ವಿಡಿಯೋ; ಸಂಸ್ಕೃತ ಸತ್ತ ಭಾಷೆ; ಪ್ರೊ.ಬಿ.ಪಿ. ಮಹೇಶ್ ಚಂದ್ರಗುರು!
ಮೈಸೂರು, ಜನವರಿ 24; ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆ ವಿಚಾರವಾಗಿ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು, "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಂಸ್ಕೃತಕ್ಕೆ ಹೆಚ್ಚು ಅನುದಾನ ನೀಡಿ ಆರ್ಎಸ್ಎಸ್ ಮತ್ತು ವೈದಿಕರನ್ನು ಬೆಳೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೊರಟಿದೆ. ಈ ರೀತಿ ಸರ್ಕಾರ ಕೆಟ್ಟ ತೀರ್ಮಾನ ಮತ್ತು ಜನರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅನ್ನದ ಭಾಷೆಯಲ್ಲದ ಸಂಸ್ಕೃತ ಮತ್ತು ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಅನುದಾನ ಹಾಗೂ ಜಾಗ ನೀಡುತ್ತಿರುವುದು ಖಂಡನೀಯ. ಇದರ ವಿರುದ್ಧ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು" ಎಂದು ತಿಳಿಸಿದರು.
"ಭಾಷೆ ಇರುವುದು ಜನರನ್ನು ಒಗ್ಗೂಡಿಸಲು ಅನ್ನ ಮತ್ತು ಉದ್ಯೋಗ ನೀಡಲು, ಸಂಸ್ಕೃತಿ ಬೆಳೆಸಲು ಮತ್ತು ಜನರ ಬದುಕು ಸುಧಾರಿಸಲು. ಆದರೆ 2011ರ ಜನಗಣತಿ ಪ್ರಕಾರ ಇಡೀ ದೇಶದಲ್ಲಿ 4,631 ಜನ ಮಾತ್ರ ಸಂಸ್ಕೃತ ಮಾತನಾಡುತ್ತಾರೆ. ಅನ್ನ, ವಿದ್ಯೆ, ಉದ್ಯೋಗ ಹಾಗೂ ಬದುಕಿಗಾಗಿ ಎಷ್ಟು ಜನ ಸಂಸ್ಕೃತ ನಂಬಿದ್ದಾರೆ? ಇಂಥ ಸಾಯುತ್ತಿರುವ ಭಾಷೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ಏಕೆ ಮಹತ್ವ ಕೊಡುತ್ತಿದೆ?" ಎಂದು ಪ್ರಶ್ನಿಸಿದರು.

"ದೇಶದ ವಿಶ್ವ ವಿದ್ಯಾಲಯಗಳಲ್ಲಿ ಸಂಸ್ಕೃತ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳೇ ಇಲ್ಲ. ಈ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಂಸ್ಕೃತ ಅಧ್ಯಯನ ವಿಭಾಗಕ್ಕೆ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ಬಹಳಷ್ಟು ಸಂಸ್ಕೃತ ಅಧ್ಯಯನ ಪೀಠಗಳು ಸಾಯುತ್ತಿವೆ. ಕೇರಳದ ರಾಜೀವ್ ಗಾಂಧಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕಲಿಯಲು ವಿದ್ಯಾರ್ಥಿಗಳೇ ಇಲ್ಲ" ಎಂದು ಕಿಡಿಕಾರಿದರು.
"ಇನ್ನು ರಾಜ್ಯದಲ್ಲಿ ಶೇ 64 ಮಂದಿ ಕನ್ನಡ, ಶೇ 11 ಉರ್ದು, ಶೇ 4 ತಮಿಳು, ಶೇ 2ರಷ್ಟು ಜನ ಮಲಯಾಳಂ ಮಾತನಾಡುತ್ತಾರೆ. ಆದರೆ ಸಂಸ್ಕೃತ ಮಾತನಾಡುವವರು ನಗಣ್ಯ. ಹೀಗೆ ಯಾರಿಗೂ ಬೇಡವಾದ ಬದುಕು ಕಟ್ಟಿಕೊಡದ ಈ ಭಾಷೆಗೆ ಯಾಕೆ ಮಾನ್ಯತೆ ಕೊಡಬೇಕೆಂದು ಪ್ರಶ್ನಿಸಿದ ಅವರು, ಇದಕ್ಕೆ ಕೊಡುವ ಅನುದಾನವನ್ನು ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳಿಗೆ ನೀಡಿ ಅಭಿವೃದ್ಧಿ ಮಾಡುವ ಮೂಲಕ ಮಕ್ಕಳ ಮತ್ತು ಮಹಿಳಾ ಸಬಲೀಕರಣಕ್ಕೆ ವಿನಿಯೋಗಿಸಲಿ" ಎಂದರು.
"ಅಲ್ಲದೇ ಕೇಂದ್ರ ಸರ್ಕಾರ ಸಂಸ್ಕೃತ ಅಭಿವೃದ್ದಿಗೆ 1,200 ಕೋಟಿ, ತೆಲುಗಿಗೆ 75 ಕೋಟಿ, ತಮಿಳಿಗೆ 60 ಕೋಟಿ, ಮಲಯಾಳಂಗೆ 20 ಕೋಟಿ ರೂ. ನೀಡಿದೆ. ಆದರೆ ಕನ್ನಡಕ್ಕೆ ಕೇವಲ 6 ಕೋಟಿ ನೀಡಲಾಗಿದ್ದು, ರಾಜ್ಯದ 25 ಸಂಸದರು ಎಲ್ಲಿ ಹೋಗಿದ್ದಾರೆಂದು ಪ್ರಶ್ನೆ ಮಾಡಿದ ಅವರು, ಕನ್ನಡ ವಿಶ್ವವಿದ್ಯಾಲಯ ಸಾಯುತ್ತಿದ್ದರೆ, ಸಂಸ್ಕೃತಕ್ಕೆ 300 ಕೋಟಿ ರೂ. ಅನುದಾನ, ಮಾಗಡಿಯಲ್ಲಿ ಫಲವತ್ತಾದ ಭೂಮಿ ನೀಡಲಾಗುತ್ತಿದೆ" ಎಂದು ಅಕ್ರೋಶ ವ್ಯಕ್ತಪಡಿಸಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications