದು ಹಣವನ್ನು ಕಳ್ಳತನ ಮಾಡುತ್ತಿದ್ದರು.

ಊರಿಗೆ ವಾಪಸ್
ಕಳ್ಳತನ ನಡೆಸಿದಾಗ ಆ ಮನೆಯಲ್ಲಿ ಅವರು ಅಂದುಕೊಂಡಷ್ಟು ಚಿನ್ನಾ ಭರಣಗಳು ದೊರಕಿದರೆ, ತಕ್ಷಣವೇ ಅಲ್ಲಿಂದ ಗಾಮಾಂತರ ಬಸ್ ನಿಲ್ದಾಣಕ್ಕೆ ಬಂದು ಯಾವುದೋ ಬಸ್ಸನ್ನಾದರೂ ಹತ್ತಿ ಬೇರೊಂದು ಊರಿಗೆ ತೆರಳಿ ನಂತರ ಮಧ್ಯಪದೇಶಕ್ಕೆ ಹೋಗುತ್ತಿದ್ದರು. ಕದ್ದ ಚಿನ್ನಾಭರಣಗಳನ್ನು ಅವರು ರಾಜ್ಯದ ಯಾವುದೇ ನಗರಗಳಲ್ಲಿ ಮಾರಾಟ ಮಾಡಿದ ಉದಾಹರಣೆ ಇಲ್ಲ. ತಮ್ಮ ಊರಿಗೆ ತೆರಳಿ ಅಲ್ಲಿನ ಕೆಲ ವ್ಯಕ್ತಿಗಳಿಗೆ ಮಾತ್ರ ಮಾರಾಟ ಮಾಡುತ್ತಿದ್ದರು. ಅದೂ ಕೂಡ ಅವರು ಕೊಟ್ಟಷ್ಟು ಹಣಕ್ಕೆ ಮಾತ್ರ.

ಪೊಲೀಸರ ವಶಕ್ಕೆ
ಖದೀಮರು ವಾಸವಿರುವ ಸ್ಥಳವು ಮಧ್ಯಪ್ರದೇಶದ ಗುಡ್ಡಗಾಡು ಪ್ರದೇಶ. ಆ ಊರಿನ ಬಹುತೇಕ ಜನರು ಕಳ್ಳತನ ಹಾಗೂ ವಿವಿಧ ಅಪರಾಧ ಹಿನ್ನೆಲೆಯುಳ್ಳವರು. ಇವರನ್ನು ಬೆನ್ನಟ್ಟಿ ಹೋಗುವ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವ ಚಾಣಾಕ್ಷತೆ ಅವರಲ್ಲಿತ್ತು. ಹೀಗಾಗಿ ಕಳವಾದ ವಸ್ತುಗಳನ್ನು ವಶಕ್ಕೆ ಪಡೆಯುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿತ್ತು. ಆದರೂ ಛಲ ಬಿಡದ ಸಿಸಿಬಿ ಪೊಲೀಸರು ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications