Get Updates
Get notified of breaking news, exclusive insights, and must-see stories!

Makar Sankranti 2023: ಮೈಸೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್

ಮೈಸೂರು, ಜನವರಿ, 16: ಭಾನುವಾರ (ಜನವರಿ 15) ಮುಂಜಾನೆಯಿಂದಲೇ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದ ಸಾರ್ವಜನಿಕರು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬ ಆಚರಿಸಿದರು. ಸುಗ್ಗಿ ಹಬ್ಬದ ಅಂಗವಾಗಿ ನಗರದ ಹಲವೆಡೆ ಗೋ ಪೂಜೆ ಮಾಡಲಾಯಿತು. ಎಳ್ಳು-ಬೆಲ್ಲ, ಬಾಳೆಹಣ್ಣು ಇನ್ನಿತರೆ ಪದಾರ್ಥಗಳನ್ನು ಗೋವುಗಳಿಗೆ ತಿನ್ನಿಸಿ ಭಕ್ತಿ ಭಾವ ಮೆರೆದರು. ಹಾಗೆಯೇ ಮೇಯರ್ ಶಿವಕುಮಾರ್ ಅವರು ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.

ಪೌರ ಕಾರ್ಮಿಕರೊಂದಿಗೆ ಹಬ್ಬ ಆಚರಣೆ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ಮೈಸೂರು ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಹಬ್ಬದ ದಿನವೂ ಮೈಸೂರು ನಗರದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ಹಬ್ಬ ಆಚರಣೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ,'' ಎಂದರು. ''ನಗರ ಪಾಲಿಕೆಯ ಎಲ್ಲಾ ಪೌರ ಕಾರ್ಮಿಕರಿಗೆ ಹಬ್ಬದ ಪ್ರಯುಕ್ತ ಸಮವಸ್ತ್ರ, ಶೂ ಮತ್ತು ಹ್ಯಾಂಡ್ ಶೂ ವಿತರಣೆ ಮಾಡಲಾಗುವುದು,'' ಎಂದು ಹೇಳಿದರು. ಬಳಿಕ ಎಲ್ಲಾ ವಾರ್ಡ್‌ಗಳಲ್ಲಿ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ವ್ಯವಸ್ಥೆ ಮಾಡಲಾಯಿತು.

ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ ವಿನಿಮಯ
ಇನ್ನು ಸಂಜೆಯಾಗುತ್ತಿದ್ದಂತೆ ಮಹಿಳೆಯರು, ಯುವತಿಯರು ಹಾಗೂ ಪುಟಾಣಿಗಳು ಸಂಬಂಧಿಕರು, ಬಂಧು-ಮಿತ್ರರು ಹಾಗೂ ನೆರೆಹೊರೆಯವರ ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು.

Makar Sankranti 2023: Mayor celebrated festival with pourakarmikas in Mysuru

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ, ಒಂಟಿ ಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನ ಸೇರಿದಂತೆ ಬಹುತೇಕ ಎಲ್ಲಾ ದೇವಸ್ಥಾನಗಳಿಗೆ ಭೇಟಿ ನೀಡಿದ ಸಾರ್ವಜನಿಕರು ದೇವರ ದರ್ಶನ ಪಡೆದರು. ಇದರಿಂದ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕಿತ್ತಿದ್ದವು.

ಜಾನುವಾರುಗಳಿಗೆ ಅಲಂಕಾರ
ರೈತರ ಪಾಲಿಗೆ ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿ ಪ್ರಯುಕ್ತ ದನಕರುಗಳನ್ನು ತೊಳೆದು ಅಲಂಕಾರ ಮಾಡಲಾಗಿತ್ತು. ನಗರ ಪ್ರದೇಶದಲ್ಲೂ ಗ್ರಾಮೀಣ ಸೊಗಡು ಉಳಿಸಿಕೊಂಡಿರುವ ಕೆ.ಜಿ.ಕೊಪ್ಪಲು, ತೊಣಚಿ ಕೊಪ್ಪಲು, ಕುಂಬಾರ ಕೊಪ್ಪಲು, ಪಡುವಾರಹಳ್ಳಿ ಮುಂತಾದೆಡೆ ಹಬ್ಬ ಕಳೆಗಟ್ಟಿತ್ತು. ಈ ಪ್ರದೇಶಗಳಲ್ಲಿ ಜಾನುವಾರುಗಳನ್ನು ಬೆಳಗ್ಗೆಯೇ ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಬಳಿದು ಸಿಂಗರಿಸಿ ಪೂಜಿಸಿದರು. ಇದರೊಂದಿಗೆ ಗ್ರಾಮಾಂತರ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕಿಚ್ಚು ಹಾಯಿಸುವ ಮೂಲಕ ಸಂಕ್ರಾಂತಿ ಆಚರಣೆ ಮಾಡಲಾಯಿತು.

Makar Sankranti 2023: Mayor celebrated festival with pourakarmikas in Mysuru

ಶ್ರೀರಾಂಪುರದ ಶಿವನ ದೇವಾಲಯದಲ್ಲಿ ಭಕ್ತರಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರು ಎಳ್ಳು-ಬೆಲ್ಲ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಎಂ.ಸುನೀಲ್, ಮುಖಂಡರಾದ ಪರಮೇಶ್, ಮೊಗಣ್ಣಾಚಾರ್, ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+