ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿರುವ ಮಾವು – ಹಲಸು ಮೇಳ
ಮೈಸೂರು, ಜೂನ್ 1 : ಈಗ ಎಲ್ಲೆಲ್ಲೂ ಹಣ್ಣುಗಳ ರಾಜ ಮಾವಿನದ್ದೇ ಸುದ್ದಿ. ಬಾಯಿಗೆ ರುಚಿ ಜೊತೆಗೆ ಆರೋಗ್ಯಕ್ಕೂ ಉತ್ತಮವಾದ ಈ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ, ಇತ್ತೀಚೆಗೆ ಕೆಮಿಕಲ್ ಕಾಟ, ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ.
ಇದನ್ನು ತಪ್ಪಿಸಿ ಮಧ್ಯವರ್ತಿಗಳಿಗೆ ಅವಕಾಶ ಕೊಡದೆ ರೈತರಿಂದ ಗ್ರಾಹಕರಿಗೆ ನೇರ ಶುಚಿ ಮತ್ತು ರುಚಿಯಾದ ಹಣ್ಣನ್ನು ತಲುಪಿಸುವ ದೃಷ್ಟಿಯಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾವಿನ ಮೇಳ ನಡೆಸಲಾಗುತ್ತಿದೆ.
ತೋಟಗಾರಿಕಾ ಇಲಾಖೆ ವತಿಯಿಂದ ಇಂದಿನಿಂದ ಅರಮನೆಯ ಬಳಿಯ ಕರ್ಜನ್ ಪಾರ್ಕ್ ಆವರಣದಲ್ಲಿ ಮಾವು ಹಾಗೂ ಹಲಸು ಮೇಳ ಆರಂಭಿಸಲಾಗಿದೆ.

ಬಾದಾಮಿ, ರಸಪೂರಿ, ಸಿಂಧೂರ, ಮಲಗೋವ, ಮಲ್ಲಿಕಾ, ನೀಲಂ, ಬಂಗನಪಲ್ಲಿ, ಬೆನಿಷಾ, ಕೇಸರ್, ಐಶ್ವರ್ಯ, ಸಕ್ಕರ ಬುತ್ತಿ ಹಾಗೂ ಸಕ್ಕರೆ ಗೂಟ್ಲಾ, ಸೀಬಾ ಸೇರಿದಂತೆ 15ಕ್ಕೂ ಹೆಚ್ಚು ತಳಿಯ ಹಳ್ಳಿಗಳು ಮೇಳದಲ್ಲಿ ಗ್ರಾಹಕರನ್ನ ಕೈಬಿಸಿ ಕರೆಯುತ್ತಿವೆ.
ಒಂದೇ ಸೂರಿನಡಿ ತರಹೇವಾರಿ ಮಾವನ್ನು ಖರೀದಿಸಲು ಗ್ರಾಹಕರು ಸಹ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಪ್ರವಾಸಿಗರು ಕೂಡಾ ಮೇಳದತ್ತ ಆಕರ್ಷಿತರಾಗುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ.

ಅಂದಹಾಗೆ ಮಾವು ಬೆಳೆಯಲ್ಲಿ ವಿಶ್ವದಲ್ಲಿಯೇ ಭಾರತ ದ್ವಿತೀಯ ಸ್ಥಾನದಲ್ಲಿದ್ದು, ಭಾರತದಲ್ಲಿ ಸುಮಾರು 4 ಸಾವಿರ ವರ್ಷಗಳಿಂದಲೂ ಮಾವು ಬೆಳೆಯಲಾಗುತ್ತಿದೆ. ಇನ್ನು ನೂರೈವತ್ತಕ್ಕೂ ಹೆಚ್ಚು ತಳಿಯ ಹಣ್ಣುಗಳಿಗೆ ತವರೂರಾಗಿದೆ.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಜಿಲ್ಲೆಗಳ ಮಾವು ತಳಿಗಳ ಜೊತೆಯಲ್ಲಿ ಬೇರೆ ರಾಜ್ಯದ ಮಾವುಗಳನ್ನು ಕೂಡ ಈ ಮೇಳದಲ್ಲಿ ಕಾಣಬಹುದಾಗಿದೆ. ಸೀಜನಲ್ ಹಣ್ಣುಗಳನ್ನು ಹೆಚ್ಚಾಗಿ ಸೇವನೆ ಮಾಡುವುದರ ಮೂಲಕ ಮಾವು ಬೆಳಗಾರರಿಗೆ ನೆರವಾಗಬೇಕು ಎಂದು ಹೇಳಿದರು.

ನಿಪಾಹ್ ವೈರಸ್ ಬಗ್ಗೆ ಎಲ್ಲ ರೀತಿಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅತಂಕವಿಲ್ಲದೆ ಜನತೆ ಮಾವು ಸೇವನೆ ಮಾಡಬಹುದಾಗಿದೆ. ಕೃತಕವಾಗಿ ಮಾವುಗಳನ್ನು ಮಾಗಿಸದೆ ಮಾವುಗಳನ್ನು ನೈಸರ್ಗಿಕವಾಗಿ ಮಾಗಿಸಲಾಗಿದ್ದು ಕೃತಕವಾಗಿ ಮಾಗಿಸಿ ಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು.
ನಿಪಾಹ್ ವೈರಸ್ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಗೊಂದಲ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಮಾವಿನ ಹಣ್ಣಿನ ಜೊತೆ -ಜೊತೆಗೆ ಮೂಗಿಗೆ ಘಮ್ಮೆನಿಸುವ ಹಲಸು ಹಾಗೂ ಅದರಿಂದ ತಯಾರಿಸಲ್ಪಡುವ ಹಪ್ಪಳ, ಚಿಪ್ಸ್ ಗಳು ನೋಡುಗರನ್ನು ಕೈ ಬೀಸಿ ಕರೆಯುತ್ತಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications