ಎಚ್.ಡಿ.ಕೋಟೆ ಬೇಗೂರು ವಲಯದಲ್ಲಿ ಗಂಡು ಹುಲಿ ಸಾವು
ಮೈಸೂರು, ಜುಲೈ 21: ಮೈಸೂರಿನ ಎಚ್.ಡಿ.ಕೋಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಎನ್.ಬೇಗೂರು ವಲಯದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
Recommended Video
ತಾಲ್ಲೂಕಿನ ಎನ್.ಬೇಗೂರು ಅರಣ್ಯ ವಲಯದಲ್ಲಿ ಸುಮಾರು 7-8 ವರ್ಷದ ಗಂಡು ಹುಲಿಯೊಂದು ಸಾವನಪ್ಪಿದ್ದು, ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದಾಗಿ ಆಹಾರವನ್ನು ಸೇವಿಸದೆ ಹುಲಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹುಲಿ ಸಾವನ್ನಪ್ಪಿದ ಎರಡು ದಿನಗಳ ಬಳಿಕ ಶವ ಪತ್ತೆಯಾಗಿದೆ. ಈಗಾಗಲೇ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಪರೀಕ್ಷೆಗೆ ಒಳಪಡಿಸಿದೆ. ವರದಿ ಬಂದ ಬಳಿಕ ಸಾವಿನ ಕುರಿತು ನಿಖರ ಮಾಹಿತಿ ತಿಳಿಯಬಹುದು ಎಂದು ಎನ್.ಬೇಗೂರು ವಲಯ ಅರಣ್ಯಧಿಕಾರಿ ಚೇತನ್ ತಿಳಿಸಿದ್ದಾರೆ.

ಶಿರಮಳ್ಳಿ ಗ್ರಾಮದ ಜಮೀನಿನಲ್ಲಿ ಎತ್ತುಗಳ ಮೇಲೆ ಹುಲಿ ದಾಳಿ: ಶಿರಮಳ್ಳಿ ಗ್ರಾಮದ ಸಮೀಪದ ಸಿದ್ದೇಗೌಡರ ಜಮೀನಿನಲ್ಲಿ ಮಂಗಳವಾರ ಬೆಳಿಗ್ಗೆ ಹುಲಿಯೊಂದು ಕಾಣಿಸಿಕೊಂಡು, ಜಮೀನಿನಲ್ಲಿ ಮೇಯಲು ಕಟ್ಟಿಹಾಕಿದ್ದ ಎತ್ತುಗಳ ಮೇಲೆ ದಾಳಿ ನಡೆಸಿದೆ.
ಜಮೀನಿನಲ್ಲಿ ಸಿದ್ದೇಗೌಡ ಅವರ ಮಗ ಬಸವರಾಜು ಅವರನ್ನು ನೋಡುತ್ತಿದ್ದಂತೆ ಹುಲಿ ಮುಸುಕಿನ ಜೋಳದ ಬೆಳೆಯ ನಡುವೆ ಪರಾರಿಯಾಗಿದೆ. ಬಸವರಾಜು ಅವರು ಕೂಡಲೇ ಅರಣ್ಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ನಂತರ ಅರಣ್ಯಾಧಿಕಾರಿ ಸುರೇಂದ್ರ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದಾಗ ಹುಲಿಯ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದೀಗ ರೈತರಲ್ಲಿ ಆತಂಕ ಉಂಟಾಗಿದ್ದು, ಜಮೀನಿಗೆ ತೆರಳಲು ಹಿಂಜರಿಯುವಂತಾಗಿದೆ.
ಹುಲಿಯನ್ನು ಸೆರೆಹಿಡಿಯಲು ಬೋನು ಇಟ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ರೈತರಲ್ಲಿ ಧೈರ್ಯ ತುಂಬಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications