ಮುಡುಕುತೊರೆಯಲ್ಲಿ ವೈಭವದ ಬ್ರಹ್ಮರಥೋತ್ಸವ
ಮುಡುಕುತೊರೆಯಲ್ಲಿ ನಡೆದ ಮಲ್ಲಿಕಾರ್ಜುನ ಸ್ವಾಮಿಯ ವೈಭವದ ಬ್ರಹ್ಮರಥೋತ್ಸವವನ್ನು ಭಾವ ಪರವಶರಾಗಿ ಭಕ್ತರು ಕಣ್ತುಂಬಿಕೊಂಡರು. ಉತ್ಸವ ಹೊರಟ ರಥಕ್ಕೆ ಹಣ್ಣು, ದವನ ಅರ್ಪಿಸಿ ಪ್ರಾರ್ಥಿಸಿದರು.
ಮೈಸೂರು, ಫೆಬ್ರವರಿ 6: ದಕ್ಷಿಣ ಭಾರತದ ಸೋಮಶೈಲ ಖ್ಯಾತಿಯ ಪವಿತ್ರ ಕ್ಷೇತ್ರ ಮುಡುಕುತೊರೆಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ ಸೋಮವಾರ ಅದ್ಧೂರಿಯಾಗಿ ನಡೆಯಿತು.
ಬೆಳಗ್ಗಿನಿಂದಲೇ ಜನ ಮುಡುಕುತೊರೆಯಲ್ಲಿ ಜಮಾವಣೆಗೊಂಡು ಬ್ರಹ್ಮರಥೋತ್ಸವವನ್ನು ಕಣ್ತುಂಬಿಸಿಕೊಳ್ಳಲು ಕಾತರದಿಂದ ಕಾಯುತ್ತಿದ್ದರು. ಅದರಂತೆ ಮಾಘಶುದ್ಧ ದಶಮಿ ರೋಹಿಣಿ ನಕ್ಷತ್ರದ ಸೋಮವಾರ ಮಧ್ಯಾಹ್ನ ಉತ್ಸವ ಮೂರ್ತಿ ಅಲಂಕಾರಗೊಂಡಿದ್ದ ರಥದಲ್ಲಿ ಶ್ರೀ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯನ್ನು ಪ್ರತಿಷ್ಠಾಪಿಸಿ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.[ಮುಡುಕುತೊರೆ ಜಾತ್ರೆಯಲ್ಲಿ ಏನೇನಿದೆ ಗೊತ್ತಾ?]

ಭಕ್ತ ಸಾಗರದ ಹರ್ಷೋದ್ಗಾರಗಳ ನಡುವೆ ವೈಭವದ ಗಾಂಭೀರ್ಯದಿಂದ ಸಾಗಿಬಂದ ರಥಕ್ಕೆ ನೆರೆದಿದ್ದ ಭಕ್ತರೆಲ್ಲರೂ ಹಣ್ಣು ದವನ ಎಸೆದು ಮನದಲ್ಲಿನ ಹರಕೆಯನ್ನು ಈಡೇರಿಸುವಂತೆ ಪ್ರಾರ್ಥಿಸಿದರು. ಶ್ರೀ ಗಣೇಶ ಹಾಗೂ ಶ್ರೀ ಸುಬ್ರಮಣ್ಯರ ರಥಗಳು ಸಾಗಿದ ನಂತರ ಶ್ರೀ ಭ್ರಮರಾಂಬ ಶ್ರೀ ಮಲ್ಲಿಕಾರ್ಜುನಸ್ವಾಮಿಯ ರಥ ಸಾಗಿತು. ಪಶ್ಚಿಮಾಭಿಮುಖವಾಗಿ ಚಲಿಸಿದ ರಥ ಉತ್ತರಾಭಿಮುಖವಾಗಿ ತಿರುಗಿ ಪೂರ್ವ ದಿಕ್ಕಿನೆಡೆಗೆ ಯಾವುದೇ ಅಡೆತಡೆಯಿಲ್ಲದೆ ಸಾಗಿ ಸ್ವಸ್ಥಾನಕ್ಕೆ ಮರಳಿತು.
ರಥೋತ್ಸವದ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಶ್ರೀ ಭ್ರಮರಾಂಬಿಕಾ ಹಾಗೂ ಶ್ರೀ ಮಲ್ಲಿಕಾರ್ಜುನಸ್ವಾಮಿಗೆ ಗಿರಿಜಾ ಕಲ್ಯಾಣದ ಪೂರ್ವಕ ಪ್ರಾಂತಃಕಾಲದಿಂದಲೇ ಶೈವ ಪುಣ್ಯಹ, ಪಂಚಾಮೃತ ಅಭಿಷೇಕ, ಏಕವಾರ ರುದ್ರ ಪಾರಾಯಣ, ಅಮ್ಮನವರಿಗೆ ದೇವಿ ಪಾರಾಯಣ, ವಿಶೇಷ ಅಲಂಕಾರ ವಿಶೇಷ ಪೂಜೆಗಳು ಜರುಗಿದವು.[ಸಾಗರ ಮಾರಿಕಾಂಬ ಜಾತ್ರೆ ಫೆಬ್ರವರಿ 14 ರಿಂದ ಆರಂಭ]
ಕಾವೇರಿ ನದಿ ತೀರದಲ್ಲಿ ಮುತೈದೆಯರು ಕಳಸ ಪೂಜೆಯನ್ನು ಸಲ್ಲಿಸಿ, ಮುತ್ತೈದೆ ಭಾಗ್ಯ ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸಿದರೆ, ಹರಕೆ ಹೊತ್ತಿದ್ದ ಭಕ್ತರು ಅರವಂಟಿಕೆಗಳನ್ನು ಮಾಡಿ ಬಿಸಿಲಿನಿಂದ ದಣಿದವರ ದಾಹಕ್ಕೆ ಮಜ್ಜಿಗೆ ಹಂಚಿದರು. ಫೆ.9ರ ಗುರುವಾರ ಸರಿರಾತ್ರಿಯಲ್ಲಿ ತೆಪ್ಪೋತ್ಸವ ಹಾಗೂ 14ರ ಮಂಗಳವಾರ ಪರ್ವತ ಪರಿಷೆ(ಬಸವನ ಮಾಲೆ) ನಡೆಯಲಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications