ರಾಮನವಮಿ; ಮಾಸ್ಕ್ ವಿತರಿಸಿದ ರಾಮವೇಷಧಾರಿ!
ಮೈಸೂರು, ಏಪ್ರಿಲ್ 21; ಕೋವಿಡ್ ಮಹಾಮಾರಿ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸದಿದ್ದರೆ ಜನ ಪಾನೀಯ, ಮಜ್ಜಿಗೆ ವಿತರಿಸಿ ರಾಮನವಮಿಯನ್ನು ಆಚರಣೆ ಮಾಡುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ರಾಮನವಮಿಗೆ ಕೊರೊನಾದ ವಿಘ್ನ ಕಾಡುತ್ತಿದೆ.
ರಾಮನವಮಿಯಂದು ಬಿಸಿಲಿನ ಬೇಗೆಗೆ ಬಸವಳಿದ ಮಂದಿಗೆ ಪಾನಕ, ಮಜ್ಜಿಗೆ, ಕೋಸುಂಬರಿ ನೀಡಿ ತಂಪಾಗಿಸುವ ಕೆಲಸವನ್ನು ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅದರ ಬದಲಿಗೆ ಜನರಲ್ಲಿ ಕೋವಿಡ್ ಸೋಂಕಿನ ಕುರಿತಂತೆ ಜಾಗೃತಿ ಮೂಡಿಸುವ ಕೆಲಸವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಡಲಾಗುತ್ತಿದೆ.
ಶ್ರೀ ರಾಮನವಮಿ ಅಂಗವಾಗಿ ಮೈಸೂರು ಯುವ ಬಳಗದ ವತಿಯಿಂದ ನಾರಾಯಣ ಶಾಸ್ತ್ರಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿಭಿನ್ನವಾಗಿ ಕೊರೊನಾ ಜಾಗೃತಿ ಮೂಡಿಸಲಾಗುತ್ತಿದೆ. ಪೌರಾಣಿಕ ಕಲಾವಿದರಾದ ಸುತ್ತೂರಿನ ಹೊಸಕೋಟೆ ಶಿವಮಲ್ಲು ರಾಮನ ವೇಷ ಧರಿಸಿ ಮಾಸ್ಕ್ ಧರಿಸದವರಿಗೆ ಮಾಸ್ಕ್ ಬಗೆಗೆ ಅರಿವು ಮೂಡಿಸುವುದರೊಂದಿಗೆ ಮಾಸ್ಕ್ ವಿತರಣೆ ಮಾಡಿ ಗಮನಸೆಳೆದಿದ್ದಾರೆ.

ಈ ವೇಳೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಹಾಗೂ ಮೈಸೂರು ಯುವ ಬಳಗದ ಅಧ್ಯಕ್ಷರಾದ ಎಂ. ಎನ್. ನವೀನ್ ಕುಮಾರ್ ಮಾತನಾಡಿ, "ಪಿತೃವಾಕ್ಯ ಪರಿಪಾಲನೆಗಾಗಿ 14 ವರ್ಷ ವನವಾಸ ಅನುಭವಿಸಿ, ಪ್ರಜೆಗಳನ್ನು ದೇವರಂತೆ ಕಂಡ ಶ್ರೀರಾಮ ನಮ್ಮೆಲ್ಲರ ಆದರ್ಶ ಪುರುಷನಾಗಿದ್ದಾನೆ. ಹೀಗಾಗಿ ಶ್ರೀ ರಾಮನ ವೇಷ ಧರಿಸಿ ಜಾಗೃತಿ ಮೂಡಿಸುತ್ತಿದ್ದೇವೆ. ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿರ್ಮೂಲನೆಗೆ ಜನ ನಿರ್ಲಕ್ಷ್ಯ ಮಾಡದೇ ಮಾಸ್ಕ್ ಧರಿಸಬೇಕು, ಲಸಿಕೆ ಪಡೆಯಬೇಕು, ಸಾಮಾಜಿಕ ಅಂತರ ಕಾಪಾಡಬೇಕು" ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ನಿರ್ದೇಶಕಿ ರೇಣುಕಾ ರಾಜ್, ಪರಮೇಶ್ ಗೌಡ, ವಿಕ್ರಂ ಅಯ್ಯಂಗಾರ್, ಲೋಹಿತ್, ನವೀನ್, ಪ್ರಮೋದ್ ಗೌಡ, ಕಾಂತಿಲಾಲ್ ಜೈನ್, ಕಿರಣ್, ರವಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಜನರಲ್ಲಿ ಜಾಗೃತಿ ಮೂಡಿಸಿದರು.
-
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications