ಕರ್ನಾಟಕದ ಮಾನಸ ಸರೋವರ ಯಾತ್ರಿಕರು ಸುರಕ್ಷಿತ
ಮೈಸೂರು, ಜುಲೈ 03: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.
ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಗಳು ಸಂಕಷ್ಟದಲ್ಲಿ
ನೇಪಾಳದ ಸಿಮಿಕೋಟ್ ನಲ್ಲಿ ನಾಲ್ಕು ದಿನಗಳಿಂದ ಸಿಲುಕಿಕೊಂಡಿರುವ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಯಾವುದೇ ರೀತಿಯ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಗೆ ತೆರಳಾಲಗದೆ ಜನರು, ಶಿಬಿರವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು.
ಮಾನಸ ಸರೋವರಕ್ಕೆ ತೆರಳಿದ ಕನ್ನಡಿಗರಿಗೆ ಇಲ್ಲಿದೆ ಸಹಾಯವಾಣಿ
Nepal: Indian Embassy in Nepal has pressed in service of a medical personnel to do check up & medical aid of 250 pilgrims stranded in Simikot. The pilgrims who were on pilgrimage to Kailash Mansarovar have been stranded in Simikot due to inclement weather condition in the area. pic.twitter.com/WYki5DZbeO
— ANI (@ANI) July 3, 2018
ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಅಭಿರಾಮ್, 'ನಾವು ದೆಹಲಿಯಲ್ಲಿರುವ ನೇಪಾಳ ರಾಯಭಾರ ಕಚೇರಿ ಜೊತೆ ನಿರಂತರ ಸಂಪರ್ದಕದಲ್ಲಿದ್ದೇವೆ. ಎಲ್ಲ ಯಾತ್ರಿಕರೂ ಸುರಕ್ಷಿತವಾಗಿದ್ದಾರೆ. ಆತಂಕ ಬೇಡ' ಎಂದು ತಿಳಿಸಿದ್ದಾರೆ.
ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಮಿಕಾಟ್ ಗೆ ತೆರಳಿ ಯಾತ್ರಿಕರ ವೈದ್ಯಕೀಯ ತಪಾಸಣೆ ಮಾಡುತ್ತಿದೆ.